Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

07/01/2026 9:20 PM

Good News ; ಆರ್ಥಿಕ ರಂಗದಲ್ಲಿ ಒಳ್ಳೆಯ ಸುದ್ದಿ ; ಭಾರತದ ಆರ್ಥಿಕತೆಯು 7.4% ವೇಗದಲ್ಲಿ ಬೆಳವಣಿಗೆ!

07/01/2026 9:14 PM

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ
KARNATAKA

Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ

By kannadanewsnow0910/01/2025 4:52 PM

ಬೆಂಗಳೂರು: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. 

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

GOOD NEWS: ಬಗರ್ ಹುಕುಂ ರೈತರಿಗೆ ಸಿಹಿಸುದ್ದಿ: ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಕುಟುಂಬಸ್ಥರಿಗೆ ಭೂಮಿ ಮಂಜೂರು

BREAKING: ದ್ವಿತೀಯ ಪಿಯುಸಿ, SSLC ವಾರ್ಷಿಕ ಪರೀಕ್ಷೆ-1ರ ‘ಅಂತಿಮ ವೇಳಾಪಟ್ಟಿ’ ಪ್ರಕಟ

Share. Facebook Twitter LinkedIn WhatsApp Email

Related Posts

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

07/01/2026 9:20 PM2 Mins Read

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM1 Min Read

ಮಂಡ್ಯದಲ್ಲಿ ಪೊಲೀಸ್ ಠಾಣೆ ಹಿಂದಿನ ವಿಶ್ರಾಂತಿ ಗೃಹದಲ್ಲೇ ಪೇದೆ ಆತ್ಮಹತ್ಯೆ

07/01/2026 8:44 PM1 Min Read
Recent News

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

07/01/2026 9:20 PM

Good News ; ಆರ್ಥಿಕ ರಂಗದಲ್ಲಿ ಒಳ್ಳೆಯ ಸುದ್ದಿ ; ಭಾರತದ ಆರ್ಥಿಕತೆಯು 7.4% ವೇಗದಲ್ಲಿ ಬೆಳವಣಿಗೆ!

07/01/2026 9:14 PM

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM

BREAKING : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯ ‘ಅಮನ್ ಭೈನ್ಸ್ವಾಲ್’ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ.!

07/01/2026 8:48 PM
State News
KARNATAKA

ರಾಜ್ಯ ಕಾಂಗ್ರೆಸ್ ಗೆ ಕಾನೂನು ಬಲ; ವಕೀಲರ ಬೃಹತ್ ಸಮ್ಮೇಳನಕ್ಕೆ ದಿಲ್ಲಿಯಲ್ಲಿ ಕಸರತ್ತು, ಜ.24ರಂದು ಮಂಗಳೂರಿನಲ್ಲಿ ಸಮಾವೇಶ

By kannadanewsnow0907/01/2026 9:20 PM KARNATAKA 2 Mins Read

ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ…

ನೀರು ಸರಬರಾಜಿಗೂ ಮುನ್ನ ಮಾಲಿನ್ಯ ಪತ್ತೆ ಮಾಡುವ ತಂತ್ರಜ್ಞಾನದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಸಕ್ತಿ

07/01/2026 8:51 PM

ಮಂಡ್ಯದಲ್ಲಿ ಪೊಲೀಸ್ ಠಾಣೆ ಹಿಂದಿನ ವಿಶ್ರಾಂತಿ ಗೃಹದಲ್ಲೇ ಪೇದೆ ಆತ್ಮಹತ್ಯೆ

07/01/2026 8:44 PM

ಅರಳಿ ಮರಕ್ಕೆ ಶನಿವಾರ ಮಾತ್ರ ಪೂಜೆ ಏಕೆ ಗೊತ್ತಾ.? ಇಲ್ಲಿದೆ ಮಾಹಿತಿ

07/01/2026 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.