Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಿನಲ್ಲಿ ‘ಚಾಮುಂಡೇಶ್ವರಿ ಚಲೋ’ : ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣಾ ವೇದಿಕೆ ಸದಸ್ಯರು ಪೊಲೀಸ್ ವಶಕ್ಕೆ

09/09/2025 9:44 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸುಲಭವಾಗಿ ಸಿಗಲಿದೆ `ಆದಾಯ ಪ್ರಮಾಣ’ ಪತ್ರ

09/09/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 323 ಅಂಕ ಏರಿಕೆ; 24,850 ರ ಗಡಿ ದಾಟಿದ ‘ನಿಫ್ಟಿ’ |Share Market

09/09/2025 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳನ್ನು ‘ಸಚಿವ ರಾಮಲಿಂಗಾರೆಡ್ಡಿ’ ಲೋಕಾರ್ಪಣೆ
KARNATAKA

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳನ್ನು ‘ಸಚಿವ ರಾಮಲಿಂಗಾರೆಡ್ಡಿ’ ಲೋಕಾರ್ಪಣೆ

By kannadanewsnow0915/11/2024 9:54 PM

ಹುಬ್ಬಳ್ಳಿ: ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ನೂತನ ಬಸ್ಸುಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರು ಲೋಕಾರ್ಪಣೆಗೊಳಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೂತನ ಬಸ್ಸುಗಳ ಲೋಕಾರ್ಪಣೆಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅಪಘಾತ ರಹಿತ ಸೇವೆಗಾಗಿ 43 ಚಾಲಕರಿಗೆ “ಸುರಕ್ಷಾ ಚಾಲಕ” ಬೆಳ್ಳಿ ಪದಕ ಪ್ರದಾನ ಮಾಡಿದರು. ಅಲ್ಲದೇ ಸಂಸ್ಥೆಯ ನೂತನ ಯೋಜನೆಗಳಾದ ಸಾರಿಗೆ ಸಂಜೀವಿನಿ ಯೋಜನೆಯಡಿ ಕಾರವಾರ/ಬೆಳಗಾವಿ/ಗದಗ ಸರ್ಕಾರಿ ವಿಜ್ಞಾನ ಸಂಸ್ಥೆಗಳೊಂದಿಗೆ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಲಾಯಿತು.

ವಾಯವ್ಯ ಸಾರಿಗೆ ಸಂಪದ ಡಿಜಿಟಲ್ ತ್ರೈಮಾಸಿಕ ಪತ್ರಿಕೆಯ ಬಿಡುಗಡೆಯನ್ನು ಮಾಡಿದರು. ಮೃತಪಟ್ಟ ಸಂಸ್ಥೆಯ ನೌಕರರ ಅವಲಂಬಿತರಿಗೆ ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯ ರೂ 5 ಲಕ್ಷ ಮೊತ್ತದ ಚೆಕ್ ವಿತರಣೆ ಮತ್ತು ಸಂಸ್ಥೆಯಲ್ಲಿ ಮೃತಪಟ್ಟ ನೌಕರರ ಅವಲಂಬಿತರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ರೂ 50 ಲಕ್ಷದ ಮೊತ್ತದ ಅಪಘಾತ ವಿಮಾ ಯೋಜನೆಯ ಚೆಕ್ ವಿತರಣೆ ಮಾಡಲಾಯಿತು.

ಕೆನರಾ ಬ್ಯಾಂಕ್ ರವರೊಂದಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮಾ ಯೋಜನೆಯ ಒಡಂಬಡಿಕೆ ಮಾಡಿಕೊಳ್ಳಲಾಯಿತು. ನೌಕರರು ಭವಿಷ್ಯ ನಿಧಿ ಮುಂಗಡಕ್ಕೆ ಅರ್ಜಿ ಸಲ್ಲಿಸುವ ಮತ್ತು ವಾಣಿಜ್ಯ ಮಳಿಗೆಗಳ ಬಾಡಿಗೆ ಮೊತ್ತವನ್ನು UPI ಮೂಲಕ ಪಾವತಿಸುವ ತಂತ್ರಾಂಶಗಳ ಚಾಲನೆ ನೀಡಲಾಯಿತು.

ನೂತನ ಕಿರಿಯ ಸಹಾಯಕ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ಪತ್ರಗಳ ವಿತರಣೆ ಮಾಡಿದರು. 2024-25 ನೇ ಸಾಲಿನ ಅಂತರ ವಿಭಾಗೀಯ ಕ್ರೀಡಾ ಮತ್ತು ಕಲಾ ಚಟುವಟಿಕೆಗಳಲ್ಲಿ ವಿಜೇತರಿಗೆ ಪಾರಿತೋಷಕ ವಿತರಣೆ ಮಾಡಿದರು.

2023-24 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ವೇಳೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಮತ್ತು ಸಂಸ್ಥೆಯ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ ಉಪಸ್ಥಿತಿವಹಿಸಿದ್ದರು.

