Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ: ರಾಷ್ಟ್ರೀಯ ವೈದ್ಯಕೀಯ ಸನ್ನದ್ಧತೆ ಪರಿಶೀಲಿಸಿದ ಆರೋಗ್ಯ ಸಚಿವ ನಡ್ಡಾ

09/05/2025 2:22 PM

BIG NEWS: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಸಖತ್ ಬೇಡಿಕೆ: ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು | Operation Sindoor

09/05/2025 2:01 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಾಕಿಸ್ತಾನದ ಪ್ರಮುಖ ಪತ್ರಕರ್ತರ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

09/05/2025 1:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ : ಪಿ.ಎಂ.ನರೇಂದ್ರಸ್ವಾಮಿ
KARNATAKA

ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ : ಪಿ.ಎಂ.ನರೇಂದ್ರಸ್ವಾಮಿ

By kannadanewsnow0513/12/2024 5:00 PM

ಬೆಳಗಾವಿ : ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿಸೆಂಬರ್ 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಆಗಿರುವ ವಿಧಾನಸಭೆ ಸದಸ್ಯರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು.

ಸುವರ್ಣಸೌಧದ ಪಶ್ಚಿಮದ್ವಾರದ ಬಳಿ ಸಮಿತಿಯ ಸದಸ್ಯರೊಂದಿಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಈ ಮಾಹಿತಿ ನೀಡಿದರು.ಸಮಿತಿಯು ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಗದಗ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಮಾಡಿ ಅನೇಕ ಲೋಪದೋಷಗಳನ್ನು ಪರಿಶೀಲಿಸಿದೆ. ಒಂದೇ ಮನೆಯ ಮಕ್ಕಳಂತೆ ಎಲ್ಲ ಪಕ್ಷದವರು ಒಗ್ಗೂಡಿ ಈ ವರದಿಯನ್ನು ಸಿದ್ಧಪಡಿಸಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಮತ್ತು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಹಾಗೂ ಅವರ ಭವಿಷ್ಯತ್ತನ್ನು ರೂಪಿಸುವುದಕ್ಕೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗುವುದಕ್ಕೆ ಎಲ್ಲೆಲ್ಲಿ ಲೋಪಗಳಿದ್ದಾವೆ ಎಂಬುದನ್ನು ಪತ್ತೆ ಮಾಡಿ ಸಾಕಷ್ಟು ಶ್ರಮವಹಿಸಿ ಈ ವರದಿಯನ್ನು ತಯಾರಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನವನ್ನು ಕಡ್ಡಾಯವಾಗಿ ಈ ಸಮುದಾಯವರಿಗೆ ಬಳಸಬೇಕು. ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನು ಕಡ್ಡಾಯ ಪಾಲಿಸಬೇಕು., ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಎಸ್ಸಿ ಮತ್ತು ಎಸ್ಟಿ ಸಮುದಾಯವರಿಗೆ 100 ದಿನಗಳ ಉದ್ಯೋಗ ಖಾತ್ರಿ ನೀಡಬೇಕು. ಸ್ಮಶಾನಭೂಮಿ ಇಲ್ಲದಿರುವ ಕಡೆಗಳಲ್ಲಿ ಕೂಡಲೇ ಒದಗಿಸಬೇಕು. ಭೂ ಒಡೆತನ ಯೋಜನೆಯಡಿ ಜಮೀನು ನೀಡಬೇಕು. ನಿವೇಶನ ವಸತಿ ರಹಿತರಿಗೆ ಕೂಡಲೇ ಸೌಕರ್ಯ ಒದಗಿಸಬೇಕು. ಪ್ರಾಧಿಕಾರಗಳಿಂದ ಬರುವ ಆದಾಯದಲ್ಲಿ ಎಸ್ಸಿ ಎಸ್ಟಿ ಹಾಸ್ಟೇಲಗಳಿಗೆ ಬೆಡ್, ಕಾಟ, ದಿಂಬು ಒದಗಿಸಬೇಕು., ಹೌಸಿಂಗ್ ಸೊಸೈಟಿಗಳ ಬಡಾವಣೆಗಳಲ್ಲಿ ಸೈಟಗಳ ಮೀಸಲಾತಿ ನೀಡಬೇಕು ಎಂಬುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಮಿತಿಯು ಪರಿಶೀಲಿಸಿ ವರದಿ ನೀಡಿದೆ ಎಂದು ಅವರು ತಿಳಿಸಿದರು.

