ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿನ್ನೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಅವರ ಸ್ವಗ್ರಾಮವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ.
ಎಸ್ ಎಂ ಕೃಷ್ಣ ಅವರ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನುಡಿ ನಮನ ಸಲ್ಲಿಸಿದ್ದು, ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು. ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್ಮೆನ್ ರಾಜಕಾರಣಿ. ಈ ಕಾರಣಕ್ಕಾಗಿಯೇ ಅಜಾತಶತ್ರುವಾಗಿ ನಮ್ಮ ನೆನಪುಗಳಲ್ಲಿ ಶಾಶ್ವತವಾಗಿರಲಿದ್ದಾರೆ.
ಜಾಗತಿಕ ಭೂಪಟದಲ್ಲಿ ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯಾಗಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣರವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಹೀಗೆ ಎಲ್ಲವನ್ನೂ ಪ್ರತಿನಿಧಿಸಿದ್ದ, ಮುಖ್ಯಮಂತ್ರಿಯಾಗಿ, ವಿಧಾನಸಭೆಯ ಸಭಾಧ್ಯಕ್ಷರಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಅನುಪಮ ಸೇವೆ ಸಲ್ಲಿಸಿದ್ದ ಅಪರೂಪರ ರಾಜಕಾರಣಿ ಕೃಷ್ಣರವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟು ನಿರ್ಗಮಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು.
ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್… pic.twitter.com/CX7uLslFot
— Siddaramaiah (@siddaramaiah) December 11, 2024
 
		



 




