Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

22/04/2026 1:06 PM

ಬಿಸಿಲಿನ ಬೇಗೆಯಿಂದ ಸುಸ್ತಾಗುತ್ತಿದ್ದೀರಾ? ಇಡೀ ದಿನ ಲವಲವಿಕೆಯಿಂದ ಇರಲು ಇಲ್ಲಿವೆ ಸಿಂಪಲ್ ಟಿಪ್ಸ್!

22/04/2026 12:59 PM

ಹಸುವಿನ ತುಪ್ಪ Vs ಎಮ್ಮೆಯ ತುಪ್ಪ: ಆರೋಗ್ಯಕ್ಕೆ ಯಾವುದು ಶ್ರೇಷ್ಠ? ನಿಮಗಾಗಿ ಇಲ್ಲಿದೆ ಕಂಪ್ಲೀಟ್ ಗೈಡ್!

22/04/2026 12:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ: ಛಲವಾದಿ ನಾರಾಯಣಸ್ವಾಮಿ
KARNATAKA

ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ: ಛಲವಾದಿ ನಾರಾಯಣಸ್ವಾಮಿ

By kannadanewsnow0912/11/2024 3:11 PM

ಬೆಂಗಳೂರು: ಕಾಂಗ್ರೆಸ್ ಸರಕಾರವು 38 ಇಲಾಖೆಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೆಲ್ಲವನ್ನೂ ನಮ್ಮ ಮುಖಂಡರು ಒಂದೊಂದಾಗಿ ಬೆಳಕಿಗೆ ತರುತ್ತಿದ್ದಾರೆ. ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬವು ಮುಡಾದ 14 ನಿವೇಶನ ವಾಪಸ್ ಮಾಡಿದ್ದು, ಪ್ರಿಯಾಂಕ್ ಖರ್ಗೆಯವರು 5 ಎಕರೆ ವಾಪಸ್ ಮಾಡಿದ್ದರಿಂದ ಭ್ರಷ್ಟಾಚಾರ ಸಾಬೀತಾಗಿದೆ. ಅದರ ತನಿಖೆ ಏನಿದ್ದರೂ ನಿಮ್ಮ ಕಸರತ್ತು ಅಷ್ಟೇ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರೇ, ನೀವು ಮಾತನಾಡುವಾಗ ಯಾವ ಮಟ್ಟಕ್ಕೆ ಹೋಗುತ್ತೀರಿ? ಪ್ರಧಾನಿಯವರ ಯೋಗ್ಯತೆ, ತಮ್ಮ ಯೋಗ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ವಯಸ್ಸು, ಅಧಿಕಾರದಲ್ಲಿ ನೀವು ಅವರ ಮಟ್ಟಕ್ಕಿದ್ದರೆ ಅವರನ್ನು ಪ್ರಶ್ನೆ ಮಾಡುವುದರಲ್ಲಿ ಅರ್ಥವಿದೆ. ಸಣ್ಣಸಣ್ಣ ವ್ಯಕ್ತಿಗಳೂ ಪ್ರಧಾನಮಂತ್ರಿಗಳನ್ನು ಕೀಳು ಭಾಷೆಯಲ್ಲಿ ಮಾತನಾಡುವುದು ಎಷ್ಟು ಸರಿ? ಎಂದು ಕೇಳಿದರು.

ಈಚೆಗೆ ವೈನ್ ಮರ್ಚೆಂಟ್ ಅಸೋಸಿಯೇಶನ್‍ನವರು ಒಂದು ಆಪಾದನೆ ಮಾಡಿದ್ದಾರೆ. ಸುಮಾರು 500 ಕೋಟಿಗಳಷ್ಟು ಹಣವನ್ನು ಅಬಕಾರಿ ಸಚಿವರು ವಸೂಲಿ ಮಾಡಿದ್ದಾಗಿ ಅವರೇ ಹೇಳಿದ್ದಾರೆ. ಬಳಿಕ ಸುಲಿಗೆ ನಮ್ಮ ಗಮನಕ್ಕೂ ಬಂದಿದ್ದು, 700 ಕೋಟಿ ಲೂಟಿಯಾಗಿದೆ ಎಂದು ನಾವು ತಿಳಿಸಿದ್ದೆವು. ಇದು ಚುನಾವಣೆ ನಡೆಯುವ ಕಾರಣ ನಡೆದಿದೆ. ಈ ವಿಚಾರವನ್ನು ನಮ್ಮ ಪ್ರಧಾನಿಗಳು ಮಹಾರಾಷ್ಟ್ರದ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.