ಹುಬ್ಬಳ್ಳಿ-ಧಾರವಾಡ (ಪೂರ್ವ) ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ್, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕಿರ್ ಸನದಿ, ಸಂಸ್ಥೆಯ ಉಪಾಧ್ಯಕ್ಷರಾದ ಪೀರಸಾಬ್ ಅ. ಕೌತಾಳ, ಮಾಜಿ ಸಂಸದರಾದ ಐ.ಜಿ.ಸನದಿ, ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಾಜಿ ಅಧ್ಯಕ್ಷರಾದ ವಿ.ಎಸ್.ಪಾಟೀಲ್, ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ, ಭಾ.ಆ.ಸೇ, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಗೋಪಾಲ ಎಂ.ಬ್ಯಾಕೋಡ ಭಾ.ಪೊ.ಸೇ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ.ಎಂ, ಭಾ.ಆ.ಸೇ, ಅವರು ಉಪಸ್ಥಿತರಿದ್ದರು. ಅಲ್ಲದೇ ಸಂಸ್ಥೆಯ ಎಲ್ಲ ಇಲಾಖಾ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು, ಬೆಳ್ಳಿ ಪದಕ ವಿಜೇತ ಚಾಲಕರ ಕುಟುಂಬ ಸದಸ್ಯರು ಹಾಜರಿದ್ದರು.

ನಾಳೆ ‘ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ’ದ ಅಧ್ಯಕ್ಷರು, ರಾಜ್ಯ ಪರಿಷತ್ ಸ್ಥಾನಕ್ಕೆ ಆಯ್ಕೆಗೆ ಚುನಾವಣೆ

ಐಪಿಎಲ್ 2025 ಮೆಗಾ ಹರಾಜು: ಇಲ್ಲಿದೆ 2 ಕೋಟಿ ಮೂಲ ಬೆಲೆ ಹೊಂದಿರುವ 81 ಆಟಗಾರರ ಸಂಪೂರ್ಣ ಪಟ್ಟಿ | IPL 2025 mega auction

Share. Facebook Twitter LinkedIn WhatsApp Email

Related Posts

BREAKING : ಮೈಸೂರಿನಲ್ಲಿ ‘ಚಾಮುಂಡೇಶ್ವರಿ ಚಲೋ’ : ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣಾ ವೇದಿಕೆ ಸದಸ್ಯರು ಪೊಲೀಸ್ ವಶಕ್ಕೆ

09/09/2025 9:44 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸುಲಭವಾಗಿ ಸಿಗಲಿದೆ `ಆದಾಯ ಪ್ರಮಾಣ’ ಪತ್ರ

09/09/2025 9:38 AM3 Mins Read

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM1 Min Read
Recent News

BREAKING : ಮೈಸೂರಿನಲ್ಲಿ ‘ಚಾಮುಂಡೇಶ್ವರಿ ಚಲೋ’ : ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣಾ ವೇದಿಕೆ ಸದಸ್ಯರು ಪೊಲೀಸ್ ವಶಕ್ಕೆ

09/09/2025 9:44 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸುಲಭವಾಗಿ ಸಿಗಲಿದೆ `ಆದಾಯ ಪ್ರಮಾಣ’ ಪತ್ರ

09/09/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 323 ಅಂಕ ಏರಿಕೆ; 24,850 ರ ಗಡಿ ದಾಟಿದ ‘ನಿಫ್ಟಿ’ |Share Market

09/09/2025 9:24 AM

SHOCKING : ಕುತ್ತಿಗೆ ಬಾಗಿಸಿ ಗಂಟೆಗಟ್ಟಲೆ `ಮೊಬೈಲ್’ ಬಳಸಿದ ವಿದ್ಯಾರ್ಥಿಗೆ ಪಾರ್ಶ್ವವಾಯು.!

09/09/2025 9:17 AM
State News
KARNATAKA

BREAKING : ಮೈಸೂರಿನಲ್ಲಿ ‘ಚಾಮುಂಡೇಶ್ವರಿ ಚಲೋ’ : ಬಿಜೆಪಿ ಕಾರ್ಯಕರ್ತರು, ಹಿಂದೂ ಜಾಗರಣಾ ವೇದಿಕೆ ಸದಸ್ಯರು ಪೊಲೀಸ್ ವಶಕ್ಕೆ

By kannadanewsnow5709/09/2025 9:44 AM KARNATAKA 1 Min Read

ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸುಲಭವಾಗಿ ಸಿಗಲಿದೆ `ಆದಾಯ ಪ್ರಮಾಣ’ ಪತ್ರ

09/09/2025 9:38 AM

ನೀವು ಬಾತ್ರೂಮ್ ನಲ್ಲೂ `ಮೊಬೈಲ್’ ಬಳಸುತ್ತೀರಾ? ನಿಮಗೊಂದು ಶಾಕಿಂಗ್ ನ್ಯೂಸ್

09/09/2025 9:00 AM

ಮನೆಯಲ್ಲಿರುವ ಇಲಿಗಳನ್ನು ಓಡಿಸಲು ಜಸ್ಟ್ ಹೀಗೆ ಮಾಡಿ.!

09/09/2025 8:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.