Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0907/01/2025 5:24 PM

ನವದೆಹಲಿ : “ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

“ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ” ಎಂದು ಹೇಳಿದರು.

“ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಬೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ” ಎಂದರು.

“ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ” ಎಂದರು.

“ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು” ಎಂದರು.

“ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ. ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ” ಎಂದು ಹೇಳಿದರು.

“ಕರ್ನಾಟಕಕ್ಕೆ ಸಂಬಂಧಿಸಿದ ನೀರಾವರಿ ಕೆಲಸಗಳು ಹಾಗೂ ಕಡತಗಳು ಸಚಿವರಾದ ವಿ.ಸೋಮಣ್ಣ ಅವರ ಗಮನಕ್ಕೆ ತರಬೇಕು ಎನ್ನುವ ನಿರ್ದೇಶನವಿರುವ ಕಾರಣಕ್ಕೆ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಕೆಲಸಗಳ ಬಗ್ಗೆ ವಿವರಣೆ ನೀಡಿದೆ” ಎಂದು ತಿಳಿಸಿದರು.

ಮೇಕೆದಾಟು ವಿಚಾರ ಚರ್ಚೆಯಾಯಿತೆ ಎಂದು ಕೇಳಿದಾಗ, “ಅದರ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಆಗುವುದಿಲ್ಲ” ಎಂದರು.

ಸುಮಾರು 5-6 ಸಾವಿರ ಉಳಿತಾಯ

ದೆಹಲಿಯಲ್ಲಿ ಘೋಷಣೆ ಮಾಡಿರುವ ಪ್ಯಾರಿ ದೀದಿ ಯೋಜನೆ ಮೂಲಕ ಮಹಿಳೆಯರಿಗೆ 2,500 ನೀಡಲಾಗುವುದು ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಕೇವಲ 2 ಸಾವಿರ ನೀಡಲಾಗುತ್ತಿದೆ ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, “2 ಸಾವಿರ ಎನ್ನವುದು ಕೇವಲವೇ? ದೆಹಲಿ ಹಾಗೂ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬೇರೆ, ಬೇರೆಯಿರುತ್ತದೆ. ದೆಹಲಿಯಲ್ಲಿ ಖರ್ಚು ಹೆಚ್ಚು, ಕರ್ನಾಟಕದಲ್ಲಿ ಕಡಿಮೆಯಿದೆ. ಅಲ್ಲದೇ ಕರ್ನಾಟಕದಲ್ಲಿ ಐದು ಗ್ಯಾರಂಟಿಗಳ ಮೂಲಕ ಸುಮಾರು 5-6 ಸಾವಿರ ಉಳಿತಾಯ ಪ್ರತಿ ಕುಟುಂಬಕ್ಕೆ ಆಗುತ್ತಿದೆ” ಎಂದರು.

ಡಿನ್ನರ್ ರಾಜಕೀಯ ಮತ್ತು ಒಬ್ಬೊಬ್ಬರೇ ಸಚಿವರು ಔತಣಕೂಟ ಏರ್ಪಡಿಸುತ್ತಿರುವ ಬಗ್ಗೆ ಹಾಗೂ ಗೃಹಸಚಿವ ಪರಮೇಶ್ವರ್ ಅವರು ಬುಧವಾರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, “ನಾನು ಹೊರದೇಶದಲ್ಲಿದ್ದ ಕಾರಣಕ್ಕೆ ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೆಂಗಳೂರಿಗೆ ಹೋದ ನಂತರ ಇದರ ಬಗ್ಗೆ ತಿಳಿದುಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಪಕ್ಷದ ಕೆಲಸವಿದ್ದ ಕಾರಣಕ್ಕೆ ಹಾಗೂ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರದಂದು ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯ ಪ್ಯಾರಿ ದೀದಿ ಯೋಜನೆ ಪ್ರಕಟಣೆಗಾಗಿ ಬಂದಿದ್ದೆ” ಎಂದು ಹೇಳಿದರು.

ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆ.?

60 ಪರ್ಸೆಂಟ್ ಸರ್ಕಾರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಭಂಡಾರದಲ್ಲಿ ಏನೇನಿದೆ ಎನ್ನುವ ಬಗ್ಗೆ ಆನಂತರ ಮಾತನಾಡೋಣ. ಈಗ ಚರ್ಚೆ ಮಾಡುವುದು ಬೇಡ” ಎಂದರು.

ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ತಳುಕು ಹಾಕಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿದೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಯಾವ ಐಶ್ವರ್ಯ ಗೌಡನೂ ಗೊತ್ತಿಲ್ಲ. ನನಗೆ ಸಂಬಂಧವಿಲ್ಲದ್ದು ಹಾಗೂ ಗೊತ್ತಿಲ್ಲದೇ ಇರುವ ಬಗ್ಗೆ ಮಾತನಾಡುವುದಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ಅವರನ್ನು ಕೂಡ ಭೇಟಿಯಾಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ನನ್ನ ತಮ್ಮ ಇದರ ಬಗ್ಗೆ ನಿರ್ಲಕ್ಷ್ಯವಹಿಸಬೇಕಾಗಿತ್ತು. ಆತ ಕೂಡ ವಿದೇಶಕ್ಕೆ ಹೋಗಿದ್ದ ಕಾರಣಕ್ಕೆ ನಾನು ಮಾತನಾಡಲು ಸಾಧ್ಯವಾಗಿಲ್ಲ” ಎಂದರು.

BIG UPDATE: ಶಿವಮೊಗ್ಗದಲ್ಲಿ ಆರು ಮಕ್ಕಳಿಗೆ HMPV ವೈರಸ್ ಸೋಂಕು ದೃಢ | HMPV virus

BREAKING: ಹೃದಯಾಘಾತದಿಂದ ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ಸಾವು: ಪರಿಹಾರಕ್ಕೆ ಆಗ್ರಹ

Share. Facebook Twitter LinkedIn WhatsApp Email

Related Posts

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM2 Mins Read

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM1 Min Read

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM1 Min Read
Recent News

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

10/01/2026 10:01 PM

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM
State News
KARNATAKA

ಬಿಜೆಪಿ ‘ಸುಳ್ಳು ಫ್ಲೆಕ್ಸ್’ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ; ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ

By kannadanewsnow0910/01/2026 10:01 PM KARNATAKA 2 Mins Read

ಶಿವಮೊಗ್ಗ : ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿವಿಧ ಯೋಜನೆಯಡಿ ತಾಲ್ಲೂಕಿನ ಅಭಿವೃದ್ದಿಗೆ 667.42 ಕೋಟಿ…

ಸಾಗರದ ಮಾರಿಕಾಂಬ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ, ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ: ಶಾಸಕ ಗೋಪಾಲಕೃಷ್ಣ ಬೇಳೂರು

10/01/2026 9:40 PM

BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

10/01/2026 9:27 PM

BREAKING: ದ್ವಿತೀಯ PUC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: FIR ದಾಖಲು

10/01/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.