Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025

01/07/2025 1:36 PM

BREAKING : ಪ್ರಿಯತಮೆಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ : ಮನನೊಂದ ಪ್ರೇಮಿಗಳು ಆಟೋದಲ್ಲಿಯೇ ನೇಣಿಗೆ ಶರಣು!

01/07/2025 1:35 PM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | II PUC Exam Result 2025

01/07/2025 1:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸಭೆಯಲ್ಲಿ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ
KARNATAKA

BREAKING: ವಿಧಾನಸಭೆಯಲ್ಲಿ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

By kannadanewsnow0916/12/2024 5:40 PM

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು.

“ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. 3 ಲಕ್ಷ ಆಸ್ತಿಗಳಿಂದ 1200 ಕೋಟಿ ಬಾಕಿ ವಸೂಲಿ ಮಾಡಲಾಗಿದೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ” ಎಂದು ಮಾಹಿತಿ ನೀಡಿದರು.

“2024ರ ನವೆಂಬರ್ 30ರವರೆಗೆ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈ ಸಂಬಂಧ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು, ಈಗ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, “ಉಪ ಮುಖ್ಯಮಂತ್ರಿಗಳು ಉತ್ತಮ ತಿದ್ದುಪಡಿ ವಿಧೇಯಕ ಮಂಡಿಸಿದ್ದು, ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿದ್ದಾರೆ. ಇದುವರೆಗೂ ತೆರಿಗೆ ಪಾವತಿಸದವರು ಕೂಡ ತೆರಿಗೆ ಪಾವತಿಸುವಂತೆ ಮಾಡಲಾಗಿದೆ. ತೆರಿಗೆ ವಂಚನೆ ಮಾಡುವವರು, ಕಡಿಮೆ ಆಸ್ತಿ ಮೌಲ್ಯ ಘೋಷಣೆ ಮಾಡಿಕೊಳ್ಳುವವರನ್ನು ತೆರಿಗೆ ವ್ಯಾಪ್ತಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಆಸ್ತಿ ತೆರಿಗೆ ಹೆಚ್ಚಿಸಬೇಡಿ. ಆಸ್ತಿ ತೆರಿಗೆದಾರರ ಮೇಲೆ ಹೆಚ್ಚಿನ ಭಾರ ಹೊರಿಸಬೇಡಿ. ಪಾಲಿಕೆಯನ್ನು ಆಸ್ತಿ ತೆರಿಗೆ ಹಣದಲ್ಲೇ ನಡೆಸಲು ಮುಂದಾಗಬೇಡಿ. ರಾಜ್ಯದಲ್ಲಿ 65% ತೆರಿಗೆ ಸಂಗ್ರಹವಾಗುತ್ತಿದ್ದು, ಈ ನಗರಕ್ಕೆ ಬೇರೆ ಇಲಾಖೆಗಳಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರದಿಂದ ಬರುವ ಅನುದಾನ ಹೆಚ್ಚಾಗಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರನ್ನು ತೆರಿಗೆ ವ್ಯಾಪ್ತಿಗೆ ತರುವ ನಿಮ್ಮ ಪ್ರಯತ್ನಕ್ಕೆ ಶುಭಾಶಯ ತಿಳಿಸುತ್ತೇನೆ” ಎಂದು ತಿಳಿಸಿದರು.

ನಂತರ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಸದನದಲ್ಲಿ ಸರ್ವಾನುಮತದಿಂದ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.

ಮಂಡ್ಯ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಸಚಿವ ಚಲುವರಾಯಸ್ವಾಮಿ

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025

01/07/2025 1:36 PM1 Min Read

BREAKING : ಪ್ರಿಯತಮೆಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ : ಮನನೊಂದ ಪ್ರೇಮಿಗಳು ಆಟೋದಲ್ಲಿಯೇ ನೇಣಿಗೆ ಶರಣು!

01/07/2025 1:35 PM1 Min Read

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | II PUC Exam Result 2025

01/07/2025 1:32 PM1 Min Read
Recent News

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025

01/07/2025 1:36 PM

BREAKING : ಪ್ರಿಯತಮೆಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ : ಮನನೊಂದ ಪ್ರೇಮಿಗಳು ಆಟೋದಲ್ಲಿಯೇ ನೇಣಿಗೆ ಶರಣು!

01/07/2025 1:35 PM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | II PUC Exam Result 2025

01/07/2025 1:32 PM

SHOCKING : ಹಾಸನದಲ್ಲಿ `ಹೃದಯಾಘಾತ’ ಕ್ಕೆ ಇಂದು ಮತ್ತೆ ಇಬ್ಬರು ಬಲಿ : ನವವಿವಾಹಿತ, ಬಾಣಂತಿ ಸಾವು.!

01/07/2025 1:24 PM
State News
KARNATAKA

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025

By kannadanewsnow5701/07/2025 1:36 PM KARNATAKA 1 Min Read

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಶೇ.20.22ರಷ್ಟು…

BREAKING : ಪ್ರಿಯತಮೆಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ : ಮನನೊಂದ ಪ್ರೇಮಿಗಳು ಆಟೋದಲ್ಲಿಯೇ ನೇಣಿಗೆ ಶರಣು!

01/07/2025 1:35 PM

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | II PUC Exam Result 2025

01/07/2025 1:32 PM

SHOCKING : ಹಾಸನದಲ್ಲಿ `ಹೃದಯಾಘಾತ’ ಕ್ಕೆ ಇಂದು ಮತ್ತೆ ಇಬ್ಬರು ಬಲಿ : ನವವಿವಾಹಿತ, ಬಾಣಂತಿ ಸಾವು.!

01/07/2025 1:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.