Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಚಾರ್ಲಿ ಕಿರ್ಕ್ ಹತ್ಯೆ ಶಂಕಿತ ವ್ಯಕ್ತಿಯ ಮೊದಲ ಪೋಟೋ ಬಿಡುಗಡೆ ಮಾಡಿದ FBI | Charlie Kirk Murder Case

11/09/2025 10:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ರಿಟೀಷರ ಕಾಲದಲ್ಲಿ 9 ಕಂಪನಿಗಳಿಗೆ ನೀಡಲಾಗಿದ್ದ ಗುತ್ತಿಗೆ ಅರಣ್ಯಭೂಮಿ ಮರುವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ
KARNATAKA

ಬ್ರಿಟೀಷರ ಕಾಲದಲ್ಲಿ 9 ಕಂಪನಿಗಳಿಗೆ ನೀಡಲಾಗಿದ್ದ ಗುತ್ತಿಗೆ ಅರಣ್ಯಭೂಮಿ ಮರುವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

By kannadanewsnow0909/12/2024 1:55 PM

ಬೆಳಗಾವಿ : ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ್ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5150 ಎಕರೆ ಅರಣ್ಯ ಭೂಮಿಯ ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಕುಶಾಲಪ್ಪ ಎಂ.ಪಿ. (ಸುಜಾ) ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೊಡಗು ಜಿಲ್ಲೆಯಲ್ಲಿ ಮರ್ಕೆರಾ ರಬ್ಬರ್ ಕಂಪನಿ (1074 ಎಕರೆ), ನೀಲಾಂಬುರ್ ರಬ್ಬರ್ ಕಂಪನಿಗೆ (713.03 ಎಕರೆ), ಥಾಮ್ಸನ್ ರಬ್ಬರ್ ಕಂಪನಿ (625 ಎಕರೆ), ಪೋರ್ಟ್ ಲ್ಯಾಂಡ್ ರಬ್ಬರ್ ಕಂಪನಿ (1289.29 ಎಕರೆ), ಟಾಟಾ ಕಾಫಿ ಲಿ. (923.378 ಎಕರೆ), ಗೈನ್ ಲೋರೆನ್ ಪ್ಲಾಂಟೇಷನ್ (279.748 ಎಕರೆ), ಚಾಮರಾಜನಗರ ಜಿಲ್ಲೆಯ ಎಮರಾಲ್ಡ್ ಹೆವೆನ್ ಎಸ್ಟೇಟ್, ಬೇಡಗುಳಿ (37.25 ಎಕರೆ), ಬಿಳಿಗಿರಿ ರಂಗನ ಎಸ್ಟೇಟ್, ಬೇಡಗುಳಿ (25 ಎಕರೆ), ನೀಲಗಿರಿ ಪ್ಲಾಂಟೇಷನ್ ಲಿ. ಹೊನ್ನಮೇಟಿ 184 ಎಕರೆ ಸೇರಿ ಒಟ್ಟು 5150 ಎಕರೆ ಜಮೀನನ್ನು ಗುತ್ತಿಗೆ ನೀಡಲಾಗಿದೆ ಎಂದು ವಿವರಿಸಿದರು.

1492 ಕೋಟಿ ರೂ. ಬಾಕಿ:

ಸದರಿ ಕಂಪನಿಗಳು ಹಲವು ದಶಕಗಳಿಂದ ಗುತ್ತಿಗೆ ಹಣವನ್ನೂ ಪಾವತಿಸಿರುವುದಿಲ್ಲ. ಈ 9 ಕಂಪನಿಗಳಿಂದ ಇಲಾಖೆಗೆ ಬಡ್ಡಿ ಮತ್ತು ದಂಡ ಸೇರಿ ಒಟ್ಟು 1492.18 ಕೋಟಿ ರೂಪಾಯಿ ಬರಬೇಕಿದೆ ಎಂದೂ ತಿಳಿಸಿದರು. ಕಂಪನಿಗಳು ತಮಗೆ 999 ವರ್ಷಗಳಿಗೆ ಲೀಸ್ ನೀಡಲಾಗಿತ್ತು ಎಂದು ಕಂಪನಿಗಳು ವಾದಿಸುತ್ತಿದ್ದವು. 2012ರಲ್ಲಿ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿ ಈ ಗುತ್ತಿಗೆ ಅವಧಿಯನ್ನು 99 ವರ್ಷಕ್ಕೆ ತಗ್ಗಿಸಿದ್ದು, ಅವಧಿ ಮುಗಿದ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ನೋಟಿಸ್ ನೀಡಿತ್ತು. ಆ ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದು, ಪ್ರಸ್ತುತ ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. 12.12.2024ರಂದು ವಿಚಾರಣೆಗೆ ಬರಲಿದೆ ಎಂದೂ ಮಾಹಿತಿ ನೀಡಿದರು.

