Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ಟಿ20 ವಿಶ್ವಕಪ್ : ಭಾರತ ಪಾಕಿಸ್ತಾನವನ್ನು ಮಣಿಸಿದ ನಂತರ ಸೂರ್ಯಕುಮಾರ್ ಯಾದವ್ ಅವರ 3 ಪದಗಳ ಟ್ವೀಟ್ ವೈರಲ್ !

16/02/2026 7:34 AM

ಪಾಕಿಸ್ತಾನ ಜಗತ್ತಿನ `ಜಿಹಾದ್ ರಾಜಧಾನಿ’ : ಎಪ್ಸ್ಟೀನ್‌ ಫೈಲ್ಸ್’ ನಲ್ಲಿ ಸ್ಪೋಟಕ ರಹಸ್ಯ ಬಹಿರಂಗ !

16/02/2026 7:23 AM

ಕಾಂಗ್ರೆಸ್ ನಾಯಕನಿಂದಲೇ ಎಡರಂಗದ ಗುಣಗಾನ: ಕೇರಳದಲ್ಲಿ ಮತ್ತೆ ವಿಜಯನ್ ಸಿಎಂ ಆಗ್ತಾರೆ ಎಂದ ಮಣಿಶಂಕರ್ ಅಯ್ಯರ್!

16/02/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ವಿಫಲ ಕೊಳವೆ ಬಾವಿ’ಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು, 25 ಸಾವಿರ ದಂಡ ಫಿಕ್ಸ್.!
KARNATAKA

BIG NEWS : ರಾಜ್ಯದಲ್ಲಿ `ವಿಫಲ ಕೊಳವೆ ಬಾವಿ’ಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು, 25 ಸಾವಿರ ದಂಡ ಫಿಕ್ಸ್.!

By kannadanewsnow5717/12/2024 7:41 AM

ಬೆಳಗಾವಿ : ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್‌ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು ಇಂದು ವಿಧಾನಸಭೇಯಲ್ಲಿ ಅಂಗೀಕಾರವಾಗಿದೆ.

15 ದಿನಗಳ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯ:

ಮಸೂದನೆಯ 11 ಏ ಸೆಕ್ಷನ್‌ ಪ್ರಕಾರ ಅಧಿಸೂಚಿತ ಪ್ರದೇಶ ಮತ್ತು ಅಧಿಸೂಚಿತವಲ್ಲದ ಪ್ರದೇಶಗಳಲ್ಲಿ ಕೊಳವೆಬಾವಿ ಕೊರೆಯಲು ಇಚ್ಚಿಸುವವರು ಸಂಬಂಧಪಟ್ಟ ಪಿಡಿಓ, ವಿಲೇಜ್‌ ಅಕೌಂಟೆಂಟ್‌, ಪಟ್ಟಣ ಪಂಚಾಯಿತಿ, ನಗರ ಸಭೆ ಮತ್ತು ಬಿಡಬ್ಲೂಎಸ್‌ಎಸ್‌ಬಿ ಸಂಬಂಧಿಸಿದ ವಾರ್ಡ್‌ ಇಂಜಿನೀಯರ್‌ಗಳಿಗೆ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಬೇಕು. ಇದನ್ನು ಉಲ್ಲಂಘಿಸಿದ ಡ್ರಿಲ್ಲಿಂಗ್‌ ಏಜೆನ್ಸಿ/ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ ಐದು ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಮೂರು ತಿಂಗಳ ಸಜೆಯನ್ನು ವಿಧಿಸಲಾಗುವುದು.

ವಿಫಲ ಕೊಳವೆ ಬಾವಿಗಳನ್ನು ಮುಚ್ಚುವುದು ಕಡ್ಡಾಯ:

