ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್ವೆಲ್ ಕೊರೆಸಿದ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ-ಸೊಸೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ.
ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಟೀಕೆಗಳು ಸಾಯ್ತವೆ, ಕೆಲಸಗಳು ಉಳಿತವೆ! ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆಯಾಗಿದೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಮಾಬುಬೀ ಮತ್ತು ಸೊಸೆ ರೋಷನ್ ಬೇಗಂ ಅವರು ಪ್ರತಿ ತಿಂಗಳು ತಮಗೆ ಬರುತ್ತಿದ್ದ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು, ಸುಮಾರು 44 ಸಾವಿರ ರೂ.ಗಳನ್ನು ಬಳಸಿಕೊಂಡು ಬೋರ್ವೆಲ್ ಕರೆಸಿದ್ದರು. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.