Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 5 ವರ್ಷಗಳ ಕಾಲ ನಾನೇ ‘CM’ ಆಗಿರ್ತೇನೆ : ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

02/07/2025 12:23 PM

BREAKING : ‘RBI’ ನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ : ಅಧಿಕೃತ ಘೋಷಣೆ |Keshavan Ramachandran

02/07/2025 12:20 PM

BREAKING: ಅಹ್ಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾ ಮತ್ತು ಬೋಯಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಬ್ರಿಟನ್ ಮೂಲದ ಕುಟುಂಬಸ್ಥರ ಚಿಂತನೆ

02/07/2025 12:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ನೇತಾಜಿ ಸುಭಾಷ್ ಚಂದ್ರ ಬೋಸ್’ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ : CM ಸಿದ್ದರಾಮಯ್ಯ
KARNATAKA

`ನೇತಾಜಿ ಸುಭಾಷ್ ಚಂದ್ರ ಬೋಸ್’ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ : CM ಸಿದ್ದರಾಮಯ್ಯ

By kannadanewsnow5723/01/2025 11:45 AM

ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನ್ಮದಿಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.

ದಾವೋಸ್ ಶೃಂಗಸಭೆ

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ

ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.

ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ತಿಳಿಸಿದರು.

`ನೇತಾಜಿ ಸುಭಾಷ್ ಚಂದ್ರ ಬೋಸ್' ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ : CM ಸಿದ್ದರಾಮಯ್ಯ 'Netaji Subhash Chandra Bose' was an iconic patriot who fought to make India independent: Siddaramaiah
Share. Facebook Twitter LinkedIn WhatsApp Email

Related Posts

BREAKING : 5 ವರ್ಷಗಳ ಕಾಲ ನಾನೇ ‘CM’ ಆಗಿರ್ತೇನೆ : ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

02/07/2025 12:23 PM1 Min Read

BIG NEWS : ಸುಳ್ಳು ಸುದ್ದಿ, ದ್ವೇಷಪೂರಿತ ವಿಚಾರ ಹರಡುವವರ ವಿರುದ್ಧ ಶೀಘ್ರದಲ್ಲೇ ಪ್ರತ್ಯೇಕ ಕಾಯ್ದೆ ರಚನೆ : CM ಸಿದ್ದರಾಮಯ್ಯ

02/07/2025 12:09 PM2 Mins Read

BIG NEWS : ಜಾತಿಗಣತಿ ವೇಳೆ, ಖಾಲಿ ಮನೆಗೂ ಸ್ಟಿಕರ್ ಆಂಟಿಸಿ ಬಿಬಿಎಂಪಿ ಸಿಬ್ಬಂದಿ ಕಳ್ಳಾಟ : ಸಾರ್ವಜನಿಕರು ಆಕ್ರೋಶ!

02/07/2025 11:54 AM1 Min Read
Recent News

BREAKING : 5 ವರ್ಷಗಳ ಕಾಲ ನಾನೇ ‘CM’ ಆಗಿರ್ತೇನೆ : ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

02/07/2025 12:23 PM

BREAKING : ‘RBI’ ನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ : ಅಧಿಕೃತ ಘೋಷಣೆ |Keshavan Ramachandran

02/07/2025 12:20 PM

BREAKING: ಅಹ್ಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾ ಮತ್ತು ಬೋಯಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಬ್ರಿಟನ್ ಮೂಲದ ಕುಟುಂಬಸ್ಥರ ಚಿಂತನೆ

02/07/2025 12:16 PM

SHOCKING : ಪರ ಪುರುಷನೊಂದಿಗೆ ರೆಡ್ ಹ್ಯಾಂಡ್ ಆಗಿ ಗಂಡನ ಕೈಗೆ ಸಿಕ್ಕಿಬಿದ್ದ ಹೆಂಡತಿ : ವಿಡಿಯೋ ವೈರಲ್ | WATCH VIDEO

02/07/2025 12:16 PM
State News
KARNATAKA

BREAKING : 5 ವರ್ಷಗಳ ಕಾಲ ನಾನೇ ‘CM’ ಆಗಿರ್ತೇನೆ : ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

By kannadanewsnow0502/07/2025 12:23 PM KARNATAKA 1 Min Read

ಚಿಕ್ಕಬಳ್ಳಾಪುರ : ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಚಿಕ್ಕಬಳ್ಳಾಪುರಕ್ಕೆ ಭೇಟಿ…

BIG NEWS : ಸುಳ್ಳು ಸುದ್ದಿ, ದ್ವೇಷಪೂರಿತ ವಿಚಾರ ಹರಡುವವರ ವಿರುದ್ಧ ಶೀಘ್ರದಲ್ಲೇ ಪ್ರತ್ಯೇಕ ಕಾಯ್ದೆ ರಚನೆ : CM ಸಿದ್ದರಾಮಯ್ಯ

02/07/2025 12:09 PM

BIG NEWS : ಜಾತಿಗಣತಿ ವೇಳೆ, ಖಾಲಿ ಮನೆಗೂ ಸ್ಟಿಕರ್ ಆಂಟಿಸಿ ಬಿಬಿಎಂಪಿ ಸಿಬ್ಬಂದಿ ಕಳ್ಳಾಟ : ಸಾರ್ವಜನಿಕರು ಆಕ್ರೋಶ!

02/07/2025 11:54 AM

BIG NEWS: ‘KPTCL’ಗೆ ಷರತ್ತು, ಸೂಚನೆಯಲ್ಲಿ ಇರುವ ಸ್ಪಷ್ಟತೆ ಆದೇಶದಲ್ಲಿಲ್ಲ: ಈ ವರ್ಷವೂ ‘JE ವರ್ಗಾವಣೆ’ ಗೊಂದಲ | JE Transfer

02/07/2025 11:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.