ಕೊಳವೆ ಬಾವಿಗಳನ್ನು ಕೊರೆದ ನಂತರ ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿಗಳನ್ನು ಸ್ಟೀಲ್‌ ಕ್ಯಾಪ್‌ ಹಾಕಿ ಮುಚ್ಚವುದು ಕಡ್ಡಾಯವಾಗಿದೆ. ವಿಫಲ ಕೊಳವೆ ಬಾವಿಯನ್ನು ಕೆಸರು ಮಣ್ಣು ತುಂಬಿ ಮುಚ್ಚಬೇಕು ಹಾಗೂ 2×2 ಅಡಿಯ ದಿಬ್ಬ ಮಾಡಿ ದಿಬ್ಬಕ್ಕೆ ಫೆನ್ಸಿಂಗ್. ಡ್ರಿಲಿಂಗ್‌ ಏಜೆನ್ಸಿ ಮತ್ತು ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳು ಕೊಳವೆ ಬಾವಿ ಕೊರೆದ 24 ಗಂಟೆಯೊಳಗೆ ಮುಚ್ಚಿರುವ ಬಗ್ಗೆ ಫೋಟೋ ತಗೆದು ಸುರಕ್ಷಿತವಾಗಿ ಮುಚ್ಚಿರುವುದನ್ನು ತಪಾಸಣೆ ಮಾಡಿ ಧೃಢೀಕರಿಸಬೇಕು. ಈ ಬಗ್ಗೆ ಜಾಯಿಂಟ್‌ ಡಿಕ್ಲರೇಷನ್‌ ಅನ್ನು ಸ್ಥಳೀಯ ಪ್ರಾಧಿಕಾರಕ್ಕೆ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ.

ಅಲ್ಲದೇ, ಜಮೀನಿನ ಮಾಲೀಕರು ಕೊಳವೆ ಬಾವಿ ರಿಪೇರಿ ಮಾಡಲು ಪಂಪ್‌ ಅನ್ನು ಹೊರ ತಗೆದಾಗ ಕೊಳವೆಬಾವಿಗೆ ಕ್ಯಾಪ್‌ ಹಾಕಿ ಮುಚ್ಚಬೇಕು. ಕೊಳವೆ ಬಾವಿಯನ್ನು ಪುನಃಶ್ಚೇತನ ಮಾಡಲು ಇಚ್ಚಿಸಿದಲ್ಲಿ ಜಮೀನು ಮಾಲೀಕರು ಕೊಳವೆ ಬಾವಿಗೆ ಮುಚ್ಚಳದಿಂದ ಮುಚ್ಚಿ ಸುರಕ್ಷತೆಯನ್ನು ಕಾಪಾಡಬೇಕು.

ಕೊಳವೆ ಬಾವಿ ಕೊರೆಯುವಾಗ ಸೈನ್‌ ಬೋರ್ಡ್‌ ಕಡ್ಡಾಯ:

ಇನ್ನೂ ಕೊಳವೆ ಬಾವಿಯನ್ನು ಕೊರೆಯುವಾಗ ಎಲ್ಲರಿಗೂ ಕಾಣುವ ರೀತಿಯಲ್ಲಿ ಕೊಳವೆ ಬಾವಿ ಕೊರೆಯುತ್ತಿರುವ ಬಗ್ಗೆ ಎಚ್ಚರಿಕೆಯ ಬೋರ್ಡ್‌ ಅನ್ನು ಪ್ರದರ್ಶಿಸಬೇಕು. ಯಾವುದೇ ಅವಘಡಗಳು ಆಗದಂತೆ ಎಚ್ಚರವಹಿಸುವುದು ಕಡ್ಡಾಯವಾಗಿದೆ ಇದಕ್ಕಾಗಿ ಸುತ್ತಲೂ ಫೆನ್ಸಿಂಗ್‌ ನಿರ್ಮಿಸಿಕೊಳ್ಳಬೇಕು.

ಸ್ಥಳೀಯ ಪ್ರಾಧಿಕಾರ / ಅಧಿಕಾರಿಗಳ ಜವಾಬ್ದಾರಿ:

ಸ್ಥಳೀಯ ಪ್ರಾಧಿಕಾರ ಅಥವಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಯುವ ಸಂಧರ್ಭದಲ್ಲಿ ಕೈಗೊಳ್ಳಬೇಕಾದ ಎಚ್ಚರಿಕೆಯ ಅಂಶಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಕೊರೆಸಲಾಗುತ್ತಿರುವ ಕೊಳವೆ ಬಾವಿಗಳ ಬಗ್ಗೆ ಅಂತರ್ಜಲ ಅಭಿವೃದ್ದಿ ಇಲಾಖೆಗೆ ಮಾಹಿತಿಯನ್ನು ಸಲ್ಲಿಸಬೇಕು. ಇಂಪ್ಲಿಮೆಂಟಿಂಗ್‌ ಏಜೆನ್ಸಿಯವರು ಸಹ ಕೊಳವೆ ಬಾವಿಯನ್ನು ಮುಚ್ಚುವ ಬಗ್ಗೆ ನಿಗಾವಹಿಸುವಬೇಕು. ಅಲ್ಲದೇ ಪಿಡಿಓ ಗಳು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೊಳವೆ ಬಾವಿ ಮುಚ್ಚುವ ವಿಧಾನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಬೋರ್ಡ್‌ ಹಾಕುವುದನ್ನು ಕಡ್ಡಾಯಗೊಳಿಸಲಾಗಿವೆ ಎಂದು ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಜೈಲು ಶಿಕ್ಷೆ ಹಾಗೂ ದಂಡ:

ಇಂಪ್ಲಿಮೆಂಟಿಂಗ್‌ ಏಜೆನ್ಸಿ ಹಾಗೂ ಡ್ರಿಲ್ಲಿಂಗ್‌ ಏಜೆನ್ಸಿಗಳು ಮಸೂದೆಯ 11 ಏ ಸೆಕ್ಷನ್‌ನಲ್ಲಿರುವ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಹತ್ತು ಸಾವಿರ ಜುಲ್ಮಾನೆ ಹಾಗೂ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸೆಕ್ಷನ್‌ 21 ಏ ನಿಯಮಗಳನ್ನು ಯನ್ನು ಉಲ್ಲಂಘಿಸುವ ಇಂಪ್ಲಿಮೆಂಟಿಂಗ್‌ ಏಜೆನ್ಸಿ/ ಡ್ರಿಲ್ಲಿಂಗ್‌ ಏಜೆನ್ಸಿಗಳು / ಸರ್ವಿಸಿಂಗ್‌ ಏಜೆನ್ಸಿಗಳಿಗೆ 25 ಸಾವಿರ ರೂಪಾಯಿಗಳ ಜುಲ್ಮಾನೆ ಹಾಗೂ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸುವ ಅವಕಾಶವನ್ನು ಈ ಮಸೂದೆಯಲ್ಲಿ ಅಳವಡಿಸಲಾಗಿದೆ. ಅಲ್ಲದೇ, ತಮ್ಮ ಜವಾಬ್ದಾರಿ/ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವಿಫಲವಾಗುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲು ಮಸೂದೆಯಲ್ಲಿ ನಿಯಮಗಳನ್ನು ಅಳವಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಹೆಚ್ಚುತ್ತಿರುವ ಕೊಳವೆ ಬಾವಿಗಳಿಂದ ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಕುಸಿಯುತ್ತಿದೆ. ಇದನ್ನು ತಡೆಗಟ್ಟುವುದು ಹಾಗೂ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವುದು ನಮ್ಮ ಉದ್ದೇಶವಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, ವಿಧಾನ ಪರಿಷತ್‌ನಲ್ಲೂ ಪ್ರಸ್ತುತ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದರು.

BIG NEWS : ರಾಜ್ಯದಲ್ಲಿ `ವಿಫಲ ಕೊಳವೆ ಬಾವಿ'ಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ ಫಿಕ್ಸ್.! BIG NEWS: 1-year jail term imposes Rs 25000 fine for not closing 'failed borewells' in the state
Share. Facebook Twitter LinkedIn WhatsApp Email

Related Posts

ALERT : `ಮದ್ಯ’ ಪ್ರಿಯರೇ ಎಚ್ಚರ : ಪ್ರತಿದಿನ `ಮದ್ಯಪಾನ’ ಮಾಡುವುದರಿಂದ ಈ ರೋಗಗಳು ಬರಬಹುದು !

