Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಸ್ಟ್ ನೈಟ್ ನಲ್ಲೇ ಶಾಕ್ ಕೊಟ್ಟ ನವವಧು: ’90 ಲಕ್ಷ ಕೊಟ್ಟರೆ ಮಾತ್ರ ಮುಖ ತೋರಿಸುವೆ’ ಎಂದು ಪಟ್ಟು : ಪತಿಯ ಇಡೀ ಕುಟುಂಬವನ್ನೇ ಜೀವಂತ ದಹಿಸಲು ಯತ್ನ!

15/04/2026 9:34 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದ್ದೇವೆ: ಬಿವೈ ವಿಜಯೇಂದ್ರ
KARNATAKA

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದ್ದೇವೆ: ಬಿವೈ ವಿಜಯೇಂದ್ರ

By kannadanewsnow0908/12/2024 7:38 PM

ದಾವಣಗೆರೆ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ರಾಜ್ಯ ಸರಕಾರದ ಭ್ರಷ್ಟಾಚಾರದ ಬಂಡವಾಳವನ್ನು ಬಯಲಿಗೆ ಎಳೆಯುತ್ತೇವೆ; ಉತ್ತರ ಕರ್ನಾಟಕ ಸೇರಿ ರಾಜ್ಯದ ವಿಚಾರದಲ್ಲಿ ಅಭಿವೃದ್ಧಿಶೂನ್ಯ ಸರಕಾರದ ಕಿವಿಹಿಂಡುವ ಕೆಲಸವನ್ನು ವಿರೋಧ ಪಕ್ಷವಾಗಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರಿಸಿದರು. ರೈತರು, ಬಡವರಿಗೆ ನ್ಯಾಯ ಸಿಗುತ್ತಿಲ್ಲ; ಮನೆಗಳನ್ನು ಕೊಡುತ್ತಿಲ್ಲ. ರೈತರು ಬೆಳೆದ ಬೆಳೆ ನಾಶವಾದರೆ ಪರಿಹಾರ ಕೊಡುತ್ತಿಲ್ಲ. ಎಲ್ಲ ವರ್ಗದ ಜನರು ಇವತ್ತು ಸಂಕಷ್ಟದಲ್ಲಿದ್ದಾರೆ. ಇವರು ಭ್ರಷ್ಟಾಚಾರದಲ್ಲಿ ಮುಳುಗಿ, ಅಭಿವೃದ್ಧಿ ಮಾಡದ ಕಾರಣ ಜನರಿಗೆ ಕಾಂಗ್ರೆಸ್ ಪಕ್ಷದ ಸರಕಾರ ಶಾಪವಾಗಿ ಪರಿಣಮಿಸಿದೆ ಎಂದು ಟೀಕಿಸಿದರು.

ವಕ್ಫ್ ಸಮಸ್ಯೆ ಸಂಬಂಧ ಪ್ರವಾಸ ಸಂಪೂರ್ಣ ಮುಗಿದಿಲ್ಲ; ಅಧಿವೇಶನ ಮುಗಿದ ಬಳಿಕ ಪ್ರವಾಸವನ್ನು ಮುಂದುವರೆಸುತ್ತೇವೆ. ಅಂತಿಮವಾಗಿ ನಾವು ವರದಿಯನ್ನು ಕೇಂದ್ರದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರಿಗೆ ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಬಡವರಿಗೆ ಅವಮಾನ

ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದೆ, ಹಣ ಕ್ರೋಡೀಕರಿಸಲು ಸಾಧ್ಯವಾಗದೆ ಸರಕಾರ ಪರದಾಡುತ್ತಿದೆ. ಲೋಕಸಭೆ ಚುನಾವಣೆಗೆ 3 ದಿನ ಇದ್ದಾಗ ಗ್ಯಾರಂಟಿಗಳ ಹಣವನ್ನು ಖಾತೆಗೆ ಹಾಕಿದ್ದರು. ಚುನಾವಣೆ ಬಳಿಕ ಮರೆತಿದ್ದರು. ಮೊನ್ನೆ ಉಪ ಚುನಾವಣೆ ಬಂದಾಗ ಮತ್ತೆ ರಿಲೀಸ್ ಮಾಡಿದ್ದು, ಬಡವರಿಗೆ ಅವಮಾನ ಮಾಡುತ್ತಿದ್ದಾರೆ. ಗ್ಯಾರಂಟಿ ಕೊಡಲು ಯಾರೂ ಕೇಳಿರಲಿಲ್ಲ. ಗ್ಯಾರಂಟಿಗಳೂ ಮನೆ ತಲುಪುತ್ತಿಲ್ಲ. ಅಭಿವೃದ್ಧಿಯೂ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು. ಇದರಿಂದ ಆಡಳಿತ ಪಕ್ಷದ ಶಾಸಕರೇ ತಲೆ ಎತ್ತಿ ಓಡಾಡಲು ಆಗುತ್ತಿಲ್ಲ ಎಂದು ವಿವರಿಸಿದರು.

