Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BJP ಧರಣಿ ಹೆಸರಲ್ಲಿ ನಡೆಸುವ ‘ಮೆಲೊ ಡ್ರಾಮಾ’ಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ?: ರಾಮಲಿಂಗಾರೆಡ್ಡಿ ಪ್ರಶ್ನೆ
KARNATAKA

BJP ಧರಣಿ ಹೆಸರಲ್ಲಿ ನಡೆಸುವ ‘ಮೆಲೊ ಡ್ರಾಮಾ’ಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ?: ರಾಮಲಿಂಗಾರೆಡ್ಡಿ ಪ್ರಶ್ನೆ

By kannadanewsnow0925/11/2024 5:49 PM

ಬೆಂಗಳೂರು: ಇಷ್ಟೆಲ್ಲಾ ದಾಖಲೆ ಸಮೇತ ಮಾಡಿರುವ ದಿನಪತ್ರಿಕೆಯಲ್ಲಿನ ವರದಿಯನ್ನು ನೋಡಿ ಹಾಗೂ ಬಿ.ಜೆ.ಪಿಯು ತಮ್ಮ ದ್ವಂದ್ವ, ದಾರಿ ತಪ್ಪಿಸುವ ಹೇಳಿಕೆಗಳಿಗೆ, ಧರಣಿ ಹೆಸರಲ್ಲಿ ನಡೆಸುವ ಮೆಲೊ ಡ್ರಾಮಾಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯವರನ್ನು ಆಗ್ರಹಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿಯಿಂದ ಹೆಚ್ಚು ನೋಟಿಸ್‌ ಎಂಬ ಪ್ತಜಾವಾಣಿಯಲ್ಲಿನ ಲೇಖನ‌‌ ನೋಡಿದರೆ ಬಿ.ಜೆ.ಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗಲಿದೆ. 2,865 ಎಕರೆ ವಿಸ್ತೀರ್ಣದ ಜಮೀನನ್ನು ‘ವಕ್ಫ್ ಆಸ್ತಿ’ ಎಂದು ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಅವುಗಳ ಒತ್ತುವರಿ ತೆರವಿಗೆ ನೋಟಿಸ್ ನೀಡಲಾಗಿತ್ತು. ಬಿಎಸ್ ಯಡಿಯೂರಪ್ಪ 2000ರಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಧಿಸೂಚನೆ ಮಾಡಲಾಗಿದ್ದ ‘ವಕ್ಫ್ ಆಸ್ತಿ’ಗಳಿಗೂ ಈ ಅವಧಿಯಲ್ಲಿ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ.

ಬಿಜೆಪಿ  ಸರ್ಕಾರವು 1,735 ರೈತರು ಮತ್ತು ಭೂಮಾಲೀಕರಿಗೆ ನೋಟಿಸ್ ನೀಡಿತ್ತು. ಇದರ ವಿರುದ್ಧ ಕೆಲ ರೈತರು ನ್ಯಾಯಾಲಯದ ಮೊರೆಹೋಗಿ ತಡೆಯಾಜ್ಞೆ ತಂದಿದ್ದರು. ಉಳಿದ ಪ್ರಕರಣಗಳಲ್ಲಿ ಪಹಣಿಯಲ್ಲಿ ‘ವಕ್ಫ್ ಆಸ್ತಿ’ ಎಂದು ನಮೂದಿಸಲು ಕ್ರಮ ತೆಗೆದು- ಕೊಳ್ಳುವಂತೆ ಸಮಿತಿಯು ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.

4,720 ಎಕರೆ ವಿಸ್ತೀರ್ಣದ ಜಮೀನು ವಕ್ಫ್ ಆಸ್ತಿ ಒತ್ತುವರಿಯಾಗಿದ್ದು, ಅವುಗಳು ಅಕ್ರಮ ಪರಭಾರೆ ಆಗಬಾರದು ಎಂದು ಪಹಣಿಯಲ್ಲಿ ‘ಫ್ಲಾಗ್ ಅಫ್’ (ಪಹಣಿಯ ಕಾಲಂ 11ರಲ್ಲಿ ವಕ್ಫ್ ಅಸ್ತಿ ಎಂದು ನಮೂದಿಸುವುದು) ಮಾಡಲಾಗಿತ್ತು. ವಕ್ಫ್ ಆಸ್ತಿಗಳ ದಾಖಲೆ, ಸ್ಥಿತಿಗತಿ ಮತ್ತು ಸಂರಕ್ಷಣೆ ಕಾರ್ಯಾಚರಣೆಗಳ ವಿವರವನ್ನು ಒಳಗೊಂಡ ವರದಿಗಳನ್ನು ಶ್ರೀ‌ ಕುಮಾರ್ ಬಂಗಾರಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿ, ಈ ವರದಿಗಳನ್ನು ಸದನವು ಅಂಗೀಕರಿಸಿತ್ತು ಎಂದು ತಿಳಿಸಿದ್ದಾರೆ.