ಕಾರ್ಯಪಡೆ ರಚನೆ :

ತಾವು ಸಚಿವರಾದ ಬಳಿಕ ಗುತ್ತಿಗೆ ಅರಣ್ಯಭೂಮಿಯ ಮರು ವಶಕ್ಕೆ ಪಡೆಯಲು 5 ಜನ ಸದಸ್ಯರ ಕಾರ್ಯಪಡೆಯನ್ನು ರಚಿಸಲಾಗಿದ್ದು, ಈ ಪಡೆಯು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ, ದಾಖಲೆಗಳನ್ನು ಒಗ್ಗೂಡಿಸಿ ಭೂಮಿ ಮರಳಿ ಪಡೆಯಲು ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ವಿವಿಧ ಉದ್ದೇಶಗಳಿಗೆ ಅರಣ್ಯ ಭೂಮಿಯನ್ನು ಗುತ್ತಿಗೆ ನೀಡಿರುವ ಪ್ರಕರಣಗಳ ಪರಿಶೀಲನೆ, ಗೇಣಿ ವಸೂಲಾತಿ, ಅರಣ್ಯ ಪ್ರದೇಶವನ್ನು ಇಲಾಖೆಗೆ ಹಿಂಪಡೆಯುವ ಬಗ್ಗೆ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರು ಹಲವು ಸಭೆ ನಡೆಸಿ, ಆದ್ಯತೆಯ ಆಧಾರದಲ್ಲಿ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲು ಶ್ರಮಿಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಉದ್ಯೋಗಿಗಳೇ ಗಮನಿಸಿ : ಹೊಸ ಕಂಪನಿಗೆ ಸೇರಿದ ಬಳಿಕ `PF’ ಬ್ಯಾಲೆನ್ಸ್ ವರ್ಗಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

BREAKING : ರಾಜ್ಯ ಸರ್ಕಾರದ ಎಲ್ಲಾ ಇಲಾಖೆ, ಕಚೇರಿಗಳಲ್ಲಿ `ಫೋಟೋವಿಡಿಯೋ’ ಚಿತ್ರೀಕರಣ ನಿಷೇಧದ ಆದೇಶ ಹಿಂಪಡೆದ ಸರ್ಕಾರ.!

Share. Facebook Twitter LinkedIn WhatsApp Email

Related Posts

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM1 Min Read

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM1 Min Read

ಶಿವಮೊಗ್ಗ: ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಕವನ ಸಂಕಲನಕ್ಕೆ ‘ಕಾವ್ಯಸಿರಿ ರಾಷ್ಟ್ರೀಯ ಪುರಸ್ಕಾರ’

11/09/2025 9:41 PM1 Min Read
Recent News

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

11/09/2025 10:50 PM

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಚಾರ್ಲಿ ಕಿರ್ಕ್ ಹತ್ಯೆ ಶಂಕಿತ ವ್ಯಕ್ತಿಯ ಮೊದಲ ಪೋಟೋ ಬಿಡುಗಡೆ ಮಾಡಿದ FBI | Charlie Kirk Murder Case

11/09/2025 10:18 PM

SHOCKING : ಪತ್ನಿ ಮತ್ತು ಆಕೆಯ ಪ್ರಿಯಕರನ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಪತಿ

11/09/2025 10:11 PM
State News
KARNATAKA

ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ ಪರಿಹಾರ ಹೆಚ್ಚಳ: ಸಂತೋಷ್ ಕುಮಾರ್ ಸರ್ಕಾರಕ್ಕೆ ಅಭಿನಂದನೆ ಸಲ್ಲಿಕೆ

By kannadanewsnow0911/09/2025 10:50 PM KARNATAKA 1 Min Read

ಶಿವಮೊಗ್ಗ: ಇಂದು ರಾಷ್ಟ್ರೀಯ ಹುತಾತ್ಮರ ದಿನದಂದೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹುತಾತ್ಮ ಅರಣ್ಯ ಇಲಾಖೆ ನೌಕರರ ಕುಟುಂಬಕ್ಕೆ…

ಸಾಗರದ ಕೊಗಾರಿನಲ್ಲಿ ಅರಣ್ಯ ಹುತಾತ್ಮರ ದಿನ ಆಚರಣೆ, ಗೌರವ ನಮನ ಸಲ್ಲಿಸಿದ ACF ಮಹೇಶ್ ಖಾತೇದಾರ್

11/09/2025 10:30 PM

ಶಿವಮೊಗ್ಗ: ಸಾಗರ ತಾಲ್ಲೂಕು ಕಸಾಪ ಅಧ್ಯಕ್ಷ, ಕವಿ ವಿ.ಟಿ ಸ್ವಾಮಿ ಅವರ ಕವನ ಸಂಕಲನಕ್ಕೆ ‘ಕಾವ್ಯಸಿರಿ ರಾಷ್ಟ್ರೀಯ ಪುರಸ್ಕಾರ’

11/09/2025 9:41 PM

ಈವರೆಗೆ ‘ಕರ್ನಾಟಕ ರತ್ನ ಪ್ರಶಸ್ತಿ’ಗೆ ಯಾರೆಲ್ಲ ಭಾಜನ ಗೊತ್ತಾ? ಇಲ್ಲಿದೆ ಪಟ್ಟಿ

11/09/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.