Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬಾಯಿ ಹುಣ್ಣಿ’ನಿಂದ ಬಳಲುತ್ತಿದ್ದೀರಾ? ಬಾಬಾ ರಾಮದೇವ್ ತಿಳಿಸಿದ ಈ ಸರಳ ಸುಲಭ ಪರಿಹಾರ ಅನುಸರಿಸಿ!

15/11/2025 10:05 PM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

15/11/2025 9:56 PM

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ

15/11/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!
KARNATAKA

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.!

By kannadanewsnow5729/11/2024 8:06 AM

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಸ್ತ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸಲು ಹಾಗೂ ಕಟಾಯಿಸಲಾದ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಜಿಲ್ಲಾಧಿಕಾರಿ, ಮಂಡ್ಯ ಜಿಲ್ಲೆ ಇವರಿಗೆ ಸಂದಾಯ ಮಾಡಲು ಈ ಕೆಳಗೆ ಸೂಚಿಸಿರುವ ಷರತ್ತು ಮತ್ತು ನಿಬಂಧನೆಗೊಳಪಟ್ಟು ಸರ್ಕಾರವು ಮಂಜೂರಾತಿ ನೀಡಿದೆ.

1) ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.

2) ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.

3) ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.

4) ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು.

1. ವೇತನ ಬಿಲ್ಲಿನಲ್ಲಿ ಕಟಾಯಿಸಲಾದ ಮೊತ್ತವನ್ನು ಜಿಲ್ಲಾ ಖಜಾನಾಧಿಕಾರಿಗಳು ಈ ಉದ್ದೇಶಕ್ಕಾಗಿ ಖಜಾನೆಯಲ್ಲಿ ಈಗಾಗಲೇ ತೆರೆದಿರುವ Deposit Account ಗೆ ಜಮೆ ಮಾಡುವುದು.ಈ ರೀತಿ ಜಮೆಯಾದ ಒಟ್ಟು ಮೊತ್ತವನ್ನು Deposit ಖಾತೆಯಿಂದ ಜಿಲ್ಲಾಧಿಕಾರಿಗಳ PD ಖಾತೆಗೆ TTR ಮೂಲಕ ಖಜಾನಾಧಿಕಾರಿಗಳು ವರ್ಗಾವಣೆ ಮಾಡುವುದು.ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಗೆ ಜಮೆ ಮಾಡಲಾದ ಮೊತ್ತವನ್ನು ಪಿ.ಡಿ. ಖಾತೆಯಿಂದ ಸಾಹಿತ್ಯ ಸಮ್ಮೇಳನದ ಪ್ರಾಧಿಕಾರದ ಅಧಿಕೃತ ಖಾತೆಗೆ ಜಮೆ ಮಾಡುವುದು.

2024ರ ನವೆಂಬರ್ ತಿಂಗಳಿನಲ್ಲಿ ಸ್ವೀಕರಿಸಲಾದ ವೇತನ ಬಿಲ್ಲುಗಳ ನಿರ್ವಹಣೆಯನ್ನು 2024ರ ಡಿಸೆಂಬರ್ 28ನೇ ದಿನಾಂಕದೊಳಗೆ ಪೂರೈಸಬೇಕು.ಮಹಾಲೇಖಪಾಲರು ನೀಡಿದ ಅಧಿಕಾರ ಪತ್ರದ ಮೇಲೆ ತಮ್ಮ ವೇತನವನ್ನು ಖಜಾನೆಯಿಂದ ಪಡೆಯುವ ಅಧಿಕಾರಿಗಳ ಪ್ರಕರಣದಲ್ಲಿಯೂ ಸಹ ಮೇಲೆ ಕಾಣಿಸಿದ ಕ್ರಮವನ್ನು ಪಾಲಿಸುವುದು ಎಂದು ಸೂಚನೆ ನೀಡಿದೆ.

BIG NEWS : 87ನೇ ‘ಕನ್ನಡ ಸಾಹಿತ್ಯ ಸಮ್ಮೇಳನ’ : ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನ ಕಡಿತ.! BIG NEWS: 87th 'Kannada Sahitya Sammelana': One day pay cut for state government employees.!
Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

15/11/2025 9:56 PM2 Mins Read

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ

15/11/2025 9:47 PM3 Mins Read

ರಾಜ್ಯದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಬೆಲಯಡಿ ಖರೀದಿಗೆ ನೋಂದಣಿ ಆರಂಭ

15/11/2025 9:42 PM1 Min Read
Recent News

‘ಬಾಯಿ ಹುಣ್ಣಿ’ನಿಂದ ಬಳಲುತ್ತಿದ್ದೀರಾ? ಬಾಬಾ ರಾಮದೇವ್ ತಿಳಿಸಿದ ಈ ಸರಳ ಸುಲಭ ಪರಿಹಾರ ಅನುಸರಿಸಿ!

15/11/2025 10:05 PM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

15/11/2025 9:56 PM

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ

15/11/2025 9:47 PM

ರಾಜ್ಯದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಬೆಲಯಡಿ ಖರೀದಿಗೆ ನೋಂದಣಿ ಆರಂಭ

15/11/2025 9:42 PM
State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By kannadanewsnow0915/11/2025 9:56 PM KARNATAKA 2 Mins Read

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ವಿವಿಧ…

ಕನಿಷ್ಠ ಬೆಂಬಲ ಯೋಜನೆಯಡಿ ಜೋಳ, ರಾಗಿ, ಕಿರುಧಾನ್ಯಗಳ ಖರೀದಿ

15/11/2025 9:47 PM

ರಾಜ್ಯದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಬೆಂಬಲ ಬೆಲಯಡಿ ಖರೀದಿಗೆ ನೋಂದಣಿ ಆರಂಭ

15/11/2025 9:42 PM

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ‌ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್

15/11/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.