ಸಮಿತಿಯ ಅಧ್ಯಕ್ಷರಾದ ತಾವು ಮತ್ತು ಸಮಿತಿಯ ಎಲ್ಲ ಸದಸ್ಯರು ಸೇರಿ ಹಲವಾರು ತನಿಖೆಗಳನ್ನು ನಡೆಸಿ, ಹಲವಾರು ಜಿಲ್ಲೆಗಳ ಪ್ರವಾಸ ನಡೆಸಿ ಹಲವಾರು ಇಲಾಖೆಗಳನ್ನು ವಿಮರ್ಶೆ ಮಾಡಿ ಅಲ್ಲಿರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಲೋಪ ಮತ್ತು ಎಸ್ಸಿ ಎಸ್ಟಿ ಕಾಯ್ದೆಯನ್ನು ಸದ್ಬಳಕೆ ಮಾಡುವ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಆಗಿರುವ ಲೋಪಗಳನ್ನು ಹಾಗೂ ವಿಶೇಷವಾಗಿ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೌಲಭ್ಯಗಳಲ್ಲಿ ಆಗಿರುವಂತಹ ಕೊರತೆ ಬಗ್ಗೆ ಸಮಿತಿಯು ವಿಶೇಷವಾಗಿ ಈ ವರದಿಯನ್ನು ತಯಾರಿ ಮಾಡಿ ಹಲವಾರು ಮಾರ್ಪಾಟುಗಳನ್ನು ಸೂಚಿಸಿದೆ.
ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಬರುವ ರೀತಿಯಲ್ಲಿ ಹೊರಗುತ್ತಿಗೆ ಮೀಸಲಾತಿ ಇರಬೇಕು.

ಹೊರಗುತ್ತಿಗೆ ಸಿಬ್ಬಂದಿಗೆ ನೀಡುವ ವೇತನದ ಬಗ್ಗೆ ಜೊತೆಗೆ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದನ್ನು ಸಮಿತಿಯು ತೀಕ್ಷ÷್ಣವಾಗಿ ಪರಿಶೀಲನೆ ನಡೆಸಿ ಮಾರ್ಗೋಪಾಯ ಕಂಡು ಹಿಡಿದು ವರದಿಯಲ್ಲಿ ನೀಡಿದೆ ಎಂದು ಅವರು ತಿಳಿಸಿದರು.ವಿಶೇಷವಾಗಿ ಉತ್ತರ ಕರ್ನಾಟಕ ಏಳೆಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದಾಗ ಶೋಚನೀಯ ಅಂಶವೊಂದು ಸಮಿತಿಯ ಗಮನಕ್ಕೆ ಬಂದಿತು. ಮಾಜಿ ದೇವದಾಸಿಯರಿಗೆ ಪೂರ್ಣ ಪ್ರಮಾಣದಲ್ಲಿ ಪುನರ್ವಸತಿಯನ್ನು ಕಲ್ಪಿಸದೇ ಇರುವುದನ್ನು ಗಮನಿಸಿ ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಸೂಕ್ತವಾದ ಮಾರ್ಗದರ್ಶನವನ್ನು ಮಾಡಿದ್ದೇವೆ. ಸಾವಿರಾರು ಜನ ಮಾಜಿ ದೇವದಾಸಿಯರು ವಸತಿ ಇಲ್ಲದೇ ನಿವೇಶನ ಇಲ್ಲದೇ ಹಳೆಯ ಪದ್ಧತಿಯಂತೆಯೇ ಬದುಕುತ್ತಿರುವುದರ ಬಗ್ಗೆ ನಾವು ವರದಿಯಲ್ಲಿ ಬೆಳಕು ಚೆಲ್ಲಿದ್ದೇವೆ. ಈ ಬಗ್ಗೆ ಸ್ಪಷ್ಟವಾದ ವಿಚಾರಗಳನ್ನು ಮತ್ತು ದತ್ತಾಂಶಗಳನ್ನು ಕ್ರೋಢೀಕರಿಸಿ ವರದಿಯಲ್ಲಿ ನೀಡಿದ್ದೇವೆ ಎಂದರು.