ಲಂಚದ ಹಣ ಎಲ್ಲಿ ಹೋಗುತ್ತದೆ?

ವೈನ್ ಮರ್ಚೆಂಟ್‍ಗಳಿಗೆ ಆಗುವ ತೊಂದರೆಗಳನ್ನು ಮುಂದಿಟ್ಟುಕೊಂಡು 25ರಂದು ಇಡೀ ರಾಜ್ಯದಲ್ಲಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕಿ ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಹೊಸದಾಗಿ ಲೈಸನ್ಸ್ ಪಡೆಯಲು 4.50 ಲಕ್ಷ ರೂ. ಸರಕಾರಿ ಶುಲ್ಕ ಕಟ್ಟಬೇಕಿದೆ. ಹೊಸ ಲೈಸನ್ಸ್ ಪಡೆಯಲು 70-80 ಲಕ್ಷ ಖರ್ಚಾಗುತ್ತದೆ. ಇದು ಎಲ್ಲಿ ಹೋಗುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.

ಒಂದು ವರ್ಷಕ್ಕೆ ಲೈಸನ್ಸ್ ನವೀಕರಿಸಲು 4.60 ಲಕ್ಷ ರೂ. ಕಟ್ಟಬೇಕು. 6 ಲಕ್ಷ ಲಂಚ ಕೊಡಬೇಕು. ಇದು ಎಲ್ಲರಿಗೂ ಗೊತ್ತಿರುವ ಸತ್ಯ. ಇದಾದ ನಂತರ ಏನೇ ದೂರುಗಳಿಲ್ಲದಿದ್ದರೂ ಒಂದು ಬಾರ್ ಅಂಡ್ ರೆಸ್ಟೋರೆಂಟ್ ಅಥವಾ ಒಂದು ಮದ್ಯದ ಅಂಗಡಿಯವರ ಮೇಲೆ ಇಲಾಖೆಯು 2 ಕೇಸ್ ಕಡ್ಡಾಯವಾಗಿ ಹಾಕುತ್ತದೆ. ಆಪಾದನೆ ತಪ್ಪಿಸಲು ಕೇಸ್ ಹಾಕುವುದಲ್ಲದೆ, 2 ಸಾವಿರ ರೂ. ದಂಡ, 25 ಸಾವಿರ ಲಂಚ ಕೇಳುತ್ತಾರೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆ ಹಗರಣವನ್ನು ಅಲ್ಲಗಳೆಯುವ ಭರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಭ್ರಷ್ಟಾಚಾರ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ. ಗುತ್ತಿಗೆದಾರರ ಸಂಘದವರು ಬಿಜೆಪಿ ಸರಕಾರ ಶೇ 40 ವಸೂಲಿ ಮಾಡುತ್ತಿದೆ ಎಂದು ಆಪಾದಿಸಿದ್ದರಲ್ಲವೇ? ಅದನ್ನು ಅವರು ಸಾಬೀತು ಪಡಿಸಿದ್ದಾರಾ? ನೀವು ಅದನ್ನು ಚುನಾವಣಾ ಮುಖ್ಯ ವಿಷಯ ಮಾಡಿಕೊಂಡಿರಲ್ಲವೇ? ಇದುವರೆಗೂ ಅದನ್ನು ಸಾಬೀತುಪಡಿಸಲು ನಿಮಗೆ ಆಗಿದೆಯೇ ಎಂದು ಪ್ರಶ್ನೆಗಳನ್ನು ಕೇಳಿದರು.

ಗುತ್ತಿಗೆದಾರರ ಸಂಘ ಸತ್ಯ ಹೇಳಿದ್ದೆಂದು ತಿಳಿಸುವ ಮತ್ತು ನಂಬುವ ಮುಖ್ಯಮಂತ್ರಿಗಳು ವೈನ್ ಮರ್ಚೆಂಟ್ ಅಸೋಸಿಯೇಶನ್‍ನ ಆರೋಪವನ್ನು ಅಲ್ಲಗಳೆಯಲು ಕಾರಣ ಏನಿದೆ? ಎಂದು ಕೇಳಿದರಲ್ಲದೆ, ಸಿದ್ದರಾಮಯ್ಯನವರು ಭ್ರಷ್ಟಾಚಾರದ ಪಿತಾಮಹ ಎಂದು ಆರೋಪಿಸಿದರು. ಮಾಡುವುದನ್ನು ಮಾಡಿ ಅದನ್ನು ಮರೆಮಾಚುವ ಪರಿಪಾಠವನ್ನು ಸಿಎಂ ಅವರು ಮೈಗೂಡಿಸಿಕೊಂಡಿದ್ದಾರೆ. ಪತ್ರಕರ್ತರು ಪ್ರಶ್ನಿಸಿದರೆ, ನೀನ್ಯಾರು ಕೇಳಲಿಕ್ಕೆ ಎನ್ನುತ್ತಾರೆ. ಪತ್ರಕರ್ತರು ಇರುವುದೇ ಸತ್ಯಾಂಶಗಳನ್ನು ಹೊರಕ್ಕೆ ತರಲು ಎಂದು ಗಮನ ಸೆಳೆದರು.

