Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

OPS ಜಾರಿ, ಕೇಂದ್ರ ಮಾದರಿ ವೇತನಕ್ಕೆ ಸಂಘವು ಹೋರಾಟ ರೂಪಿಸುತ್ತಿದೆ: ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ

31/12/2025 6:01 PM

ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ

31/12/2025 5:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಪಕ್ಷದ ಬಲವರ್ಧನೆ, ಸಂಘಟನೆ ಜವಾಬ್ದಾರಿಯನ್ನ ನಿಖಿಲ್ ಗೆ ಒಪ್ಪಿಸಲಾಗಿದೆ: HDK
KARNATAKA

ರಾಜ್ಯಾದ್ಯಂತ ಪಕ್ಷದ ಬಲವರ್ಧನೆ, ಸಂಘಟನೆ ಜವಾಬ್ದಾರಿಯನ್ನ ನಿಖಿಲ್ ಗೆ ಒಪ್ಪಿಸಲಾಗಿದೆ: HDK

By kannadanewsnow0901/12/2024 5:39 PM

ರಾಮನಗರ: ಇಂದು ಬಿಡದಿಯ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಜತೆ ಸಭೆ ನಡೆಸಿದರು.

ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೊಂದಣಿ ಪುನಾರಂಭವಾಗಬೇಕು ಎಂದು ಸಚಿವರು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದರು.ಇದೇ ವೇಳೆ ಉಪಚುನಾವಣೆಯಲ್ಲಿ ತ್ಯಾಗಮಯವಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಶ್ಲಾಘನೆ ವ್ಯಕ್ತಪಡಿಸಿದರು.

ನೀವು ಪಟ್ಟ ಶ್ರಮದಿಂದ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಇದು ಮುಂದಿನ ಸವಾಲುಗಳಿಗೆ ತಯಾರಾಗಲು ಸೂಚನೆ ಎಂದರು.

ಸದಸ್ಯತ್ವ ಚಾಲನೆ ಪುನಾರಂಭ

“ಪ್ರತಿ ಬೂತ್‌ಗಳಲ್ಲಿ ಸದಸ್ಯತ್ವ ನೊಂದಣಿ ಚಾಲನೆ ಆಗಬೇಕು. ಇನ್ನು ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು.ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನ ತೀರ್ಮಾನಿಸುವುದಿಲ್ಲ ಸಚಿವರು ತಿಳಿಸಿದರು.

2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ 75 ಸ್ಥಾನಗಳಿಗೆ ಕುಸಿಯಿತು. ಸಾಮಾನ್ಯ ಚುನಾವಣೆಯ ಚಿತ್ರವೇ ಬೇರೆ, ಸ್ವತಃ ಅವರ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.ಈ ಸರ್ಕಾರವನ್ನು ಕೆಡವಲು ನಾವು ಬಿಜೆಪಿಯೊಂದಿಗೆ ಸಹಕಾರ ಮಾಡಬೇಕಾಗಿದೆ ಎಂದು ತಿಳಿಸಿದರು.

“ಜೆಡಿಎಸ್ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ”

“ಜೆಡಿಎಸ್ ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಮುಖ್ಯಮಂತ್ರಿ ಆದರು, ನಂತರ ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನಗಳನ್ನು ಗೆದ್ದಿದ್ದರೂ ನಾನು ಕೇಂದ್ರ ಸಚಿವನಾಗಿದ್ದೇನೆ,” ಎಂದು ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನವನ್ನು ಅವರು ನೆನೆಸಿದರು. “ಪ್ರಧಾನಮಂತ್ರಿ ಮೋದಿ ಹೆಮ್ಮೆ ಪಡುವಂತೆ ಕೆಲಸ ಮಾಡಬೇಕು.ಎಂದು ಅವರು ನನಗೆ ಮಾರ್ಗದರ್ಶನ ನೀಡಿದರು. ನಾನು ಆ ಜವಾಬ್ದಾರಿಯನ್ನು ಪರಿಶ್ರಮದಿಂದ ಪೂರೈಸುತ್ತಿದ್ದೇನೆ,” ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ನಾಯಕ

ಜೆಡಿಎಸ್ ಯುವ ಘಟಕದ ಅಧ್ಯಕ್ಷನಾದ ನಿಖಿಲ್ ಕುಮಾರಸ್ವಾಮಿ ಕುರಿತು ಅವರು ವಿಶ್ವಾಸ ವ್ಯಕ್ತಪಡಿಸಿದರು. “ನಿಖಿಲ್ ನನ್ನ ಮಗನಾಗಿರುವುದರಿಂದ ನಾನು ಮಾತನಾಡುತ್ತಿಲ್ಲ. ಅವರಿಗಿರುವ ಗುಣದ ಬಗ್ಗೆ ಮಾತಾಡುತ್ತೇನೆ.ಇಂದು ನಾನು ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದೇನೆ. ಅವನನ್ನು ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮಗೆ ಇದೆ,” ಎಂದು ಹೇಳಿದರು.

