Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

31/12/2025 9:40 AM

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

31/12/2025 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟ್ ವಜಾ
INDIA

ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟ್ ವಜಾ

By kannadanewsnow0927/11/2024 3:30 PM

ಬೆಂಗಳೂರು : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.

Share. Facebook Twitter LinkedIn WhatsApp Email

Related Posts

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

31/12/2025 9:15 AM1 Min Read

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

31/12/2025 9:00 AM1 Min Read

SHOCKING : ಹಳ್ಳಿಗೆ ನುಗ್ಗಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ `ಹುಲಿ’ : ವಿಡಿಯೋ ವೈರಲ್ | WATCH VIDEO

31/12/2025 8:13 AM1 Min Read
Recent News

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

31/12/2025 9:40 AM

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

SHOCKING : ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

31/12/2025 9:15 AM

ಮನೆ ಖರೀದಿದಾರರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ `ಗೃಹ ಸಾಲ’ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ..!

31/12/2025 9:00 AM
State News
KARNATAKA

ಹೊಸ ವರ್ಷದಲ್ಲಿ ಯಾವುದೇ ತೊಂದರೆ ಆಗಬಾರದು ಅಂದರೇ ನಾಳೆ ತಪ್ಪದೇ ಈ ಮಂತ್ರವನ್ನು ಪಠಿಸಿ

By kannadanewsnow0931/12/2025 9:40 AM KARNATAKA 4 Mins Read

ಜನವರಿ 1 ರಂದು ಬೆಳಿಗ್ಗೆ ಎದ್ದಾಗ ಈ ಮಾತನ್ನು 3 ಬಾರಿ ಹೇಳಿದರೆ, ಮುಂದಿನ ವರ್ಷ ನಿಮಗೆ ಯಾವುದೇ ತೊಂದರೆಯಾಗದಂತೆ…

Personality test : ನಿಮ್ಮ ತುಟಿಗಳ ಆಕಾರದಿಂದಲೂ `ವ್ಯಕ್ತಿತ್ವ’ ತಿಳಿಯಬಹುದು.! ಹೇಗೆ ಗೊತ್ತಾ?

31/12/2025 9:30 AM

ಈ ಯೋಜನೆಯಲ್ಲಿ ಪ್ರತಿ ತಿಂಗಳು ಕೇವಲ 15 ಸಾವಿರ ರೂ.ಹೂಡಿಕೆ ಮಾಡಿದ್ರೆ ಸಿಗಲಿದೆ 25 ಲಕ್ಷ ರೂ.! ಇದು ಸರ್ಕಾರಿ ಗ್ಯಾರಂಟಿ.!

31/12/2025 8:45 AM

ಗಮನಿಸಿ : ನಿಮ್ಮ ದೇಹದ ಮೇಲಿರುವ `ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!

31/12/2025 7:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.