16/02/2026 7:04 AM2 Mins Read

SHOCKING: ಕರ್ನಾಟಕದಲ್ಲಿ ಪೌಷ್ಠಿಕಾಂಶ ಯೋಜನೆ ನಡುವೆಯೂ 4.8 ಲಕ್ಷ ‘ಮಕ್ಕಳ ಬೆಳವಣಿಗೆ ಕುಂಠಿತ’

16/02/2026 6:50 AM2 Mins Read

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

16/02/2026 6:37 AM2 Mins Read
Recent News

2026ರ ಟಿ20 ವಿಶ್ವಕಪ್ : ಭಾರತ ಪಾಕಿಸ್ತಾನವನ್ನು ಮಣಿಸಿದ ನಂತರ ಸೂರ್ಯಕುಮಾರ್ ಯಾದವ್ ಅವರ 3 ಪದಗಳ ಟ್ವೀಟ್ ವೈರಲ್ !

16/02/2026 7:34 AM

ಪಾಕಿಸ್ತಾನ ಜಗತ್ತಿನ `ಜಿಹಾದ್ ರಾಜಧಾನಿ’ : ಎಪ್ಸ್ಟೀನ್‌ ಫೈಲ್ಸ್’ ನಲ್ಲಿ ಸ್ಪೋಟಕ ರಹಸ್ಯ ಬಹಿರಂಗ !

16/02/2026 7:23 AM

ಕಾಂಗ್ರೆಸ್ ನಾಯಕನಿಂದಲೇ ಎಡರಂಗದ ಗುಣಗಾನ: ಕೇರಳದಲ್ಲಿ ಮತ್ತೆ ವಿಜಯನ್ ಸಿಎಂ ಆಗ್ತಾರೆ ಎಂದ ಮಣಿಶಂಕರ್ ಅಯ್ಯರ್!

16/02/2026 7:17 AM

ALERT : `ಸ್ಮಾರ್ಟ್‌ ಫೋನ್‌’ ಗಳು ರಹಸ್ಯವಾಗಿ ನಿಮ್ಮ ಮನಸ್ಸನ್ನು ಕದಿಯುತ್ತಿವೆ : ಭಾರತದ `ಗುಪ್ತ ಡಿಜಿಟಲ್ ಸಾಂಕ್ರಾಮಿಕ ರೋಗ’ ಬಹಿರಂಗ !

16/02/2026 7:16 AM
State News
KARNATAKA

ALERT : `ಮದ್ಯ’ ಪ್ರಿಯರೇ ಎಚ್ಚರ : ಪ್ರತಿದಿನ `ಮದ್ಯಪಾನ’ ಮಾಡುವುದರಿಂದ ಈ ರೋಗಗಳು ಬರಬಹುದು !

By kannadanewsnow5716/02/2026 7:04 AM KARNATAKA 2 Mins Read

ಮದ್ಯ ಸೇವನೆಯ ಅಪಾಯಕಾರಿ ಪ್ರವೃತ್ತಿ ನಿರಂತರವಾಗಿ ಹೆಚ್ಚುತ್ತಿದೆ. ಇಂದು ಹೆಚ್ಚಿನ ಸಂಖ್ಯೆಯ ಯುವಕರು ಪಾರ್ಟಿಗಳಲ್ಲಿ ಮದ್ಯಪಾನ ಮಾಡಲು ಬಯಸುತ್ತಾರೆ. ಪಾರ್ಟಿಗಳ…

SHOCKING: ಕರ್ನಾಟಕದಲ್ಲಿ ಪೌಷ್ಠಿಕಾಂಶ ಯೋಜನೆ ನಡುವೆಯೂ 4.8 ಲಕ್ಷ ‘ಮಕ್ಕಳ ಬೆಳವಣಿಗೆ ಕುಂಠಿತ’

16/02/2026 6:50 AM

ತುರ್ತು ಸಂದರ್ಭದಲ್ಲಿ ಬೇಕಾಗುವ ಈ ನಂಬರ್ ಗಳನ್ನು ಮೊಬೈಲ್ ನಲ್ಲಿ ತಪ್ಪದೇ `ಸೇವ್’ ಮಾಡಿಟ್ಟುಕೊಳ್ಳಿ..!

16/02/2026 6:37 AM

‘ಮಿಲಿಟರಿ ಕಾಲೇಜಿ’ನಲ್ಲಿ 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ : ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

16/02/2026 6:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.