Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ, 8 ಮತದಾರರಲ್ಲಿ ಒಬ್ಬರು ನಕಲಿ : ರಾಹುಲ್ ಗಾಂಧಿ ಗಂಭೀರ ಆರೋಪ | WATCH VIDEO

05/11/2025 12:52 PM

BIG BREAKING : ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ : ರಾಹುಲ್ ಗಾಂಧಿ ಹೊಸ ಬಾಂಬ್!

05/11/2025 12:37 PM

BREAKING : ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ : ರಾಹುಲ್ ಗಾಂಧಿ ಮತ್ತೊಂದು ಬಾಂಬ್ | WATCH VIDEO

05/11/2025 12:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0903/01/2025 5:11 AM

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03ರ ಇಂದಿನಿಂದರಿ ಜನವರಿ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.

ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದುದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.

ಪರೀಕ್ಷಾ ಮುನ್ನ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪೋಲಿಸ್ ಉಪ ಅಧೀಕ್ಷಕರಾದ ಕಾರ್ಯಪ್ಪ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ವೆಂಕಟೇಶ್ , ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ಮಗಳ ಶವ ಸಾಗಿಸಲು ಲಂಚ ಕೇಳಿದ ಕೇಸ್ : `ಕರ್ನಾಟಕ ಸರ್ಕಾರ’ಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್.!

05/11/2025 12:25 PM1 Min Read

BIG NEWS : ಮಗಳ ಮೃತ ದೇಹ ಸಾಗಿಸಲು ಲಂಚ ಕೇಳಿದ ಕೇಸ್ : ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ

05/11/2025 12:24 PM1 Min Read

ALERT : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ತಕ್ಷಣವೇ ಇಲ್ಲಿ ದೂರು ಸಲ್ಲಿಸಿ.!

05/11/2025 12:24 PM1 Min Read
Recent News

BREAKING : ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ, 8 ಮತದಾರರಲ್ಲಿ ಒಬ್ಬರು ನಕಲಿ : ರಾಹುಲ್ ಗಾಂಧಿ ಗಂಭೀರ ಆರೋಪ | WATCH VIDEO

05/11/2025 12:52 PM

BIG BREAKING : ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ನಡೆದಿದೆ : ರಾಹುಲ್ ಗಾಂಧಿ ಹೊಸ ಬಾಂಬ್!

05/11/2025 12:37 PM

BREAKING : ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ : ರಾಹುಲ್ ಗಾಂಧಿ ಮತ್ತೊಂದು ಬಾಂಬ್ | WATCH VIDEO

05/11/2025 12:34 PM

BREAKING : ಮಗಳ ಶವ ಸಾಗಿಸಲು ಲಂಚ ಕೇಳಿದ ಕೇಸ್ : `ಕರ್ನಾಟಕ ಸರ್ಕಾರ’ಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್.!

05/11/2025 12:25 PM
State News
KARNATAKA

BREAKING : ಮಗಳ ಶವ ಸಾಗಿಸಲು ಲಂಚ ಕೇಳಿದ ಕೇಸ್ : `ಕರ್ನಾಟಕ ಸರ್ಕಾರ’ಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್.!

By kannadanewsnow5705/11/2025 12:25 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಗಳ ಮೃತದೇಹ ಸಾಗಿಸಲು ತಂದೆ ಒಬ್ಬರಿಗೆ ಲಂಚ ಕೇಳಿದ…

BIG NEWS : ಮಗಳ ಮೃತ ದೇಹ ಸಾಗಿಸಲು ಲಂಚ ಕೇಳಿದ ಕೇಸ್ : ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿ

05/11/2025 12:24 PM

ALERT : ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ `ಅಶ್ಲೀಲ ವಿಡಿಯೋ, ಫೋಟೋ’ ವೈರಲ್ ಆದ್ರೆ ತಕ್ಷಣವೇ ಇಲ್ಲಿ ದೂರು ಸಲ್ಲಿಸಿ.!

05/11/2025 12:24 PM

ಕಬ್ಬು ಬೆಳೆಗಾರರಿಗೆ ಬಿಜೆಪಿ ಸರ್ಕಾರಕ್ಕಿಂತಲೂ ಹೆಚ್ಚಿನ ದರ ನಿಗದಿ ಮಾಡುತ್ತೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ

05/11/2025 12:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.