ಭ್ರಷ್ಟಾಚಾರ ಮಾಡುವುದೇ ಅಬಕಾರಿ ಇಲಾಖೆ- ಸಚಿವರ ಕೆಲಸ. ಡಿ.ಸಿ.ಗಳು, ಎ.ಸಿಗಳಿಗೆ ವರ್ಗಾವಣೆಗೂ ಹಣ ನಿಗದಿಯಾಗಿದೆ ಎಂದು ದೂರಿದರು. ಮದ್ಯಪಾನ ಸಂಯಮ ಮಂಡಳಿ ಕುಡಿಯಬಾರದೆಂದು ಗಾಂಧೀಜಿ ತತ್ವಗಳನ್ನು ಮುಂದಿಟ್ಟರೆ, ಸರಕಾರ ಅಬಕಾರಿ ಇಲಾಖೆಗೆ ಹೆಚ್ಚು ಮಾರಾಟದ, ಹಣ ಸಂಗ್ರಹದ ವಿಚಾರದಲ್ಲಿ ತನ್ನ ಗುರಿ ನಿಗದಿ ಮಾಡುತ್ತದೆ ಎಂದು ಟೀಕಿಸಿದರು.

3 ಉಪ ಚುನಾವಣೆಗಳಲ್ಲಿ ಹೆಂಡದ ಹಣದ ಹೊಳೆ

ಶ್ರೀಮಂತರು ಹೇಗೋ ಕುಡಿದುಕೊಳ್ಳುತ್ತಾರೆ. ಬಡವರು ಇಲ್ಲಿ ಟಾರ್ಗೆಟ್ ಆಗುತ್ತಾರೆ. ಗ್ಯಾರಂಟಿ ಜಾರಿ ಕುರಿತು ಹೇಳಿ ಮದ್ಯದ ಬೆಲೆ ಏರಿಸುತ್ತಾರೆ. ವೈನ್ ಮಾರಾಟಗಾರರ ಸಂಘದ ಆಪಾದನೆ ಮೇಲೆ ಸಿಎಂ ಕ್ರಮ ಜರುಗಿಸಿದ್ದಾರಾ? ತಲೆಯನ್ನೇ ಕೆಡಿಸಿಕೊಂಡಿಲ್ಲ. ಈ 3 ಉಪ ಚುನಾವಣೆಗಳಲ್ಲಿ ಹೆಂಡದ ಹಣದ ಹೊಳೆ ಹರಿದಿದೆ. ಕಾಂಗ್ರೆಸ್ಸಿನವರು ಗೆದ್ದೇಗೆಲ್ಲುವುದಾಗಿ ಹೇಳುತ್ತಿದ್ದಾರೆ. ನಿಮ್ಮ ನಾಲಿಗೆಗಳನ್ನು ಎಷ್ಟು ಹರಿಬಿಟ್ಟಿದ್ದೀರೆಂದು ಜನರು ನೋಡುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರಲ್ಲದೆ, ರಾಜ್ಯ ಸರಕಾರದ ಭ್ರಷ್ಟಾಚಾರ, ಹಗರಣಗಳನ್ನು ಬಯಲಿಗೆ ತರುವ ಮೂಲಕ ಆ ಕುರಿತು ಪದೇಪದೇ ಗಮನ ಸೆಳೆಯಲಾಗುತ್ತಿದೆ ಎಂದು ತಿಳಿಸಿದರು.

