Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM

ವಕ್ಫ್ ಆಸ್ತಿಗಳ ಪೋರ್ಟಲ್ ಆರಂಭಿಸಿದ ಕೇಂದ್ರ ಸರ್ಕಾರ | Waqf

07/06/2025 7:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ ಗೆದ್ದಿದೆ ಅಂದ್ರೆ ಡಿಕೆಶಿ ಒಪ್ಪುವರೇ?: ಛಲವಾದಿ ನಾರಾಯಣಸ್ವಾಮಿ
KARNATAKA

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ ಗೆದ್ದಿದೆ ಅಂದ್ರೆ ಡಿಕೆಶಿ ಒಪ್ಪುವರೇ?: ಛಲವಾದಿ ನಾರಾಯಣಸ್ವಾಮಿ

By kannadanewsnow0925/11/2024 4:29 PM

ಬೆಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ಕಾಂಗ್ರೆಸ್ಸಿಗರೆಲ್ಲರೂ ಈ ಸಾರಿ ಬಿಜೆಪಿಯನ್ನು ಬೆಂಬಲಿಸಿದ್ದು, ಅದರಿಂದ ನಾವು ಗೆದ್ದೆವು ಎಂದರೆ ಡಿ.ಕೆ.ಶಿವಕುಮಾರರು ಒಪ್ಪುತ್ತಾರಾ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ಪಕ್ಷ 3 ಲೋಕ-3 ರಾಜ್ಯಗಳನ್ನು ಗೆದ್ದಂತೆ ವಿಜೃಂಭಿಸುತ್ತಿದೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ಜೆಡಿಎಸ್- ಬಿಜೆಪಿ ನಾಯಕರು ತಮ್ಮನ್ನು ಬೆಂಬಲಿಸಿದ್ದಾಗಿ ಹೇಳಿದ್ದು, ಇದೊಂದು ಶುದ್ಧ ಸುಳ್ಳು ಮತ್ತು ದಾರಿ ತಪ್ಪಿಸುವ ಕೆಲಸ ಎಂದು ಖಂಡಿಸಿದರು.

3 ಕ್ಷೇತ್ರಗಳ ಗೆಲುವು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಕ್ಕೆ ಜನರು ಕೊಟ್ಟ ಲೈಸನ್ಸ್ ಅಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರರು ತಿಳಿದುಕೊಳ್ಳಲಿ ಎಂದು ತಿಳಿಸಿದರು. ಸೋತಲ್ಲೆಲ್ಲ ಇವಿಎಂ ತಿರುಚಿದ್ದಾರೆ ಎನ್ನುವ ಕಾಂಗ್ರೆಸ್ಸಿಗರಿಗೆ ಇಲ್ಲಿ 3 ಸ್ಥಾನ ಗೆದ್ದ ಮೇಲೆ ಇವಿಎಂ ತಿರುಚಿಲ್ಲ ಎಂಬ ನಂಬಿಕೆ ಬಂದಿರಬಹುದು ಎಂದು ವ್ಯಂಗ್ಯವಾಡಿದರು. ಮಹಾರಾಷ್ಟ್ರದಲ್ಲಿ ಇವಿಎಂ ತಿರುಚಿದ್ದರೆ, ಜಾರ್ಖಂಡ್, ವಯನಾಡಿನಲ್ಲಿ ಬಿಜೆಪಿಯವರಿಗೆ ಯಾಕೆ ಇವಿಎಂ ತಿರುಚಲು ಸಾಧ್ಯವಾಗಿಲ್ಲ ಎಂದು ಕೇಳಿದರು.

ಕಾಂಗ್ರೆಸ್ಸಿನವರು ವಯನಾಡ್ ಬಿಟ್ಟು ಇನ್ಯಾವುದನ್ನೂ ಗೆಲ್ಲದಿದ್ದರೆ ಪರವಾಗಿಲ್ಲ ಎಂಬಂತೆ ಇದ್ದರು. ಅವರಿಗೆ ಆ ಕುಟುಂಬ ಮುಖ್ಯವೇ ಹೊರತು ಬೇರೆ ರಾಜಕಾರಣ ಪ್ರಮುಖವಲ್ಲ ಎಂದು ತೋರಿಸಿದ್ದಾರೆ ಎಂದ ಅವರು, ವಕ್ಫ್ ಬೋರ್ಡ್ ವಿಚಾರದಲ್ಲಿ ಡಿ.4ರಿಂದ ಜಿಲ್ಲೆಗಳಿಗೆ ತಂಡಗಳ ಭೇಟಿ ಇದೆ ಎಂದರು. ಸಂವಿಧಾನದಲ್ಲಿ ವಕ್ಫ್ ಬೋರ್ಡಿನ ಪ್ರಸ್ತಾಪವೇ ಇಲ್ಲ; ಆ ಕುರಿತು ಸುಳ್ಳು ಹೇಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ- ಆರೆಸ್ಸೆಸ್ ವಿಷಸರ್ಪವಿದ್ದಂತೆ; ಅದನ್ನು ಕೊಲ್ಲಬೇಕೆಂದು ಖರ್ಗೆಯವರು ಹೇಳಿದ್ದಾರೆ. ಆದರೆ, ವಿಷ ಸರ್ಪಗಳು ಯಾವುದು? ದೇಶಭಕ್ತರನ್ನು ವಿಷ ಸರ್ಪಕ್ಕೆ ಹೋಲಿಸುವ ನೀವು, ದೇಶದ್ರೋಹಿಗಳು, ಭಯೋತ್ಪಾದಕರನ್ನು ನಿಗ್ರಹಿಸುವ ಮತ್ತು ಕೊಲ್ಲುವ ಮಾತನಾಡುವುದಿಲ್ಲ ಯಾಕೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನೀವು ಅವರ ಪರವೇ? ಇದು ಕಾಂಗ್ರೆಸ್ ನೀತಿಯೇ ಎಂದು ಕೇಳಿದರು. ಕಾಂಗ್ರೆಸ್ ನಶಿಸಿ ಹೋಗುತ್ತಿದೆ. ಮಾತನಾಡುವುದಿದ್ದರೆ ದೇಶದ್ರೋಹಿಗಳ ಬಗ್ಗೆ, ಭಯೋತ್ಪಾದಕರ ಕುರಿತು ಮಾತನಾಡಿ ಎಂದು ಆಗ್ರಹಿಸಿದರು.

