Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

15/01/2026 6:10 PM

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್
KARNATAKA

BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್

By kannadanewsnow5716/11/2024 11:43 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12692 ಪೌರಕಾರ್ಮಿಕರನ್ನು* ಅಂತಿಮವಾಗಿ ಆಯ್ಕೆ ಮಾಡಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ರವರು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12692 ಸಂಖ್ಯೆಯ ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರು ರವರ ಕಛೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಅಂತಿಮ ಆಯ್ಕೆಯಾಗಿರುವ ಪೌರಕಾರ್ಮಿಕರು ಮೀಸಲಾತಿಗೆ ಅನುಗುಣವಾಗಿ ಒದಗಿಸಬೇಕಿರುವ ದಾಖಲೆಗಳು:

(1) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಜಾತಿ ಮೀಸಲಾತಿ ಪ್ರಮಾಣ ಪತ್ರ.

(2) ಕನ್ನಡ ಮಾಧ್ಯಮ ಪ್ರಮಾಣ ಪತ್ರ.

(3) ಗ್ರಾಮೀಣ ಪ್ರಮಾಣ ಪತ್ರ.

(4) ಅಂಗವಿಕಲ ಪ್ರಮಾಣ ಪತ್ರ.

(5) ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ.

(6) ಮಾಜಿ ಸೈನಿಕ ಪ್ರಮಾಣ ಪತ್ರ.

(7) ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ.

(8) ತೃತೀಯ ಲಿಂಗ ಪ್ರಮಾಣ ಪತ್ರ.

(9) ಇತರೇ (ಅನ್ವಯಿಸುವ ದಾಖಲೆ ಮಾತ್ರ).

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು.

BIG NEWS : 12692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ : ಅವಿನಾಶ್ ಮೆನನ್ ರಾಜೇಂದ್ರನ್ BIG NEWS : Final selection list of 12692 civil servants announced : Avinash Menon Rajendran
Share. Facebook Twitter LinkedIn WhatsApp Email

Related Posts

BREAKING: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

15/01/2026 6:10 PM1 Min Read

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM1 Min Read

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM1 Min Read
Recent News

BREAKING: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

15/01/2026 6:10 PM

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM
State News
KARNATAKA

BREAKING: ಮಾಜಿ ಶಾಸಕ ವಿ.ಎಸ್ ಪಾಟೀಲ್ ಡಬಲ್ ಬ್ಯಾರಲ್ ಬಂದೂಕು ಕಳ್ಳತನ

By kannadanewsnow0915/01/2026 6:10 PM KARNATAKA 1 Min Read

ಕಾರವಾರ: ಯಲ್ಲಾಪುರದ ಮಾಜಿ ಶಾಸಕ ವಿಎಸ್ ಪಾಟೀಲ್ ಅವರ ಡಬಲ್ ಬ್ಯಾರಲ್ ಬಂದೂಕನ್ನೇ ಕಳ್ಳರು ಕದ್ದೊಯ್ದಿರೋದಾಗಿ ತಿಳಿದು ಬಂದಿದೆ. ಮಾಜಿ…

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.