Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ನಿಮಗೆ ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಗೆ ಗುಡ್ ಬೈ ಹೇಳಿ.!

30/01/2026 11:12 AM

BREAKING : ಲಕ್ಕುಂಡಿಯಲ್ಲಿ ಉತ್ಖನನ ವೇಳೆ ನಿಜವಾದ ಹಾವು ಪತ್ತೆ : ಗ್ರಾಮಸ್ಥರಲ್ಲಿ ಹೆಚ್ಚಿದ ಭಯ!

30/01/2026 11:12 AM

BIG NEWS : 400 ಕೋಟಿ ರಾಬರಿ ಕೇಸ್ ನಲ್ಲಿ ನಮ್ಮ ಪೊಲೀಸರು ಭಾಗಿಯಾಗಿಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

30/01/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಐವಿ ರಿಂಗರ್ ಲ್ಯಾಕ್ಟೇಟ್’ ಬಳಕೆಗೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯಾದ್ಯಂತ ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಐವಿ ರಿಂಗರ್ ಲ್ಯಾಕ್ಟೇಟ್’ ಬಳಕೆಗೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್

By kannadanewsnow0930/11/2024 2:56 PM

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನ ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ‌ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನ ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಆ ಬಳಿಕ ಕಂಪನಿಯವರು ಹೈ ಕೋರ್ಟ್ ನಿಂದ ಆದೇಶ ಪಡೆದ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬರೋಟರಿಯಲ್ಲಿ ಟೆಸ್ಟಿಂಗ್ ನಡೆದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂತು.

ಸಿ.ಡಿ.ಎಲ್ ನವರ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಟೆಸ್ಟಿಂಗ್ ನಡೆಸಿ ಸ್ಟ್ಯಾಂಡರ್ಡ್ ಕ್ವಾಲಿಟಿಯ ಕೆಲವು ಬ್ಯಾಚ್ ಗಳ ದ್ರಾವಣವನ್ನ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ.‌

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನ ಅನರೋಬಿಕ್ ಟೆಸ್ಟ್ ಗೆ ಕಳಿಸಿದ್ದೇವೆ. ಬಾಣಂತಿಯರ ಸಾವಿಗೆ ಐವಿ ದ್ರಾವಣವೂ ಒಂದು ಕಾರಣವಾಗಿರಬಹುದಾ ಅಥವಾ ಇಲ್ಲಾವಾ ಎಂಬುದು ಅನರೋಬಿಕ್ ಟೆಸ್ಟ್ ನಲ್ಲಿ ಸ್ಪಷ್ಟತೆ ಸಿಗಲಿದೆ.‌ ವಾರದಲ್ಲಿ ಈ ಟೆಸ್ಟಿಂಗ್ ವರದಿ ಬರಲಿದೆ. ಆ ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯ ವರೆಗೆ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ. ನಮಗೆ ಪ್ರತಿಯೊಂದು ಜೀವವು ಮುಖ್ಯ. ಈ ರೀತಿಯ ಅನುಮಾನಗಳು ವ್ಯಕ್ತವಾದಾಗ ಮುನ್ನೆಚ್ಚೆರಿಕೆ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಸದಂತೆ ಎಲ್ಲ‌ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

BREAKING : ಬೆಳಗಾವಿ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾ ದಾಳಿ : ‘IV’ ಗ್ಲುಕೋಸ್ ಬಾಕ್ಸ್ ಕಂಡು ಶಾಕ್ ಆದ ಅಧಿಕಾರಿಗಳು

BIG NEWS : ಯಾರು ಕಣ್ಣೀರು ಹಾಕಬಾರದು, ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ : ನಿಖಿಲ್ ಕುಮಾರಸ್ವಾಮಿ ಹೇಳಿಕೆ

Share. Facebook Twitter LinkedIn WhatsApp Email

Related Posts

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ನಿಮಗೆ ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಗೆ ಗುಡ್ ಬೈ ಹೇಳಿ.!