ಸಂಘಟನೆಯ ಏಕತೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ತಯಾರಿ

ಪಕ್ಷದ ಏಕತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ಪಕ್ಷದ ಅಸಮಾಧಾನಗಳಿದ್ದರೆ, ಅವನ್ನು ಬಗೆಹರಿಸಿಕೊಳ್ಳಿ. ಆದರೆ, ನಾವು ಏಕತೆಗೊಳಿಸಿದ ಮುಖವನ್ನೇ ಪ್ರದರ್ಶಿಸಿದ್ದೇವೆ ಎಂದು ನಂಬಿದ್ದೇನೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೆಲ್ಲುವ ದೃಷ್ಟಿಯಿಂದ ಮುಖ್ಯ,” ಎಂದು ತಿಳಿಸಿದರು.

ನಮ್ಮ ಪಕ್ಷವು ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ. ಜಾತಿ ರಾಜಕಾರಣದಲ್ಲಿ ನಮಗೆ ನಂಬಿಕೆ ಇಲ್ಲ. ಎಲ್ಲ ಸಮುದಾಯಗಳನ್ನು ನಮ್ಮೊಂದಿಗೆ ಕೊಂಡೊಯ್ಯಲು ಬದ್ಧರಾಗಿದ್ದೇವೆ. ನಾವು ಒಗ್ಗಟ್ಟಿನಿಂದ ಇದ್ದರೆ, ನಮ್ಮ ಪಕ್ಷವನ್ನು ಯಾವುದೇ ಶಕ್ತಿಗಳು ಅಂತ್ಯಗೊಳಿಸಲಾರವು,” ಎಂದು ಅವರು ಖಚಿತಪಡಿಸಿದರು.

ಈ ಸಭೆಯಲ್ಲಿ ಬಂಡೆಪ್ಪ ಖಾಶೆಂಪುರ್, ಹೆಚ್‌.ಕೆ ಕುಮಾರಸ್ವಾಮಿ, ಸಾ. ರಾ ಮಹೇಶ್, ಸುರೇಶ ಬಾಬು, ಸಿಎಸ್ ಪುಟ್ಟರಾಜು, ಸಮೃದ್ಧಿ ಮಂಜುನಾಥ, ನಿಖಿಲ್ ಕುಮಾರಸ್ವಾಮಿ, ಬಾಲಕೃಷ್ಣ,,ಶಾರದಾ ಪೂರ್ಯ ನಾಯಕ್, ಲೀಲಾ ದೇವಿ ಪ್ರಸಾದ್, ಎಂಟಿ ಕೃಷ್ಣಪ್ಪ, ಜಿ.ಟಿ ಹರೀಶ್ ಗೌಡ, ಮಂಜೇಗೌಡ, ರಮೇಶ್ ಗೌಡ, ತಿಪ್ಪೇಸ್ವಾಮಿ ಮತ್ತು ನಾಗರಾಜಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಸಭೆ ಪಕ್ಷವನ್ನು ಬಲಪಡಿಸುವ ಮತ್ತು ಮುಂದಿನ ಸವಾಲುಗಳಿಗೆ ತಯಾರಾಗುವ ನವೀಕೃತ ನಿಶ್ಚಯದೊಂದಿಗೆ ಕೊನೆಗೊಂಡಿತು.

ರಾಜ್ಯದ ‘ನೋಂದಾಯಿತ ಕಾರ್ಮಿಕ’ರಿಗೆ ಮಹತ್ವದ ಮಾಹಿತಿ: ‘ಕುಟುಂಬ ಪಿಂಚಣಿ’ಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ

Watch Video: ಫೆಂಗಲ್‌ ಚಂಡಮಾರುತ ಎಫೆಕ್ಟ್: ಲ್ಯಾಂಡ್‌ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ, ವಿಡಿಯೋ ವೈರಲ್‌

Share. Facebook Twitter LinkedIn WhatsApp Email

Related Posts

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM3 Mins Read

OPS ಜಾರಿ, ಕೇಂದ್ರ ಮಾದರಿ ವೇತನಕ್ಕೆ ಸಂಘವು ಹೋರಾಟ ರೂಪಿಸುತ್ತಿದೆ: ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ

31/12/2025 6:01 PM3 Mins Read

ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ

31/12/2025 5:27 PM1 Min Read
Recent News

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

OPS ಜಾರಿ, ಕೇಂದ್ರ ಮಾದರಿ ವೇತನಕ್ಕೆ ಸಂಘವು ಹೋರಾಟ ರೂಪಿಸುತ್ತಿದೆ: ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ

31/12/2025 6:01 PM

ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ

31/12/2025 5:27 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM
State News
KARNATAKA

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

By kannadanewsnow0931/12/2025 6:07 PM KARNATAKA 3 Mins Read

“ಶ್ರೀ ಮಹಾಲಕ್ಷ್ಮೀ” ಪೂಜೆಯನ್ನು ಮಾಡುವ ಸ್ತ್ರೀಯರು “ತೆಂಗಿನಕಾಯಿ” ಯನ್ನು ಪುರುಷರಿಂದ ಒಡೆಸಿ, ನೀವು ಬೇಡ..! “ತೆಂಗಿನಕಾಯಿ” ಯನ್ನು ತಾಂಬೂಲದೊಡನೆ ದಾನ…

OPS ಜಾರಿ, ಕೇಂದ್ರ ಮಾದರಿ ವೇತನಕ್ಕೆ ಸಂಘವು ಹೋರಾಟ ರೂಪಿಸುತ್ತಿದೆ: ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ

31/12/2025 6:01 PM

ನಾಳೆಯಿಂದ KSRTC ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭ

31/12/2025 5:27 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.