ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.ಆದರೆ ಶೋಕಾಸ್ ನೋಟಿಸ್ ಗೆ ಬಿಜೆಪಿ ಶಾಸಕ ಯತ್ನಾಳ್ ಉತ್ತರ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದರು.
ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಸಭೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಆದರೆ ಶೋಕಾಸ್ ನೋಟಿಸ್ ಗೆ ಯತ್ನಾಳ್ ಇದುವರೆಗೂ ಉತ್ತರ ನೀಡಿಲ್ಲ ಎಂದು ತಿಳಿಸಿದರು.
ಕಳೆದ ಹಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಂಬಲಿಗರ ನಡುವೆ ಬಡ ಬಡಿದಾಟ ನಡೆದಿತ್ತು. ಈ ವಿಚಾರವಾಗಿ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿ ಉತ್ತರಿಸುವಂತೆ ಸೂಚನೆ ನೀಡಿತ್ತು ಆದರೆ ಶಾಸಕ ಯತ್ನಾಳ್ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.
ಹಾಗಾಗಿ ಇಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ಈ ಒಂದು ಬಣಬಡಿದಾಟ ಶಮನ ಮಾಡಲು ರಾಜಕೀಯ ಆಗಮಿಸಿದ್ದರು. ಮಲ್ಲೇಶ್ವರಂ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು, ಸದ್ಯ ರಾಜ ಬಿಜೆಪಿಯಲ್ಲಿ ಯಾವುದೇ ಬಡ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಅವರು ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.