ಬಾಣಂತಿಯರು, ಗರ್ಭಿಣಿಯರು, ನವಜಾತ ಶಿಶುಗಳ ಸಾವು ಸಂಬಂಧ ನಮ್ಮ ಮಹಿಳಾ ಮೋರ್ಚಾದ ತಂಡವು ನಿನ್ನೆ ಭೇಟಿ ಕೊಟ್ಟಿದೆ. ವರದಿ ಪಡೆದು ರಾಜ್ಯ ಸರಕಾರಕ್ಕೆ ಚಾಟಿ ಬೀಸಲಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಯತ್ನಾಳ್ ಅವರು ವಕ್ಫ್ ನೀತಿ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಹೇಳಿದ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಮಾಡಲಿ; ಅವರದು ದೀರ್ಘಾವಧಿಯ ಕಾರ್ಯತಂತ್ರ ಇದೆ. ರಾಷ್ಟ್ರೀಯ ನಾಯಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಅವರ ಎಲ್ಲ ಅನುಮಾನ, ಪ್ರಶ್ನೆ, ಆಸೆಗಳಿಗೆ ಕಾಲವೇ ಉತ್ತರ ಕೊಡಲಿದೆ; ಅವರಿಗೆ ಒಳ್ಳೆಯದಾಗಲಿ, ನಾನೇನೂ ಕೆಟ್ಟದು ಬಯಸುವುದಿಲ್ಲ ಎಂದು ತಿಳಿಸಿದರು.

ಪಕ್ಷದ ಸಂಘಟನೆಗಾಗಿ ನನಗೆ ಈ ಹುದ್ದೆ ಕೊಟ್ಟಿದ್ದಾರೆ; ಮುಖ್ಯಮಂತ್ರಿ ಆಗಲಿ ಎಂದಲ್ಲ; ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM1 Min Read

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM1 Min Read
Recent News

ಫಸ್ಟ್ ನೈಟ್ ನಲ್ಲೇ ಶಾಕ್ ಕೊಟ್ಟ ನವವಧು: ’90 ಲಕ್ಷ ಕೊಟ್ಟರೆ ಮಾತ್ರ ಮುಖ ತೋರಿಸುವೆ’ ಎಂದು ಪಟ್ಟು : ಪತಿಯ ಇಡೀ ಕುಟುಂಬವನ್ನೇ ಜೀವಂತ ದಹಿಸಲು ಯತ್ನ!

15/04/2026 9:34 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM
State News
KARNATAKA

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

By kannadanewsnow0915/04/2026 9:27 AM KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್ ವ್ಯಾಪ್ತಿಯಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ನಡೆದಿದ್ದು, ಮಗಳನ್ನು ಉಸಿರುಗಟ್ಟಿಸಿ ಕೊಂದ ತಾಯಿ, ಬಳಿಕ ತಾನೂ…

ALERT : ಒಂದು ಲೀಟರ್ `ಕೂಲ್ ಡ್ರಿಂಕ್ಸ್’ನಲ್ಲಿ ಎಷ್ಟು ಸಕ್ಕರೆ ಇರಲಿದೆ ಗೊತ್ತಾ? ಇಲ್ಲಿದೆ ಮಾಹಿತಿ

15/04/2026 9:13 AM

BIG NEWS : ರಾಜ್ಯ ಸರ್ಕಾರಿ ನೌಕರರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ

15/04/2026 9:09 AM

SHOCKING : ಬೆಂಗಳೂರಲ್ಲಿ 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ.!

15/04/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.