Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಸ್ಫೋಟ: ಐ20 ಕಾರು 11 ವರ್ಷಗಳಲ್ಲಿ ಐದು ಬಾರಿ ಮಾರಾಟ: ಪುಲ್ವಾಮಾ ಐಡಿ ಬಳಸಿ ಖರೀದಿ ಒಪ್ಪಂದ

13/11/2025 11:43 AM

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

13/11/2025 11:36 AM

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!
KARNATAKA

BIG NEWS : ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!

By kannadanewsnow5721/11/2024 1:17 PM

ಬೆಂಗಳೂರು : ನಕ್ಸಲ್ ವಿಕ್ರಂಗೌಡ ಚಟುವಟಿಕೆಗಳ ಮೇಲೆ ಕಳೆದ 20 ವರ್ಷಗಳಿಂದ ನಿಗಾವಹಿಸಲಾಗಿತ್ತು. ಜನ ವಿರೋದಿ ಕೆಲಸಗಳಲ್ಲಿ ತೊಡಗಿದ್ದ ಎಂಬ ಮಾಹಿತಿ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರವಾಗಿ, ಅನುಮತಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ. ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ. ನಕ್ಸಲ್ ನಿಗ್ರಹಕ್ಕಾಗಿ ರಾಜ್ಯದಲ್ಲಿ ಮತ್ತು ಬೇರೆಬೇರೆ ರಾಜ್ಯಗಳಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ರಚಿಸಲಾಗಿದೆ. ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಅವರದ್ದು ನಕಲಿ‌ ಎನ್‌ಕೌಂಟರ್ ಅಲ್ಲ ಎಂದರು.

ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದವರಿಗೆ ಶರಣಾಗುವಂತೆ ವಿಚಾರವಾದಿಗಳು ಮನವಿ ಮಾಡಿದ್ದಾರೆ. ಇದು ಸರಿ ಇಲ್ಲ.‌ ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ‌ ಪರಿಗಣಿಸಬೇಕು ಎಂದು ಹೇಳಿದರು.

ಈ ಹಿಂದೆ ತುಮಕೂರಿನ ಪಾವಘಡದ ಆಂಧ್ರಪ್ರದೇಶ ಗಡಿಯಲ್ಲಿ ಪೀಪಲ್ಸ್ ವಾರ್ ಗ್ರೂಪ್ ಇತ್ತು. ಇದೇ ರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಅನುಕೂಲಸ್ಥರಿಂದ ಹಣ ಕೇಳುವುದು, ಜಮೀನುಗಳಿಗೆ ಬೇಲಿ ಹಾಕುವುದು, ಪೊಲೀಸರನ್ನು ಹತ್ಯೆ ಮಾಡಿದ್ದರು. ಎಸ್.ಎಮ್.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೂರಾರು ಜನ ನಕ್ಸಲರು ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ  ಶರಣಾಗತಿಯಾದರು. ಅದೇರೀತಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಗತಿಪರ ಚಿಂತಕರು ಪ್ರಯತ್ನ ಮಾಡಬೇಕು ಎಂದರು.

ಎಕ್ಸಿಟ್ ಪೋಲ್‌ಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸರ್ವೇಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳನ್ನು ಕೊಟ್ಟಿದ್ದು, ಬಿಜೆಪಿಯವರಿಗೆ 128 ಕೊಟ್ಟಿವೆ. ಇನ್ನು ಕೆಲ ಸರ್ವೇಗಳು ಬಿಜೆಪಿಯವರಿಗೆ 140 ನೀಡಿವೆ. ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದು ಹೇಳಿದರು.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಹಳಷ್ಟು ಕಾರಣಗಳಿವೆ. ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ಅಕ್ರಮ ನಡೆದಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋಡಿಯವರು 2025ರಲ್ಲಿ ಅಡಿಗಲ್ಲು ಹಾಕಿದ್ದರು.

ಮಹಾರಾಷ್ಟ್ರ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮತಗಟ್ಟೆ ಸಮೀಕ್ಷೆಗಳು ಒಂದೇ ತರನಾಗಿ ಹೇಳಿಲ್ಲ. ಕೆಲವು ಸಮೀಕ್ಷೆಗಳು ಮಹಾ ವಿಕಾಸ್ ಅಘಾಡಿಗೆ 162 ಸೀಟುಗಳು ಬರುತ್ತವೆ ಎಂದು ಹೇಳಿದ್ದು, ಬಿಜೆಪಿಯವರಿಗೆ 128 ಸೀಟು ಬರುತ್ತವೆ ಎಂದು ತಿಳಿಸಿವೆ. ಇನ್ನು ಕೆಲ ಸಮೀಕ್ಷೆಗಳು ಬಿಜೆಪಿಯವರಿಗೆ 140 ಬರುತ್ತವೆ ಎಂದು ಹೇಳಿವೆ. ಈಗಲೇ ಯಾವುದನ್ನು ನಿಖರವಾಗಿ ಹೇಳಲು ಬರುವುದಿಲ್ಲ ಎಂದರು‌.

