Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM

‘ಭಾರತ-ಪಾಕ್ ಯುದ್ದ ಸೇರಿ ಎಂಟು ಕದನ ನಿಲ್ಲಿಸಿದ್ದೇನೆ’ : ಟ್ರಂಪ್

21/10/2025 6:28 AM

ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರ

21/10/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜಕೀಯ ನಿವೃತ್ತಿ ಘೋಷಿಸುತ್ತೇನೆ’ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ತೋರಿಸಲಿಲ್ಲ : CM ಸಿದ್ದರಾಮಯ್ಯ
KARNATAKA

BIG NEWS : `ರಾಜಕೀಯ ನಿವೃತ್ತಿ ಘೋಷಿಸುತ್ತೇನೆ’ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ತೋರಿಸಲಿಲ್ಲ : CM ಸಿದ್ದರಾಮಯ್ಯ

By kannadanewsnow5708/12/2024 4:02 PM

ಬಳ್ಳಾರಿ : ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ ಸಾಬೀತುಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ. ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ.
ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು.

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನ ರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ. ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ?.

ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ.

ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಲೋಕಲ್ ಲೀಡರ್ ಗಳವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ, ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2,000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2,172 ಮನೆಗಳನ್ನು ನೀಡಲಾಗಿದೆ‌. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.‌ ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಿದೆ ಎಂದರು.

– ಮಾತನಾಡಿದೆ.

BIG NEWS : `ರಾಜಕೀಯ ನಿವೃತ್ತಿ ಘೋಷಿಸುತ್ತೇನೆ' ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ತೋರಿಸಲಿಲ್ಲ : CM ಸಿದ್ದರಾಮಯ್ಯ BIG NEWS : PM Modi did not show courage to accept my challenge to 'announce political retirement': CM Siddaramaiah
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM1 Min Read

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು, ಮಕ್ಕಳು ಸೇರಿದಂತೆ 8 ಜನರಿಗೆ ಗಾಯ

21/10/2025 6:13 AM1 Min Read

BREAKING : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ : 6 ಜನರಿಗೆ ಗಂಭೀರ ಗಾಯ

21/10/2025 6:03 AM1 Min Read
Recent News

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

21/10/2025 6:28 AM

‘ಭಾರತ-ಪಾಕ್ ಯುದ್ದ ಸೇರಿ ಎಂಟು ಕದನ ನಿಲ್ಲಿಸಿದ್ದೇನೆ’ : ಟ್ರಂಪ್

21/10/2025 6:28 AM

ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರ

21/10/2025 6:24 AM

‘ಕತ್ತಲೆಯ ಮೇಲೆ ಬೆಳಕಿನ ವಿಜಯದ ಕಾಲಾತೀತ ಜ್ಞಾಪನೆ’: ದೀಪಾವಳಿ ಶುಭಾಶಯ ಕೋರಿದ ಡೊನಾಲ್ಡ್ ಟ್ರಂಪ್

21/10/2025 6:19 AM
State News
KARNATAKA

BREAKING : ರಾಜ್ಯದಲ್ಲಿ ಕೋಮುಗಲಭೆ ನಿಗ್ರಹಕ್ಕೆ ಮಸೂದೆ ಜಾರಿ : ಸಿಎಂ ಸಿದ್ದರಾಮಯ್ಯ

By kannadanewsnow0521/10/2025 6:28 AM KARNATAKA 1 Min Read

ದಕ್ಷಿಣಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕ ತರುವವರು. ಅಪಪ್ರಚಾರಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ…

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು, ಮಕ್ಕಳು ಸೇರಿದಂತೆ 8 ಜನರಿಗೆ ಗಾಯ

21/10/2025 6:13 AM

BREAKING : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ : 6 ಜನರಿಗೆ ಗಂಭೀರ ಗಾಯ

21/10/2025 6:03 AM

ಬೆಂಗಳೂರು : ಗ್ರಾಂ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ!

21/10/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.