30/01/2026 11:12 AM1 Min Read

BREAKING : ಲಕ್ಕುಂಡಿಯಲ್ಲಿ ಉತ್ಖನನ ವೇಳೆ ನಿಜವಾದ ಹಾವು ಪತ್ತೆ : ಗ್ರಾಮಸ್ಥರಲ್ಲಿ ಹೆಚ್ಚಿದ ಭಯ!

30/01/2026 11:12 AM1 Min Read

BIG NEWS : 400 ಕೋಟಿ ರಾಬರಿ ಕೇಸ್ ನಲ್ಲಿ ನಮ್ಮ ಪೊಲೀಸರು ಭಾಗಿಯಾಗಿಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

30/01/2026 11:08 AM1 Min Read
Recent News

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ನಿಮಗೆ ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಗೆ ಗುಡ್ ಬೈ ಹೇಳಿ.!

30/01/2026 11:12 AM

BREAKING : ಲಕ್ಕುಂಡಿಯಲ್ಲಿ ಉತ್ಖನನ ವೇಳೆ ನಿಜವಾದ ಹಾವು ಪತ್ತೆ : ಗ್ರಾಮಸ್ಥರಲ್ಲಿ ಹೆಚ್ಚಿದ ಭಯ!

30/01/2026 11:12 AM

BIG NEWS : 400 ಕೋಟಿ ರಾಬರಿ ಕೇಸ್ ನಲ್ಲಿ ನಮ್ಮ ಪೊಲೀಸರು ಭಾಗಿಯಾಗಿಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

30/01/2026 11:08 AM

SHOCKING : ತೆಂಗಿನ ಕಾಯಿಯಲ್ಲಿ ಸಿಲುಕಿಕೊಂಡ `ಖಾಸಗಿ ಅಂಗ’ : ಅವಮಾನದಿಂದ ಯುವಕ ಆತ್ಮಹತ್ಯೆಗೆ ಶರಣು.!

30/01/2026 11:05 AM
State News
KARNATAKA

ಪುರುಷರೇ ಗಮನಿಸಿ : `ಒಣಮೀನು’ ಸೇವನೆಯಿಂದ ನಿಮಗೆ ವರ್ಷಗಳಿಂದ ಕಾಡುತ್ತಿರುವ ಈ ಸಮಸ್ಯೆಗೆ ಗುಡ್ ಬೈ ಹೇಳಿ.!

By kannadanewsnow5730/01/2026 11:12 AM KARNATAKA 1 Min Read

ನಮ್ಮಲ್ಲಿ ಹಲವರು ಮೀನು ತಿನ್ನುತ್ತಾರೆ. ಏಕೆಂದರೆ ಇದು ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು. ಇದಲ್ಲದೆ, ಇದು ಮಾಂಸಾಹಾರಿ ಪ್ರಿಯರಿಗೆ ಸಹ…

BREAKING : ಲಕ್ಕುಂಡಿಯಲ್ಲಿ ಉತ್ಖನನ ವೇಳೆ ನಿಜವಾದ ಹಾವು ಪತ್ತೆ : ಗ್ರಾಮಸ್ಥರಲ್ಲಿ ಹೆಚ್ಚಿದ ಭಯ!

30/01/2026 11:12 AM

BIG NEWS : 400 ಕೋಟಿ ರಾಬರಿ ಕೇಸ್ ನಲ್ಲಿ ನಮ್ಮ ಪೊಲೀಸರು ಭಾಗಿಯಾಗಿಲ್ಲ : ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

30/01/2026 11:08 AM

SHOCKING : ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ : ಮಗಳ ಕೈಗೆ ಮೊಬೈಲ್ ಕೊಟ್ಟು ವಿಡಿಯೋ ಮಾಡಿಸಿದ ತಂದೆ!

30/01/2026 11:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.