ಬೆಂಗಳೂರು : ನಾವು ಹಾಗೂ ಎಚ್ ಡಿ ದೇವೇಗೌಡರು ಜೆಡಿಎಸ್ ಪಕ್ಷ ಕಟ್ಟುವ ಸಂದರ್ಭದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಇರಲೇ ಇಲ್ಲ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಜೆಡಿಎಸ್ ಪಕ್ಷ ಕಟ್ಟಿದ್ದು ನಾವು ಈಗ ಆ ಪಕ್ಷ ಜಾತ್ಯಾತೀತ ಆಗಿದೆಯಾ? ಜೆಡಿಎಸ್ ನವರು ಕೋಮುವಾದಿಗಳ ಜೊತೆಗೆ ಸೇರಿದ್ದಾರೆ. ನಾವು ಪಕ್ಷ ಕಟ್ಟುವಾಗ ಹೆಚ್ಡಿ ಕುಮಾರಸ್ವಾಮಿ ಇರಲಿಲ್ಲ ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ ಆಗ ಅವರು ಇರಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು
ಜೆಡಿಎಸ್ ನಿಂದ ಹೊರ ಹಾಕಿದ್ದಕ್ಕೆ ಅಹಿಂದ ಸಮಾವೇಶ ಶುರು ಮಾಡಿದ್ದು. ಇನ್ಮುಂದೆ ಪಕ್ಷ ಬಿಟ್ಟರು ಅಂತ ಹೇಳಬೇಡಿ. ಹಾಸನದಲ್ಲೂ ನಾನು ಅಹಿಂದ ಸಮಾವೇಶವನ್ನು ಮಾಡಿದ್ದೇನೆ. ಈಗ ಅಭಿನಂದನೆ ಹೇಳುವುದಕ್ಕೆ ಸಮಾವೇಶ ಮಾಡುತ್ತಿರುವುದು. ಜನರು ಕಾರ್ಯಕರ್ತರಿಗೆ ಅಭಿನಂದನೆ ಹೇಳಲು ಸಮಾವೇಶ ಮಾಡುತ್ತೇವೆ ಸರ್ಕಾರ, ಕೆಪಿಸಿಸಿ, ಸ್ವಾಭಿಮಾನಿ ಒಕ್ಕೂಟ ಸೇರಿ ಸಮಾವೇಶ ಮಾಡುತ್ತಿದ್ದೇವೆ.ಸಮಾವೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ರಣದೀಪ ಸಿಂಗ್ ಸುರ್ಜೆವಾಲ ಅವರಿಗೂ ಆಹ್ವಾನ ನೀಡಲಾಗಿದೆ ಎಂದರು.
ಇನ್ನು ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣ ಏನೇ ಇದ್ದರೂ ಕಾನೂನಿನ ಚೌಕಟ್ಟಿನೊಳಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದೆ ವೇಳೆ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಾನೂನು ಎಲ್ಲರಿಗೂ ಒಂದೇ ನನಗೂ ಒಂದೇ ಸ್ವಾಮೀಜಿಯವರಿಗೂ ಒಂದೇ. ಸ್ವಾಮೀಜಿ ಅವರ ವಿಚಾರಣೆ ಹಾಗೂ ಬಂಧನದ ಕುರಿತಂತೆ ಪೊಲೀಸರು ನೋಡಿಕೊಳ್ಳುತ್ತಾರೆ ಇಂದು ಜಿ ಪರಮೇಶ್ವರ್ ತಿಳಿಸಿದರು.