2020ರ ಸೆಪ್ಟೆಂಬರ್ 10ರಂದು ವಿಧಾನಸಭೆಯಲ್ಲಿ ಮಂಡಿಸಿದ ವರದಿಯಲ್ಲಿ, ‘ವಕ್ಫ್ ಆಸ್ತಿಗಳ ಒತ್ತುವರಿ, ಅಕ್ರಮ ಮಾರಾಟ ಅಥವಾ ಇತರೆ ಯಾವುದೇ ತೊಂದರೆ ಬಂದಲ್ಲಿ, ಅವುಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿಯು ಜಿಲ್ಲಾಧಿಕಾರಿಗಳಿಗೆ ಸೂಚಿಸಲು ಕಾಯ್ದೆಯಲ್ಲಿ ಅವಕಾಶವಿದೆ’ ಎಂದು ಸಮಿತಿ ಹೇಳಿತ್ತು.

‘ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಪರಿಶೀಲಿಸ ಬೇಕು. ದಾಖಲೆಗಳು ಇಲ್ಲದ ಅಸ್ತಿಗಳಿಗೆ ಸಂಬಂಧಿಸಿದ ಅಕಾರ್‌ಬಂದ್‌ಗಳ ಮಾಹಿತಿ ಪರಿಶೀಲಿಸಿ, ವಕ್ಫ್ ಆಸ್ತಿಗಳ ರಕ್ಷಣೆಗೆ ಕ್ರಮ ತೆಗೆದು ಕೊಳ್ಳಬೇಕು’ ಎಂದು ಶಿಫಾರಸು ಮಾಡಿತ್ತು.

ಜೊತೆಗೆ, ‘ಗೆಜೆಟ್ ಅಧಿಸೂಚನೆ ಹೊರಡಿಸಲಾಗಿರುವ ಆಸ್ತಿಗಳ ಮೂಲ ಕಂದಾಯ ದಾಖಲೆಗಳನ್ನು ಪರಿಶೀಲನೆ ಮಾಡಿ, ಕಂದಾಯ ಇಲಾಖೆಯ ತಂತ್ರಾಂಶದಲ್ಲಿ ನಮೂದಿಸಬೇಕು. ತಂತ್ರಾಂಶದಲ್ಲಿ ಆ ಆಸ್ತಿಗಳನ್ನು ಲಾಕ್ ಮಾಡಿಸುವ ಮೂಲಕ ಪರಭಾರೆ, ಒತ್ತುವರಿ ಮತ್ತು ಅಕ್ರಮ ಮಾರಾಟಕ್ಕೆ ಅವಕಾಶವಿರದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಮಿತಿ ಶಿಫಾರಸಿನಲ್ಲಿ ಹೇಳಿತ್ತು. 2022ರಲ್ಲಿ ಸಮಿತಿಯು ಮತ್ತೊಂದು ವರದಿಯನ್ನು ಸದನದಲ್ಲಿ ಮಂಡಿಸಿತ್ತು. 2020ರ ವರದಿಯಲ್ಲಿ ಮಾಡಿದ್ದ ಎಲ್ಲ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಿದ್ದು, ಅದಕ್ಕೆ ಸಂಬಂಧಿಸಿದ ಸುಮಾರು 6,000 ಪುಟಗಳಷ್ಟು ದಾಖಲೆಗಳನ್ನು ವರದಿಯೊಂದಿಗೆ ಲಗತ್ತಿಸಲಾಗಿತ್ತು.

ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯು ವಕ್ಸ್ ಆಸ್ತಿ ಎಂಬುದನ್ನು ಬಿಜೆಪಿ ಸರ್ಕಾರದ ಅವಧಿಯ ಸಮಿತಿ ವರದಿಯಲ್ಲಿ ಗುರುತಿಸಿದೆ. ಜತೆಗೆ ಈ ವರದಿಯನ್ನು ವಿಧಾನಸಭೆ ಅಂಗೀಕರಿಸಿದೆ. ವಕ್ಫ್ ಆಸ್ತಿಗಳ ಮುಂದೆ ಆಯಾ ವಕ್ಫ್ ಸಂಸ್ಥೆಗಳ ಹೆಸರನ್ನೂ ನಮೂದಿಸಬೇಕು. ಆ ಮೂಲಕ ವಕ್ಫ್ ಆಸ್ತಿಗಳನ್ನು ಸಂರಕ್ಷಿಸಿಕೊಳ್ಳಿ ಎಂದು ಸಹ ಸಮಿತಿ ಶಿಫಾರಸು ಮಾಡಿದೆ.