ಪಕ್ಷದ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಅವರು ಇದ್ದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ಟೆಲಿಸ್ಕೊಪ್ ವಿತರಣೆ’ ಬಗ್ಗೆ ‘ಇಸ್ರೋ ಅಧ್ಯಕ್ಷ ಸೋಮನಾಥ್’ ಶ್ಲಾಘನೆ

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ಟೆಲಿಸ್ಕೊಪ್ ವಿತರಣೆ’ ಬಗ್ಗೆ ‘ಇಸ್ರೋ ಅಧ್ಯಕ್ಷ ಸೋಮನಾಥ್’ ಶ್ಲಾಘನೆ

BREAKING : ನಾನು ಅತ್ಯಾಚಾರ ಮಾಡಿದ್ರೆ ರಕ್ತ ಕಾರಿ ಸಾಯುತ್ತೇನೆ : ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ

Share. Facebook Twitter LinkedIn WhatsApp Email

Related Posts

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

22/04/2026 1:06 PM1 Min Read

ಬಿಸಿಲಿನ ಬೇಗೆಯಿಂದ ಸುಸ್ತಾಗುತ್ತಿದ್ದೀರಾ? ಇಡೀ ದಿನ ಲವಲವಿಕೆಯಿಂದ ಇರಲು ಇಲ್ಲಿವೆ ಸಿಂಪಲ್ ಟಿಪ್ಸ್!

22/04/2026 12:59 PM2 Mins Read

ಹಸುವಿನ ತುಪ್ಪ Vs ಎಮ್ಮೆಯ ತುಪ್ಪ: ಆರೋಗ್ಯಕ್ಕೆ ಯಾವುದು ಶ್ರೇಷ್ಠ? ನಿಮಗಾಗಿ ಇಲ್ಲಿದೆ ಕಂಪ್ಲೀಟ್ ಗೈಡ್!

22/04/2026 12:52 PM2 Mins Read
Recent News

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

22/04/2026 1:06 PM

ಬಿಸಿಲಿನ ಬೇಗೆಯಿಂದ ಸುಸ್ತಾಗುತ್ತಿದ್ದೀರಾ? ಇಡೀ ದಿನ ಲವಲವಿಕೆಯಿಂದ ಇರಲು ಇಲ್ಲಿವೆ ಸಿಂಪಲ್ ಟಿಪ್ಸ್!

22/04/2026 12:59 PM

ಹಸುವಿನ ತುಪ್ಪ Vs ಎಮ್ಮೆಯ ತುಪ್ಪ: ಆರೋಗ್ಯಕ್ಕೆ ಯಾವುದು ಶ್ರೇಷ್ಠ? ನಿಮಗಾಗಿ ಇಲ್ಲಿದೆ ಕಂಪ್ಲೀಟ್ ಗೈಡ್!

22/04/2026 12:52 PM

BREAKING : ಕರ್ನಾಟಕ ‘SSLC’ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Result 2026

22/04/2026 12:46 PM
State News
KARNATAKA

ಮುಖದ ಮೇಲಿನ ಕಪ್ಪು ಕಲೆ ಸಮಸ್ಯೆಗೆ ಆಲೂಗಡ್ಡೆ ರಸವೇ ರಾಮಬಾಣ.!

By kannadanewsnow5722/04/2026 1:06 PM KARNATAKA 1 Min Read

ಇಂದಿನ ಧೂಳು, ಮಾಲಿನ್ಯ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಅನೇಕರು ಮುಖದ ಮೇಲೆ ಕಪ್ಪು ಕಲೆಗಳು ಅಥವಾ ‘ಜೈಯೋಂ’ (Pigmentation) ಸಮಸ್ಯೆಯನ್ನು…

ಬಿಸಿಲಿನ ಬೇಗೆಯಿಂದ ಸುಸ್ತಾಗುತ್ತಿದ್ದೀರಾ? ಇಡೀ ದಿನ ಲವಲವಿಕೆಯಿಂದ ಇರಲು ಇಲ್ಲಿವೆ ಸಿಂಪಲ್ ಟಿಪ್ಸ್!

22/04/2026 12:59 PM

ಹಸುವಿನ ತುಪ್ಪ Vs ಎಮ್ಮೆಯ ತುಪ್ಪ: ಆರೋಗ್ಯಕ್ಕೆ ಯಾವುದು ಶ್ರೇಷ್ಠ? ನಿಮಗಾಗಿ ಇಲ್ಲಿದೆ ಕಂಪ್ಲೀಟ್ ಗೈಡ್!

22/04/2026 12:52 PM

BREAKING : ಕರ್ನಾಟಕ ‘SSLC’ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್ : ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka SSLC Result 2026

22/04/2026 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.