ಈ ಸರಕಾರದ ಅಡಿಯಲ್ಲಿ ವಕ್ಫ್ ಬೋರ್ಡಿನ ಸರ್ವಾಧಿಕಾರದ ರೀತಿಯಲ್ಲಿ ಅರಣ್ಯಾಧಿಕಾರಿಗಳೂ ಸರ್ವಾಧಿಕಾರ ತೋರುತ್ತಿದ್ದಾರೆ. ಕೋಲಾರದಲ್ಲಿ ರಮೇಶ್ ಕುಮಾರ್ ಅವರು ಅರಣ್ಯ ಜಮೀನು ಒತ್ತುವರಿ ಮಾಡಿದ್ದನ್ನು ತೆರವು ಮಾಡಿಲ್ಲ. ಒಂದೆರಡು ಎಕರೆ ಪ್ರದೇಶದಲ್ಲಿ ದೀರ್ಘ ಕಾಲದಿಂದ ಬೆಳೆ ಬೆಳೆಯುವ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಈಡುಕೊಂಡಲು ಎಂಬ ಡಿಎಫ್‍ಒ ಸಚಿವರೂ ಲೆಕ್ಕಕ್ಕೆ ಇಲ್ಲದಂತೆ ಮೆರೆಯುತ್ತಿದ್ದಾರೆ ಎಂದು ಆಕ್ಷೇಪಿಸಿದರು. 700 ಎಕರೆ ಮಾವಿನ ತೋಪನ್ನು ಕತ್ತರಿಸಿ ಹಾಕಿದ್ದಾರೆ ಎಂದು ಟೀಕಿಸಿದರು. ಸರಕಾರ ಕ್ರಮ ಕೈಗೊಂಡು ರೈತರ ನೆರವಿಗೆ ಮುಂದಾಗಲು ಆಗ್ರಹಿಸಿದರು.

ಯತ್ನಾಳ್ ಅವರು ಪಕ್ಷದ ಹೆಸರಿನಲ್ಲಿ ಹೋರಾಟ ಮಾಡುವುದಾದರೆ ಜಿಲ್ಲಾಧ್ಯಕ್ಷರ ಗಮನಕ್ಕೆ ತರಬೇಕಿತ್ತು. ಅವರನ್ನು ವಿಶ್ವಾಸಕ್ಕೆ ಪಡೆಯಬೇಕಿತ್ತು ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದು ಶಿಸ್ತಿನ ಪಕ್ಷವೇ ಆಗಿದೆ. ಕೆಲವರು ಶಿಸ್ತು ಮೀರಿ ಹೋದಾದ ಅದನ್ನು ಸರಿದಾರಿಗೆ ತರುವುದು ಮುಖಂಡರ ಆದ್ಯ ಕರ್ತವ್ಯ. ಅಶಿಸ್ತಿನ ಕುರಿತು ಹೈಕಮಾಂಡ್ ಗಮನ ಸೆಳೆಯುವ ಕೆಲಸವನ್ನು ರಾಜ್ಯಾಧ್ಯಕ್ಷರು ಮತ್ತು ಉಳಿದವರು ಮಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೀವ್ ಅವರು ಈ ಕುರಿತು ಉತ್ತರ ಕೊಟ್ಟದ್ದನ್ನು ನಾನು ಈಗಾಗಲೇ ಗಮನಿಸಿದ್ದೇನೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

 

BREAKING : ರದ್ದಾಗಿದ್ದ ‘BPL’ ಕಾರ್ಡ್ ಗಳು ಮತ್ತೆ ‘ಆಕ್ಟಿವ್’ : ರಾಜ್ಯಾದ್ಯಂತ ಭರದಿಂದ ಸಾಗಿದ ಕಾರ್ಡ್ ಗಳ ಪರಿಷ್ಕರಣೆ

ಸಿದ್ಧರಾಮಯ್ಯನವರೇ ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?: ಆರ್.ಅಶೋಕ್ ಪ್ರಶ್ನೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM1 Min Read

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM2 Mins Read

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM1 Min Read
Recent News

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM

ವಕ್ಫ್ ಆಸ್ತಿಗಳ ಪೋರ್ಟಲ್ ಆರಂಭಿಸಿದ ಕೇಂದ್ರ ಸರ್ಕಾರ | Waqf

07/06/2025 7:46 AM

BREAKING : ಬಿಹಾರದಲ್ಲಿ ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ : ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ.!

07/06/2025 7:44 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

By kannadanewsnow5707/06/2025 7:54 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಹೌದು, ಕಾಲ್ತುಳಿತ…

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.