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದಕ್ಕೆ ಸಮಿತಿಯು ಸಲಹೆ ಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಅಂತರ ಇರಬಾರದು. ಈ ನಿಟ್ಟಿನಲ್ಲಿ ಇನ್ಮುಂದೆ ಕಂಪ್ಯೂಟರ್ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಎಸ್‌ಡಿಎಂಸಿಗಳ ಭಾಗವಹಿಸುವಿಕೆಯ ಜೊತೆಗೆ ಸ್ಥಳೀಯ ಅನುದಾನವನ್ನು ಕ್ರೋಢೀಕರಿಸಿ ಟ್ಯಾಬ್ ಗಳನ್ನು ನೀಡುವುದು ಮತ್ತು ಸಿಎಸ್‌ಆರ್ ಅನುದಾನ ಲಭ್ಯತೆವಿರುವ ಕಡೆಗಳಲ್ಲಿ ಅದನ್ನು ಬಳಸಿಕೊಂಡು ಗ್ರಾಮೀಣ ಶಿಕ್ಷಣವನ್ನು ಮೇಲೆತ್ತಬೇಕು ಎಂದು ಸಮಿತಿಯು ಸಲಹೆ ಮಾಡಿದೆ ಎಂದರು.ಸಮಿತಿಯ ಸದಸ್ಯರು ಜಿಲ್ಲೆಗಳಿಗೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಣದ ಬಗ್ಗೆ ಮಾಹಿತಿ ಪಡೆದಾಗ ಅಲ್ಲಿ ವಿದ್ಯಾಭ್ಯಾಸ ಮಾಡುವ ಒಟ್ಟು ಮಕ್ಕಳ ಪೈಕಿ ಶೇ.50ಕ್ಕಿಂತ ಹೆಚ್ಚು ಮಕ್ಕಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿದ್ದಾರೆಂಬ ಅಂಶ ತಿಳಿದು ಬಂದಿರುವುದರಿಂದ ಸೌಲಭ್ಯ ಕಲ್ಪಿಸುವುದರ ಬಗ್ಗೆ ಸಮಿತಿಯು ಕೆಲವು ಮಾರ್ಪಾಟುಗಳಿಗೆ ವರದಿಯಲ್ಲಿ ಅವಕಾಶ ಮಾಡಿದೆ ಎಂದು ತಿಳಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ಪಡೆದುಕೊಳ್ಳುವ ವ್ಯವಸ್ಥೆಯ ಬಗ್ಗೆ ಸಮಿತಿಯು ಪರಿಶೀಲಿಸಿದೆ. ಸಿಬ್ಬಂದಿಗೆ ಸಿಗಬೇಕಾದ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಏಜೆನ್ಸಿಯವರು ಉಳಿಸಿಕೊಳ್ಳುವುದು ತಪ್ಪಬೇಕು. ಹೊರಗುತ್ತಿಗೆ ನೌಕರರಿಗೆ ಏಜೆನ್ಸಿ ಮೂಲಕ ಹಣ ನೀಡುವ ಬದಲು ನೇರವಾಗಿ ಇಲಾಖೆಗಳೇ ಸಿಬ್ಬಂದಿಯನ್ನು ನೇಮಿಸಿಕೊಂಡು ವೇತನ ಪಾವತಿಸುವುದರಿಂದ ನೌಕರರಿಗೆ ಹೆಚ್ಚುವರಿ ಹಣ ಸಿಗುತ್ತದೆ ಎಂಬುದಾಗಿ ಸಮಿತಿಯು ವರದಿಯಲ್ಲಿ ತಿಳಿಸಿದೆ ಎಂದರು.ನಾನು ಅಧ್ಯಕ್ಷರಾದಂತಹ ಪ್ರತಿಯೊಂದು ಸಂದರ್ಭದಲ್ಲಿ ನೀಡಿದ ವರದಿಗಳು ಪರಿಣಾಮಕಾರಿಯಾಗಿ ಜಾರಿಯಾಗಿವೆ. ಬಜೆಟ್‌ನಲ್ಲಿ ಮತ್ತು ಕಾರ್ಯಕ್ರಮ ಅನುಷ್ಠಾನದಲ್ಲಿ ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. 2013ರ ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡುವಂತಹ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಥಾವತ್ತಾಗಿ ಜಾರಿಗೊಳಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ದುರ್ಯೋದನ ಎಂ ಐಹೊಳೆ, ಕೃಷ್ಣ ನಾಯ್ಕ ಸೇರಿದಂತೆ ಇನ್ನೀತರ ಸದಸ್ಯರು ಇದ್ದರು.

Share. Facebook Twitter LinkedIn WhatsApp Email

Related Posts

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM1 Min Read
Recent News

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ: ರಾಷ್ಟ್ರೀಯ ವೈದ್ಯಕೀಯ ಸನ್ನದ್ಧತೆ ಪರಿಶೀಲಿಸಿದ ಆರೋಗ್ಯ ಸಚಿವ ನಡ್ಡಾ

09/05/2025 2:22 PM

BIG NEWS: ‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಸಖತ್ ಬೇಡಿಕೆ: ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು | Operation Sindoor

09/05/2025 2:01 PM

BREAKING: ಭಾರತ-ಪಾಕ್ ನಡುವೆ ಉದ್ವಿಗ್ನತೆ: ಪಾಕಿಸ್ತಾನದ ಪ್ರಮುಖ ಪತ್ರಕರ್ತರ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

09/05/2025 1:55 PM

BREAKING: ಭಾರತ-ಪಾಕ್ ಉದ್ವಿಗ್ನತೆ: ಮೇ.10ರವರೆಗೆ ಹಲವು ನಗರಗಳಿಗೆ ವಿಮಾನ ಹಾರಾಟ ರದ್ದುಗೊಳಿಸಿದ ಇಂಡಿಗೋ

09/05/2025 1:51 PM
State News
KARNATAKA

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

By kannadanewsnow0509/05/2025 1:49 PM KARNATAKA 1 Min Read

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತ್ರಿಬಲ್​​ ರೈಡ್​ ಮಾಡುತ್ತಿದ್ದ ಬೈಕ್​ ಅಪಘಾತಗೊಂಡು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ…

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

‘ಆಪರೇಷನ್ ಸಿಂಧೂರ್’: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ | Operation Sindoor

09/05/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.