ಬೆಳಗಾವಿ : ಇತ್ತೀಚಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳು ಸಿಗರೇಟ್ ಸೇದುತ್ತಾ ಇಸ್ಪೀಟ್ ಆಡುತ್ತಿರುವ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ ಹಿಂಡಲಗಾ ಜೈಲಿನಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಾಂಜಾ ಗಾಗಿ ಜೈಲರ್ ಹಾಗೂ ಖೈದಿ ನಡುವೆ ಗಲಾಟೆ ನಡೆದಿದ್ದು ವಿಚಾರಣಾಧೀನ ಕೈದಿ ಒಬ್ಬ ಜೈಲರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬಳಕೆಗೆ ಬಂದಿದೆ.
ಹೌದು ಸಹಾಯಕ ಜೈಲರ್ ಮೇಲೆ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ ನಡೆದಿದೆ. ಸಹಾಯಕ ಜೈಲರ್ ಜಿ ಆರ್ ಕಾಂಬಳೆ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ವಿಚಾರಣಾಧೀನ ಕೈದಿ ಶಾಹಿದ್ ಖುರೇಷೆಯಿಂದ ಹಲ್ಲೆ ನಡೆದಿದೆ. ಡಿಸೆಂಬರ್ 11ರಂದು ಜೈಲಿನಲ್ಲಿ ನಡೆದಂತಹ ಘಟನೆ ಇದೀಗ ತಡವಾಗಿ ಬಳಕೆಗೆ ಬಂದಿದೆ. ಅಧಿವೇಶನ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿದೆ.
ಬೆಳಗಾವಿಯ ಹಿಂಡಲಗಾ ಜೈಲು ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ವೈದ್ಯರಿಂದ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಗ್ರಾಮಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಕಾಯ್ದೆಯ ಅಡಿ 132, 115 (2) 352 ಹಾಗೂ NDPS ಕಾಯ್ದೆ 42 ಅಡಿಯಲ್ಲಿ ಕೇಸ್ ದಾಖಲಾಗಿದೆ. ಜೈಲು ಮುಖ್ಯ ಅಧಿಕ್ಷಕ ಕೃಷ್ಣಮೂರ್ತಿ ದೂರು ದಾಖಲಿಸಿದ್ದಾರೆ.