Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಳನೀರು ಎಲ್ಲರಿಗೂ ಆರೋಗ್ಯಕರವಲ್ಲ! ಈ 5 ಸಮಸ್ಯೆಯಿರುವವರು ತಪ್ಪದೇ ದೂರವಿರಬೇಕು

ಪ್ರತಿದಿನವೂ ಈ ಏಳು ಚಿರಂಜೀವಿಗಳನ್ನು ತಪ್ಪದೇ ಸ್ಮರಿಸಿ, ನಿಮ್ಮ ಕಷ್ಟಗಳೆಲ್ಲವೂ ದೂರ

ಮಕ್ಕಳ ಪೋಷಕರ ಗಮನಕ್ಕೆ: ಜೂ.28ರಂದು ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `KGID’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow57

ಬೆಂಗಳೂರು : ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ಕೆ.ಜಿ.ಐ.ಡಿ. ಆನ್‌ಲೈನ್ ಸೇವೆಗಳನ್ನು ಒದಗಿಸಲು NTT DDO Code (Non Treasury Transaction DDO Code) ಗಳನ್ನು ಉಪಯೋಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ?

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಸೇವೆಗಳನ್ನು ಪಡೆಯಲು ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಅರ್ಜಿಗಳನ್ನು ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳ ಮುಖಾಂತರ ವಿಮಾ ಇಲಾಖೆಗೆ ಸಲ್ಲಿಸಬೇಕಿರುತ್ತದೆ. ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳಿಗೆ ವಿಮಾ ಇಲಾಖೆಯ Login ಅನ್ನು ಖಜಾನೆ-II ರಲ್ಲಿ DDO Code ಆಧಾರದ ಮೇಲೆ ನೀಡಲಾಗಿರುತ್ತದೆ. ರಾಜ್ಯ ಸರ್ಕಾರದ ಕೆಲವು ಅಧಿಕಾರಿಗಳು ಮತ್ತು ನೌಕರರು ನಿಯೋಜನೆಯ ಮೇಲೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಂತಹ ಕಛೇರಿಗಳಲ್ಲಿ ವೇತನ ಬಟವಾಡೆ ಅಧಿಕಾರಿಗಳು ನಿಯೋಜನೆ ಮೇಲೆ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರ ವೇತನವನ್ನು ರಾಜ್ಯದ ಸಂಚಿತ ನಿಧಿಯಿಂದ ಖಜಾನೆ ಮೂಲಕ ಸೆಳೆಯುವುದಿಲ್ಲದ ಕಾರಣ ನಿಗಮ, ಮಂಡಳಿಗಳ ಮತ್ತು ಸ್ವಾಯತ್ತ ಸಂಸ್ಥೆಗಳ ವೇತನ ಬಟವಾಡೆ ಅಧಿಕಾರಿಗಳಿಗೆ ಖಜಾನೆ-IIನಲ್ಲಿ DDO Code ಅನ್ನು ಹಂಚಿಕೆ ಮಾಡಿರುವುದಿಲ್ಲ. ಆದ್ದರಿಂದ ಇವರು ವಿಮಾ ಇಲಾಖೆಯ ತಂತ್ರಾಂಶಕ್ಕೆ ಲಾಗಿನ್ ಆಗಲು ಸಾಧ್ಯವಾಗುವುದಿಲ್ಲದ ಕಾರಣ ನಿಯೋಜನೆ ಮೇಲೆ ನಿಗಮ, ಮಂಡಳಿ/ ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ವಿಮಾ ಇಲಾಖೆಯ ಆನ್‌ಲೈನ್ ಸೇವೆಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.