ಈಗಾಗಲೇ ಮಾನ್ಯ‌ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ ವಕ್ಛ್ ಹೆಸರಿನಲ್ಲಿ ಯಾವುದೇ ನೋಟಿಸ್ ಗಳನ್ನು ನೀಡಬಾರದು, ನೋಟಿಸ್ ನೀಡಿದ್ದರು ಸಹ ಕೂಡಲೇ ವಾಪಸ್ಸು ಪಡೆಯಲು ಆದೇಶಿಸಿದ್ದಾರೆ. ಅದರಂತೆ ವಾಪಸ್ಸು ಕೂಡ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲಾ ದಾಖಲೆ ಸಮೇತ ಮಾಡಿರುವ ದಿನಪತ್ರಿಕೆಯಲ್ಲಿನ ವರದಿಯನ್ನು ನೋಡಿ ಹಾಗೂ ಬಿ.ಜೆ.ಪಿಯು ತಮ್ಮ ದ್ವಂದ್ವ, ದಾರಿ ತಪ್ಪಿಸುವ ಹೇಳಿಕೆಗಳಿಗೆ, ಧರಣಿ ಹೆಸರಲ್ಲಿ ನಡೆಸುವ ಮೆಲೊ ಡ್ರಾಮಾಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ? ಬಿ.ಜೆ.ಪಿ‌ಯವರ ಈ ದುರ್ನಡತೆ, ದುರ್ಬುದ್ಧಿಗಳನ್ನು ಚೆನ್ನಾಗಿ ಅರಿತಿರುವುದಕ್ಕೆ ಕರ್ನಾಟಕದ ಜನತೆ ತಕ್ಕ ಶಾಸ್ತಿ ಮಾಡಿದ್ದಾರೆ ಇನ್ನಾದರೂ ಅಭಿವೃದ್ಧಿಗೆ ಸಹಕಾರ ನೀಡುವ ಸದ್ಬುದ್ಧಿ ದೇವರು ಇವರಿಗೆ ಕರುಣಿಸಲಿ ಅಂತ ತಿಳಿಸಿದ್ದಾರೆ.

ಬಿಜೆಪಿಯಿಂದ ಹೆಚ್ಚು ನೋಟಿಸ್‌ ಎಂಬ ಪ್ತಜಾವಾಣಿಯಲ್ಲಿನ ಲೇಖನ‌‌ ನೋಡಿದರೆ ಬಿ.ಜೆ.ಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗಲಿದೆ.

2,865 ಎಕರೆ ವಿಸ್ತೀರ್ಣದ ಜಮೀನನ್ನು 'ವಕ್ಫ್ ಆಸ್ತಿ' ಎಂದು ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಅವುಗಳ ಒತ್ತುವರಿ ತೆರವಿಗೆ ನೋಟಿಸ್ ನೀಡಲಾಗಿತ್ತು. ಶ್ರೀ @BSYBJP 2000 ರಲ್ಲಿ… pic.twitter.com/7i3vWp0TfJ

— Ramalinga Reddy (@RLR_BTM) November 25, 2024

BREAKING: ಢಾಕಾ ವಿಮಾನ ನಿಲ್ದಾಣದಲ್ಲಿ ಹಿಂದೂ ಮುಖಂಡ, ಇಸ್ಕಾನ್ ಅರ್ಚಕ ಕೃಷ್ಣ ದಾಸ್ ಬಂಧನ | Chinmoy Krishna Das

BREAKING : ರದ್ದಾಗಿದ್ದ ‘BPL’ ಕಾರ್ಡ್ ಗಳು ಮತ್ತೆ ‘ಆಕ್ಟಿವ್’ : ರಾಜ್ಯಾದ್ಯಂತ ಭರದಿಂದ ಸಾಗಿದ ಕಾರ್ಡ್ ಗಳ ಪರಿಷ್ಕರಣೆ

Share. Facebook Twitter LinkedIn WhatsApp Email

Related Posts

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM3 Mins Read

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM1 Min Read

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM2 Mins Read
Recent News

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

15/02/2026 12:47 PM

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM

ವಧುವಿನ ಕೈಯಲ್ಲಿದ್ದ ಬ್ಯಾಗ್ ಕ್ಷಣಾರ್ಧದಲ್ಲಿ ಮಾಯ: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಚಾಕಚಕ್ಯತೆ | Watch video

15/02/2026 12:25 PM
State News
KARNATAKA

ALERT : `ಒಳ ಉಡುಪು’ಗಳನ್ನು ಎಷ್ಟು ದಿನಗಳವರೆಗೆ ಬಳಸಬಹುದು? ಇವುಗಳಿಗೂ ಇದೆ `ಎಕ್ಸ್ ಪೈರಿ ಡೇಟ್‌ !

By kannadanewsnow5715/02/2026 12:47 PM KARNATAKA 3 Mins Read

ಒಳಉಡುಪುಗಳನ್ನು ಎಷ್ಟು ಹೊತ್ತು ಬಳಸಬೇಕು ಮತ್ತು ಯಾವಾಗ ಬದಲಾಯಿಸಬೇಕು ಎಂದು ನಿಮಗೆ ತಿಳಿದಿದೆಯೇ? ಒಳ ಉಡುಪುಗಳ ಸರಿಯಾದ ಬಳಕೆ ಮತ್ತು…

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ವೇಳೆ ಘೋರ ದುರಂತ : ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವು!

15/02/2026 12:39 PM

BIG NEWS : ಯುವತಿಯರ ಬಳಿ ಹಣ ಪಡೆದು ವಂಚನೆ : ಪತಿಯ ಪ್ರೀತಿ, ಪ್ರೇಮ ಪ್ರಣಯದಾಟಕ್ಕೆ ಬೇಸತ್ತ ಪತ್ನಿ, ದೂರು ಸಲ್ಲಿಕೆ!

15/02/2026 12:27 PM

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

15/02/2026 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.