ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಕೋಟೆ ಕಾರು ಸಹಕಾರಿ ಬ್ಯಾಂಕ್ ನಲ್ಲಿ ನಿನ್ನೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಫಿಯೆಟ್ ಕಾರಿನಲ್ಲಿ ದರೋಡೆಕೋರರು ಉಡುಪಿಯ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಕಟ್ಟುತ್ತಿದ್ದಾಗ ಓರ್ವ ದರೋಡೆಕೋರನ ಫೋಟೋ ಒಂದು ಇದೀಗ ವೈರಲಾಗಿದೆ.
ಹೌದು ನಿನ್ನೆ ಕೋಟೆ ಕಾರು ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು, ಬ್ಯಾಂಕ್ ಸಿಬ್ಬಂದಿಗಳಿಗೆ ಬಂದೂಕು ತೋರಿಸಿ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ಸೇರಿ ಒಟ್ಟು 12 ಕೋಟಿ ರೂಪಾಯಿ ದೋಚಿದ್ದಾರೆ. ಬಳಿಕ ಅಲ್ಲಿಂದ ಅವರು ನೇರವಾಗಿ ಕೇರಳಕ್ಕೆ ತೆರಳಿ ಅಲ್ಲಿಂದ ಅಜ್ಞಾತ ಸ್ಥಳದಿಂದ ತಮಿಳುನಾಡಿನ ಕಡೆ ಬೋಟ್ನಲ್ಲಿ ಹೋಗುತ್ತಿರುವ ಶಂಕೆ ವ್ಯಕ್ತವಾಗಿದೆ. ಕೇರಳದಲ್ಲಿ ಸುತ್ತಾಡಿ ಪೊಲೀಸರ ತಂಡ ಇದೀಗ ದರೋಡೆಕೋರ ಮಾಹಿತಿ ಕಲೆ ಹಾಕುತ್ತಿದೆ.
ದರೋಡೆ ಬಳಿಕ ದುಷ್ಕರ್ಮಿಗಳು ಉಡುಪಿಯ ಮಾರ್ಗವಾಗಿ ಕೇರಳಕ್ಕೆ ತೆರಳಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಉಡುಪಿಯ ಬಳಿ ಟೋಲ್ ಗೇಟ್ ಬಳಿ ಕಾರು ಚಾಲನೆ ಮಾಡುತ್ತಿದ್ದ ದರೋಡೆಕೋರನೊಬ್ಬ ಮಾಸ್ಕನ್ನು ತೆಗೆದು ಟೋಲ್ ಶುಲ್ಕ ಕಟ್ಟುತ್ತಿರುವ ಫೋಟೋ ಇದೀಗ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವೇಳೆ ಪೊಲೀಸರ ದಿಕ್ಕು ತಪ್ಪಿಸಲು ದರೋಡೆಕೋರರು ಒಂದೇ ಬಣ್ಣದ ಎರಡು ಕಾರ್ ನೊಂದಿಗೆ ಬ್ಯಾಂಕ್ ಬಳಿ ಬಂದು ದರೋಡೆ ಮಾಡಿದ್ದಾರೆ. ಬಳಿಕ ಮಂಗಳೂರು ದಿಕ್ಕಿನಡೆ ಒಂದು ಕಾರು ಹೋದರೆ ಕೇರಳಕ್ಕೆ ಮತ್ತೊಂದು ಕಾರು ಹೋಗಿದೆ ಎನ್ನಲಾಗಿದೆ. ಇದೆ ವೇಳೆ ಮಂಗಳೂರು ಉಡುಪಿಯ ಬಳಿ ಹೆಜವಾಡಿ ಎಂಬಲ್ಲಿ ಮೊಬೈಲ್ ಎಸೆದು ಪರಾರಿಯಾಗಿದ್ದಾರೆ. ಸದ್ಯ ಪೊಲೀಸರು, ಕೇರಳ ತಮಿಳುನಾಡಿನಲ್ಲಿ ದರೋಡೆಕೋರ ಪತ್ತೆಗೆ ಬಲೆ ಬೀಸಿದ್ದಾರೆ.
ಪ್ರಕರಣ ಹಿನ್ನೆಲೆ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್’ ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕು ತೋರಿಸಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 10 ರಿಂದ 12 ಕೋಟಿ ಚಿನ್ನ, ನಗದು ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ದೋಚಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.ಬ್ಯಾಂಕ್ ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಹಣ , ಚಿನ್ನಾಭರಣ ದೋಚಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.