ಮೇಲ್ಕಂಡ ಸಮಸ್ಯೆಯನ್ನು ನಿವಾರಿಸಲು ಉಲ್ಲೇಖಿತ ಪತ್ರದಲ್ಲಿ ವಿಮಾ ನಿರ್ದೇಶಕರು ಸಲ್ಲಿಸಿರುವ ಕೋರಿಕೆಯನ್ನು ಪರಿಶೀಲಿಸಿ, ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ವಿಮಾ ಇಲಾಖೆಯ ಆನ್‌ಲೈನ್ ಸೇವೆಗಳನ್ನು ಪಡೆಯಲು ಅನುವಾಗುವಂತೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ವೇತನ ಬಟವಾಡೆ ಅಧಿಕಾರಿಗಳಿಗೆ NTT DDO Code (Non Treasury Transaction DDO Code) ಇಲಾಖೆಯ ಆನ್‌ಲೈನ್ ಸೇವೆಗಳನ್ನು ಒದಗಿಸಲು ಅನುವು ಮಾಡಿಕೊಡಲು ಸರ್ಕಾರವು ತೀರ್ಮಾನಿಸಿ ಈ ಕೆಳಗಿನಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ನಿಗಮ ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಅನ್ಯ ಸೇವೆ/ನಿಯೋಜನೆಯ ಮೇಲೆ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ವಿಮಾ ಇಲಾಖೆಯ ಆನ್‌ಲೈನ್ ಸೇವೆಗಳನ್ನು ಒದಗಿಸಲು ಅನುವಾಗುವಂತೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳ ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳ ಕೋರಿಕೆಯನುಸಾರ NTT DDO Code (Non Treasury Transaction DDO Code) ಆಧಾರದ ಮೇಲೆ ವಿಮಾ ಇಲಾಖೆಯ ಆನ್‌ಲೈನ್ ಸೇವೆಗಳನ್ನು ಒದಗಿಸಲು ಸರ್ಕಾರವು ಅನುಮತಿಯನ್ನು ನೀಡಿ ಆದೇಶಿಸಿದೆ.

BIG NEWS: 'State Government Employees' Note: Important order from the government on 'KGID'!
Share. Facebook Twitter LinkedIn WhatsApp Email

Related Posts

ಪ್ರತಿದಿನವೂ ಈ ಏಳು ಚಿರಂಜೀವಿಗಳನ್ನು ತಪ್ಪದೇ ಸ್ಮರಿಸಿ, ನಿಮ್ಮ ಕಷ್ಟಗಳೆಲ್ಲವೂ ದೂರ

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂ.28ರಂದು ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

2 Mins Read

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

2 Mins Read
Recent News

ಎಳನೀರು ಎಲ್ಲರಿಗೂ ಆರೋಗ್ಯಕರವಲ್ಲ! ಈ 5 ಸಮಸ್ಯೆಯಿರುವವರು ತಪ್ಪದೇ ದೂರವಿರಬೇಕು

ಪ್ರತಿದಿನವೂ ಈ ಏಳು ಚಿರಂಜೀವಿಗಳನ್ನು ತಪ್ಪದೇ ಸ್ಮರಿಸಿ, ನಿಮ್ಮ ಕಷ್ಟಗಳೆಲ್ಲವೂ ದೂರ

ಮಕ್ಕಳ ಪೋಷಕರ ಗಮನಕ್ಕೆ: ಜೂ.28ರಂದು ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

State News
KARNATAKA

ಪ್ರತಿದಿನವೂ ಈ ಏಳು ಚಿರಂಜೀವಿಗಳನ್ನು ತಪ್ಪದೇ ಸ್ಮರಿಸಿ, ನಿಮ್ಮ ಕಷ್ಟಗಳೆಲ್ಲವೂ ದೂರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಅಶ್ವತ್ಥಾಮಾ ಬಲಿರ್ವ್ಯಾಸೋ ಹನೂಮಾಂಶ್ಚ ವಿಭೀಷಣಃ| ಕೃಪಃ ಪರಶುರಾಮಶ್ಚ ಸಪ್ತೈತೇ ಚಿರಜೀವಿನಃ || ಅಶ್ವತ್ಥಾಮ, ಬಲಿ, ವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯರು…

ಮಕ್ಕಳ ಪೋಷಕರ ಗಮನಕ್ಕೆ: ಜೂ.28ರಂದು ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

BIG NEWS : 12 ವರ್ಷಗಳಲ್ಲಿ 57 ಲಕ್ಷ ಕೋಟಿ ರೂ. ದೋಚಿದ ಮೋದಿ ಸರ್ಕಾರ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BREAKING : ನನ್ನ ಕರದ್ರೆ ದೆಹಲಿಗೆ ಹೋಗ್ತೀನಿ : ಸಿಎಂ ಬೆನ್ನಲ್ಲೆ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಪ್ಲಾನ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.