ವಾಸ್ತವವಾಗಿ ಮಹಾರಾಷ್ಟ್ರ ಜನ, ಭ್ರಷ್ಟಚಾರದಲ್ಲಿ ತೊಡಗಿರುವ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಆಂಬುಲೆನ್ಸ್ ಖರೀದಿಯಲ್ಲಿ 8000 ಕೋಟಿ ರೂ. ಅಕ್ರಮ ಎಸಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ, ಅಂಬೇಡ್ಕರ್ ಕೇಂದ್ರ ಮಾಡುವುದಾಗಿ ಪ್ರಧಾನಿ ಮೋದಿಯವರು 2015ರಲ್ಲಿ ಅಡಿಗಲ್ಲು ಹಾಕಿದ್ದರು. ಈವರೆಗು ಪೂರ್ಣಗೊಂಡಿಲ್ಲ. ಅಂಬೇಡ್ಕರ್ ಅವರು ಮಹಾರಾಷ್ಟ್ರದಲ್ಲಿ ಜನಿಸಿದವರು. ಇಡೀ ದೇಶದ ಜನತೆ ಅವರನ್ನು ಇಷ್ಡಪಡುತ್ತಾರೆ. ಯೋಜನೆಯನ್ನು ಪೂರ್ಣಗೊಳಿಸದೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಜನ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎಂದರು‌.

ಮಹಾರಾಷ್ಟ್ರಕ್ಕೆ ಬಂದಿದ್ದ ಕೈಗಾರಿಕೆಗಳನ್ನು ಗುಜುರಾತ್‌ಗೆ ತೆಗೆದುಕೊಂಡು ಹೋಗಿದ್ದಾರೆ‌. 25 ಸಾವಿರ ಕೋಟಿ ರೂ ಹೂಡಿಕೆಯ ಸಂಸ್ಥೆಯನ್ನು ಗುಜುರಾತ್‌‌ಗೆ ತೆಗೆದುಕೊಂಡು ಹೋಗಿದ್ದಾರೆ‌. ಇದರಿಂದ ಉದ್ಯೋಗಗಳೆಲ್ಲ ಗುಜುರಾತ್‌ಗೆ ಹೋಗಿರುವುದಕ್ಕೆ ಜನರಿಗೆ ಅಸಮಾದಾನವಿದೆ‌. ರೈತರಿಗೆ ಯಾವುದೇ ರೀತಿಯಲ್ಲಿ  ಸಹಾಯ ಮಾಡುತ್ತಿಲ್ಲ. ವಿಪರೀತ ಭ್ರಷ್ಟಚಾರ ಮಾಡುತ್ತಿದ್ದಾರೆ ಎಂಬುದು ಜನರೊಂದಿಗೆ ಸಮಾಲೋಚನೆ ನಡೆಸಿದ ವೇಳೆ ಬಂದ ಮಾತುಗಳು. ಹೀಗಾಗಿ ಜನರು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಬಹುಮತ ನೀಡುವ ಭರವಸೆ ಇದೆ ಎಂದು ಹೇಳಿದರು.

BIG NEWS : Home Minister Dr. G. Parameshwar's explosive statement about the Naxal Vikrangowda encounter! BIG NEWS : ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ!
Share. Facebook Twitter LinkedIn WhatsApp Email

Related Posts

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

13/11/2025 11:36 AM1 Min Read

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM1 Min Read

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM2 Mins Read
Recent News

ದೆಹಲಿ ಸ್ಫೋಟ: ಐ20 ಕಾರು 11 ವರ್ಷಗಳಲ್ಲಿ ಐದು ಬಾರಿ ಮಾರಾಟ: ಪುಲ್ವಾಮಾ ಐಡಿ ಬಳಸಿ ಖರೀದಿ ಒಪ್ಪಂದ

13/11/2025 11:43 AM

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

13/11/2025 11:36 AM

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM
State News
KARNATAKA

BREAKING : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟ : ಮಹಿಳೆಯ ಕೈ ಬೆರಳು ಛಿದ್ರ!

By kannadanewsnow0513/11/2025 11:36 AM KARNATAKA 1 Min Read

ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಇಟ್ಟಿದ್ದ ಸಿಡಿಮದ್ದು ಸ್ಪೋಟಗೊಂಡು ಕುರಿಗಾಹಿ ಮಹಿಳೆಯ ಕೈ ಬೆರಳು ಛಿದ್ರಗೊಂಡಿರುವ ಘಟನೆ…

‘EPFO’ ಸೊಸೈಟಿಯಲ್ಲಿ 70 ಕೋಟಿ ರೂಪಾಯಿ ವಂಚನೆ : ಅಕೌಂಟೆಂಟ್ ಜಗದೀಶ್ ಮನೆ ಮೇಲೆ ಪೊಲೀಸರು ದಾಳಿ

13/11/2025 11:29 AM

BREAKING : ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ : `ರೌಂಡ್ ರಾಬಿನ್ ಕೌನ್ಸಿಲಿಂಗ್’ಗೆ ವೇಳಾಪಟ್ಟಿ ಪ್ರಕಟ.!

13/11/2025 11:26 AM

ರಾಜ್ಯದ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿ.!

13/11/2025 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.