Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಚಾರ್ಲಿ ಕಿರ್ಕ್ ಹತ್ಯೆ ಶಂಕಿತ ವ್ಯಕ್ತಿಯ ಮೊದಲ ಪೋಟೋ ಬಿಡುಗಡೆ ಮಾಡಿದ FBI | Charlie Kirk Murder Case

11/09/2025 10:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: DKS
KARNATAKA

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ, ಜನ ಜಾಗೃತರಾಗಿರುವಂತೆ ದೇವೇಗೌಡರು ಸಂದೇಶ ನೀಡಿದ್ದಾರೆ: DKS

By kannadanewsnow0911/11/2024 2:38 PM

ಬೆಂಗಳೂರು : “ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ” ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು” ಎಂದು ತಿಳಿಸಿದರು.

ಮೂರಕ್ಕೆ ಮೂರು ಕ್ಷೇತ್ರ ಗೆಲ್ಲುತ್ತೇವೆ:

ಉಪಚುನಾವಣೆ ತಯಾರಿ ಬಗ್ಗೆ ಕೇಳಿದಾಗ, “ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವನೇಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಲ್ಲಿ ಪ್ರಚಾರ ಮುಗಿಸಿದ್ದೇವೆ. ಬಿಜೆಪಿ ಏನೇ ತಂತ್ರ ಪ್ರಯೋಗಿಸಿದರೂ ಜನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿಗಳ ದಾರಿತಪ್ಪಿಸಿದ್ದಾರೆ

ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪದ ಬಗ್ಗೆ ಕೇಳಿದಾಗ, “ಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು?” ಎಂದು ಹೇಳಿದರು.

ದ್ವೇಷ ರಾಜಕಾರಣ ಮಾಡುತ್ತಿರುವುದು ಬಿಜೆಪಿ

ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ” ಎಂದು ಕಿಡಿಕಾರಿದರು.

ವಯನಾಡಿನಲ್ಲಿ ಪ್ರಿಯಾಂಕಾ ಗೆಲವು

ವಯನಾಡಿನ ಉಪಚುನಾವಣೆ ಬಗ್ಗೆ ಕೇಳಿದಾಗ, “ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ. ಅಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಪ್ರಿಯಾಂಕಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ಅವರನ್ನು ಸಂಸತ್ ಸದಸ್ಯೆಯಾಗಿ ನೋಡಲು ಬಯಸಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದಾರೆ. ಅಲ್ಲಿನ ಉಪಚುನಾವಣೆ ಏಕಪಕ್ಷೀಯ ಸ್ಪರ್ಧೆಯಾಗಿದೆ” ಎಂದು ತಿಳಿಸಿದರು.

BIG NEWS : ಸೈಬರ್ ವಂಚನೆ ತಡೆಗೆ `TRAI’ನಿಂದ ಮಹತ್ವದ ಕ್ರಮ : ದೇಶಾದ್ಯಂತ 18 ಲಕ್ಷ ಮೊಬೈಲ್ ಸಂಖ್ಯೆ ನಿರ್ಬಂಧ!

BREAKING: ನ.14ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

Share. Facebook Twitter LinkedIn WhatsApp Email

Related Posts

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM1 Min Read

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM1 Min Read

ಶಿವಮೊಗ್ಗ: ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಕವನ ಸಂಕಲನಕ್ಕೆ ‘ಕಾವ್ಯಸಿರಿ ರಾಷ್ಟ್ರೀಯ ಪುರಸ್ಕಾರ’

11/09/2025 9:41 PM1 Min Read
Recent News

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಚಾರ್ಲಿ ಕಿರ್ಕ್ ಹತ್ಯೆ ಶಂಕಿತ ವ್ಯಕ್ತಿಯ ಮೊದಲ ಪೋಟೋ ಬಿಡುಗಡೆ ಮಾಡಿದ FBI | Charlie Kirk Murder Case

11/09/2025 10:18 PM

SHOCKING : ಪತ್ನಿ ಮತ್ತು ಆಕೆಯ ಪ್ರಿಯಕರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿ

11/09/2025 10:11 PM
State News
KARNATAKA

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

By kannadanewsnow0911/09/2025 10:50 PM KARNATAKA 1 Min Read

ಶಿವಮೊಗ್ಗ: ಇಂದು ರಾಷ್ಟ್ರೀಯ ಹುತಾತ್ಮರ ದಿನದಂದೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ…

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಶಿವಮೊಗ್ಗ: ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಕವನ ಸಂಕಲನಕ್ಕೆ ‘ಕಾವ್ಯಸಿರಿ ರಾಷ್ಟ್ರೀಯ ಪುರಸ್ಕಾರ’

11/09/2025 9:41 PM

ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

11/09/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.