Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನಿಂದ H-1B, H-4 ವೀಸಾ ಅರ್ಜಿದಾರರ ಸೋಷಿಯಲ್ ಮೀಡಿಯಾ ಪರಿಶೀಲನೆ : ಅಮೇರಿಕಾ ಘೋಷಣೆ

15/12/2025 8:18 AM

BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

15/12/2025 8:14 AM

BREAKING:ಚಿಲಿ ಅಧ್ಯಕ್ಷೀಯ ಚುನಾವಣೆ: ಬಲಪಂಥೀಯ ಅಭ್ಯರ್ಥಿ ಜೋಸ್ ಆಂಟೋನಿಯೊ ಕಾಸ್ಟ್ ಗೆ ಗೆಲುವು

15/12/2025 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ HDK ಗಂಭೀರ ಆರೋಪ
KARNATAKA

ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ HDK ಗಂಭೀರ ಆರೋಪ

By kannadanewsnow0910/01/2025 3:19 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು.

60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದರು ಕೇಂದ್ರ ಸಚಿವರು.

ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್ ಗಳೇ 60% ವಸೂಲಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಈ ಆಟ ಸರಕಾರ ಬಿಡಬೇಕು ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಕೃಷ್ಣಭೈರೇಗೌಡ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ:

ಮಗ ಸೋತಿರುವುದಕ್ಕೆ ಹತಾಶರಾಗಿ ಕುಮಾರಸ್ವಾಮಿ 60% ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ನಾನು ಮಗ ಸೋತಿರುವುದಕ್ಕೆ ಹತಾಶನಾಗಿದ್ದೇನೋ ಇಲ್ಲವೋ. ಎಂಬುದ್ಧು ಇರಲಿ. ಅದನ್ನು ಬಿಟ್ಟು ಮೊದಲು 60% ಕಮೀಷನ್ ಬಗ್ಗೆ ಉತ್ತರ ಹೇಳಲಿ ಎಂದು ಸಚಿವರು ಸವಾಲು ಹಾಕಿದರು.

ಕಂದಾಯ ಇಲಾಖೆ ಸತ್ಯ ಮಾರ್ಗದಲ್ಲಿ ನಡೆಯುತ್ತಿದೆಯಾ? ಬೆಂಗಳೂರು AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ? ಎಷ್ಟು ರೇಟ್ ಫಿಕ್ಸ್ ಮಾಡಿಕೊಂಡಿದ್ದೀರಾ? ಆ ಹಣ ಯಾರು ಯಾರಿಗೆ ಹೋಗುತ್ತದೆ? ಏನೇನು ದಂಧೆ ನಡೆಸುತ್ತಿದ್ದೀರಿ ಎನ್ನುವುದು ನಮಗೆ ಗೊತ್ತಿಲ್ಲವಾ? ಎಂದು ಕಂದಾಯ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ:

ನಾನು ಕೂಡ ಎರಡು ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಾನು ಸತ್ಯ ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ಇವತ್ತಿನ ರಾಜಕಾರಣಕ್ಕೆ ದುಡ್ಡು ಬೇಕು. ಪ್ರೀತಿ ವಿಶ್ವಾಸದಿಂದ ನಾವು ಕೆಲಸ ಮಾಡಿದಾಗ ಚುನಾವಣೆ ಸಮಯದಲ್ಲಿ ಯಾರೋ ನಾಲ್ವರು ಸಹಾಯ ಮಾಡುತ್ತಾರೆ. ಆದರೆ ಅಧಿಕಾರ ಇಟ್ಟುಕೊಂಡು ಪ್ರತಿದಿನ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ತನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟವೇ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ಪ್ರತಿಕ್ರಿಯೆಗೆ ನಕಾರ:

ಡಿ.ಕೆ.ಶಿವಕುಮಾರ್ ತಮಿಳುನಾಡಿನಲ್ಲಿ ಶತ್ರು ಸಂಹಾರ ಪೂಜೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಕೇಂದ್ರ ಸಚಿವರು; ಎಲ್ಲರನ್ನೂ ದೇವರೇ ಕಾಪಾಡಬೇಕು. ಅಧಿಕಾರ ಬೇಕು ಎಂದು ದೇವರ ಮೊರೆ ಹೋಗಿದ್ದು ಸಾಮಾನ್ಯ. ಆದರೆ, ಎಲ್ಲೋ ಶತ್ರುನಾಶಕ್ಕೆ ಹೋಗುವುದು ನನಗೆ ಗೊತ್ತಿಲ್ಲ ಎಂದರು.

