Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ID ಗಳ ಬೇಟೆ: IRCTCಯಲ್ಲಿ ಪ್ರತಿದಿನ 1 ಲಕ್ಷ ಖಾತೆಗಳಿಂದ ಕೇವಲ 5000ಕ್ಕೆ ಕುಸಿತ !

14/12/2025 10:49 AM

BREAKING: ಪುಲ್ವಾಮಾದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಅರೆಸ್ಟ್, ಗ್ರೆನೇಡ್ ಪತ್ತೆ

14/12/2025 10:33 AM

ಚಿಕ್ಕಮಗಳೂರು : ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಯುವಕನ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ!

14/12/2025 10:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್
KARNATAKA

‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್

By kannadanewsnow0918/01/2025 2:11 PM

ಬಳ್ಳಾರಿ: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಯುವಕನ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ!

14/12/2025 10:33 AM2 Mins Read

ಮುಂದಿನ 3 ದಿನ ರಾಜ್ಯದಲ್ಲಿ ವಿಪರೀತ ಶೀತಗಾಳಿ : ಬೆಂಗಳೂರಲ್ಲಿ 13 ಡಿಗ್ರಿ ಸೆಲ್ಸಿಯಸ್ ಗೆ ಕುಸಿದ ಕನಿಷ್ಠ ತಾಪಮಾನ!

14/12/2025 10:19 AM1 Min Read

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

14/12/2025 10:13 AM1 Min Read
Recent News

ನಕಲಿ ID ಗಳ ಬೇಟೆ: IRCTCಯಲ್ಲಿ ಪ್ರತಿದಿನ 1 ಲಕ್ಷ ಖಾತೆಗಳಿಂದ ಕೇವಲ 5000ಕ್ಕೆ ಕುಸಿತ !

14/12/2025 10:49 AM

BREAKING: ಪುಲ್ವಾಮಾದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಅರೆಸ್ಟ್, ಗ್ರೆನೇಡ್ ಪತ್ತೆ

14/12/2025 10:33 AM

ಚಿಕ್ಕಮಗಳೂರು : ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಯುವಕನ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ!

14/12/2025 10:33 AM

ಮುಂದಿನ 3 ದಿನ ರಾಜ್ಯದಲ್ಲಿ ವಿಪರೀತ ಶೀತಗಾಳಿ : ಬೆಂಗಳೂರಲ್ಲಿ 13 ಡಿಗ್ರಿ ಸೆಲ್ಸಿಯಸ್ ಗೆ ಕುಸಿದ ಕನಿಷ್ಠ ತಾಪಮಾನ!

14/12/2025 10:19 AM
State News
KARNATAKA

ಚಿಕ್ಕಮಗಳೂರು : ಪ್ರೀತಿಸಿ ಕೈಕೊಟ್ಟು ಮತ್ತೊಬ್ಬಳ ಜೊತೆ ವಿವಾಹ : ಯುವಕನ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ!

By kannadanewsnow0514/12/2025 10:33 AM KARNATAKA 2 Mins Read

ಚಿಕ್ಕಮಗಳೂರು : ಯುವಕನೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಬೇರೆ ಯುವತಿಯ ಜೊತೆಗೆ ಮದುವೆ…

ಮುಂದಿನ 3 ದಿನ ರಾಜ್ಯದಲ್ಲಿ ವಿಪರೀತ ಶೀತಗಾಳಿ : ಬೆಂಗಳೂರಲ್ಲಿ 13 ಡಿಗ್ರಿ ಸೆಲ್ಸಿಯಸ್ ಗೆ ಕುಸಿದ ಕನಿಷ್ಠ ತಾಪಮಾನ!

14/12/2025 10:19 AM

BIG NEWS : ಗೋವಾ ಅಗ್ನಿ ದುರಂತದ ಬೆನ್ನಲ್ಲೇ ಫುಲ್ ಅಲರ್ಟ್ : ಬೆಂಗಳೂರು ಪೊಲೀಸರಿಂದ ‘ಆಪರೇಷನ್ ಪಬ್’ ಶುರು!

14/12/2025 10:13 AM

BIG NEWS : ಚಾಮರಾಜನಗರದಲ್ಲಿ ನೇಣು ಬಿಗಿದುಕೊಂಡು ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

14/12/2025 10:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.