ಇವತ್ತು ಲಕ್ಷಾಂತರ ಜನ ವೈಕುಂಠ ಏಕಾದಶಿ. ವೈಕುಂಠದ ಬಾಗಿಲು ತೆರೆಯುತ್ತದೆ ಎನ್ನುವ ನಂಬಿಕೆ ಇದೆ. ದೇವರಲ್ಲಿ ಪ್ರಾರ್ಥನೆ ಮಾಡಿ, ಎಲ್ಲರಿಗೂ ಒಳ್ಳೆಯದು ಮಾಡು ತಂದೆ ಎಂದು ಬೇಡಿಕೊಂಡೆ ಎಂದು ಅವರು ಹೇಳಿದರು.

ದಲಿತ ಶಾಸಕರ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ, ಅದಕ್ಕೆ ಸಭೆ ಮಾಡುತ್ತಿದ್ದೇವೆ ಎಂದು ಅವರಲ್ಲಿ ಕೆಲವರು ಹೇಳಿದ್ದಾರೆ. ಡಿನ್ನರ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಬಗ್ಗೆ ಚರ್ಚೆ ಮಾಡುವುದಾದರೆ ಕ್ಯಾಬಿನೆಟ್ ಇರುವುದು ಯಾಕೆ? SC-ST ಇರಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ನಲ್ಲಿ ಕೂತು ಚರ್ಚೆ ಮಾಡಬೇಕಾ? ಅಥವಾ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ? ಎಂದು ಕಟುವಾಗಿ ಟೀಕಿಸಿದರು.

ಕಾಂಗ್ರೆಸ್ ನಲ್ಲಿ ಸಿಎಂ ಫೈಟ್ ವಿಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ ಅವರು; ಅದು ಅವರ ಪಕ್ಷದ ವಿಚಾರ. ಅವರ ಪಕ್ಷದ ವಿಚಾರ ಅವರು ಚರ್ಚೆ ಮಾಡಿಕೊಳ್ಳಲಿ ಬಿಡಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

BIG NEWS: ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ: ವಿನಯ್ ಗುರೂಜಿ ಭವಿಷ್ಯ | DK Shivakumar

Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!

Share. Facebook Twitter LinkedIn WhatsApp Email

Related Posts

BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

15/12/2025 8:14 AM1 Min Read

BIG NEWS : 60 ವರ್ಷ ತುಂಬಿದ ರಾಜ್ಯದ `ಅಡುಗೆ ಸಿಬ್ಬಂದಿ’ಗಳಿಗೆ ‘ಇಡಿಗಂಟು’ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ.!

15/12/2025 8:00 AM1 Min Read

BIG NEWS : ರಾಜ್ಯದ ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು `‘SSLC- ಪರೀಕ್ಷೆ’ಗೆ ನೋಂದಾಯಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

15/12/2025 7:55 AM1 Min Read
Recent News

ಇಂದಿನಿಂದ H-1B, H-4 ವೀಸಾ ಅರ್ಜಿದಾರರ ಸೋಷಿಯಲ್ ಮೀಡಿಯಾ ಪರಿಶೀಲನೆ : ಅಮೇರಿಕಾ ಘೋಷಣೆ

15/12/2025 8:18 AM

BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

15/12/2025 8:14 AM

BREAKING:ಚಿಲಿ ಅಧ್ಯಕ್ಷೀಯ ಚುನಾವಣೆ: ಬಲಪಂಥೀಯ ಅಭ್ಯರ್ಥಿ ಜೋಸ್ ಆಂಟೋನಿಯೊ ಕಾಸ್ಟ್ ಗೆ ಗೆಲುವು

15/12/2025 8:14 AM

BIG NEWS : 60 ವರ್ಷ ತುಂಬಿದ ರಾಜ್ಯದ `ಅಡುಗೆ ಸಿಬ್ಬಂದಿ’ಗಳಿಗೆ ‘ಇಡಿಗಂಟು’ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ.!

15/12/2025 8:00 AM
State News
KARNATAKA

BREAKING : ಇಂದು ಸಂಜೆ 4 ಗಂಟೆಗೆ ದಾವಣಗೆರೆಯ ಕಲ್ಲೇಶ್ವರ್ ಮಿಲ್ ನಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತ್ಯಕ್ರಿಯೆ.!

By kannadanewsnow5715/12/2025 8:14 AM KARNATAKA 1 Min Read

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು…

BIG NEWS : 60 ವರ್ಷ ತುಂಬಿದ ರಾಜ್ಯದ `ಅಡುಗೆ ಸಿಬ್ಬಂದಿ’ಗಳಿಗೆ ‘ಇಡಿಗಂಟು’ ಸೌಲಭ್ಯ : ಸರ್ಕಾರದಿಂದ ಮಹತ್ವದ ಆದೇಶ.!

15/12/2025 8:00 AM

BIG NEWS : ರಾಜ್ಯದ ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು `‘SSLC- ಪರೀಕ್ಷೆ’ಗೆ ನೋಂದಾಯಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ

15/12/2025 7:55 AM

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಅಪಾಯ.!

15/12/2025 7:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.