Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಉದ್ದಿಮೆದಾರ’ರಿಗೆ ಮಹತ್ವದ ಮಾಹಿತಿ: BBMPಯಿಂದ ‘ಪರವಾನಿಗೆ ನವೀಕರಣ’ಕ್ಕೆ ಸೂಚನೆ
KARNATAKA

ಬೆಂಗಳೂರಿನ ‘ಉದ್ದಿಮೆದಾರ’ರಿಗೆ ಮಹತ್ವದ ಮಾಹಿತಿ: BBMPಯಿಂದ ‘ಪರವಾನಿಗೆ ನವೀಕರಣ’ಕ್ಕೆ ಸೂಚನೆ

By kannadanewsnow0927/01/2025 5:28 PM

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಉದ್ದಿಮೆ ಪರವಾನಿಗೆಯ ನವೀಕರಣದ ಕುರಿತು ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಆ ಮೂಲಕ ಬಿಬಿಎಂಪಿಯಿಂದ ಉದ್ದಿಮೆದಾರರಿಗೆ ಪರವಾನಿಗೆ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 2025-26 ನೇ ಸಾಲಿನ ಉದ್ದಿಮೆ ಪರವಾನಿಗೆ ನವೀಕರಣ ಕಾರ್ಯವನ್ನು ಈ ಕೆಳಕಂಡಂತೆ ಹಮ್ಮಿಕೊಳ್ಳಲು ಸೂಚಿಸಿದೆ.

1. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ (ಏಪ್ರಿಲ್ ನಿಂದ ಮಾರ್ಚ್) ನವೀಕರಣ ಮಾಡಲು ಸೂಚಿಸಿದೆ.

2. ನವೀಕರಣ ಶುಲ್ಕವನ್ನು ಉದ್ದಿಮೆದಾರರು ಕೋರುವ ಆರ್ಥಿಕ ವರ್ಷಕ್ಕೆ ಮಿತಿಗೊಳಿಸಿ ಪಾವತಿಸಿಕೊಳ್ಳಲು ಸೂಚಿಸಿದೆ.

3. ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್‌ಲೈನ್ ಮುಖಾಂತರ ಹಾಗೂ ಬ್ಯಾಂಕ್ ಚಲನ್ ಮೂಲಕ ಕೆನರಾ ಬ್ಯಾಂಕಿನಲ್ಲಿ ಪಾವತಿಸಿಕೊಳ್ಳಬೇಕಿರುತ್ತದೆ.

4. ದಿನಾಂಕ : 01-02-2025 ರಿಂದ 28-02-2025 ರವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.

5. ದಿನಾಂಕ : 01-03-2025 ರಿಂದ 31-03-2025 ರವರೆಗೆ ಪರವಾನಿಗೆ ನವೀಕರಣ ಶುಲ್ಕದ ಶೇಕಡಾ 25% ರಷ್ಟು ದಂಡ ಮೊತ್ತದೊಂದಿಗೆ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.

6. ದಿನಾಂಕ : 01-04-2025 ರಿಂದ ಪರವಾನಿಗೆ ಶುಲ್ಕದ ಶೇಕಡಾ 100% ರಷ್ಟು ದಂಡದ ಮೊತ್ತದೊಂದಿಗೆ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.

7. ಪರವಾನಿಗೆ ನವೀಕರಣ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್ ಮುಖಾಂತರವೇ ಮಾಡಲು ಸೂಚಿಸಿದೆ.

ವಲಯ ವರ್ಗಿಕರಣ ನಿಯಮಾವಳಿಯಂತೆ:

* ವಸತಿ ಪ್ರದೇಶದಲ್ಲಿ 40 ಅಡಿ ಅಗಲಕ್ಕಿಂತ ಕಡಿಮೆ ಇರುವ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆ ಪರವಾನಿಗೆಯನ್ನು ತಡೆಹಿಡಿದು ಹಿಂಬರಹ ನೀಡಿ ತಿರಸ್ಕರಿಸುವುದು.

* ವಸತಿ ಪ್ರದೇಶದಲ್ಲಿ 40 ಅಡಿ ಅಗಲಕ್ಕಿಂತ ಜಾಸ್ತಿಯಿರುವ ರಸ್ತೆಗಳಲ್ಲಿ 2015ರ ನಂತರ ಪ್ರಾರಂಭವಾಗಿರುವ ಉದ್ದಿಮೆಗಳನ್ನು ಮತ್ತು ನಿಗಧಿಪಡಿಸಿರುವ ಉದ್ದಿಮೆಗಳಿಗೆ ಮಾತ್ರ ವಿಸ್ತೀರ್ಣಕ್ಕೆ ಸೀಮಿತಗೊಳಿಸಿ, ಇತರೆ ಉದ್ದಿಮೆಗಳ ಪರವಾನಿಗೆ ನವೀಕರಣವನ್ನು ತಡೆಹಿಡಿದು ಹಿಂಬರಹ ನೀಡಿ ತಿರಸ್ಕರಿಸುವುದು.

ಕಟ್ಟಡ ನಿಯಮಾವಳಿಯಂತೆ:

ಉದ್ದಿಮೆಯು ಅನಧಿಕೃತವಾಗಿ ನಕ್ಷೆ ಉಲ್ಲಂಘನೆಯಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ಪೂರ್ತಿ ಅಥವಾ ಭಾಗಶಃ ಬಳಸುತ್ತಿರುವ ಬಗ್ಗೆ ದೂರುಗಳಿದ್ದಲ್ಲಿ, ವಾಹನ ನಿಲುಗಡೆ ಪ್ರದೇಶದಲ್ಲಿ ಅಥವಾ ರೂಫ್ ಟಾಪ್‌ಗಳಲ್ಲಿ ನಡೆಸುತ್ತಿದ್ದಲ್ಲಿ ಪರವಾನಿಗೆ ನವೀಕರಣವನ್ನು ತಡೆಹಿಡಿದು ಹಿಂಬರಹ ನೀಡಿ ತಿರಸ್ಕರಿಸಲು ತಿಳಿಸಿದೆ.

ಘನತ್ಯಾಜ್ಯ ಮತ್ತು ಸಾರ್ವಜನಿಕ ಆರೋಗ್ಯ ನಿಯಮಾವಳಿಯಂತೆ:

* 100 ಕೆ.ಜಿ.ಗಿಂತ ಜಾಸ್ತಿ ತ್ಯಾಜ್ಯ ಉತ್ಪತ್ತಿ ಮಾಡುವ ಉದ್ದಿಮೆಗಳಿಂದ ಮೂಲ ಸ್ಥಳದಲ್ಲಿ ತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿಗೆ ಸಂಬಂಧಿಸಿದ ದಾಖಲಾತಿಗಳನ್ನು ಪಡೆದು ಅಥವಾ Empanelled Vendorಗೆ ನೀಡುತ್ತಿದ್ದ ಪಕ್ಷದಲ್ಲಿ ಎಲ್ಲಾ ವಿಧದ ತ್ಯಾಜ್ಯಗಳ ವಿಲೇವಾರಿಗೆ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಪ್ರತಿಯನ್ನು ಪಡೆದು ನವೀಕರಿಸುವುದು.

* ಉಲ್ಲೇಖ ಪತ್ರದಂತೆ ಕಛೇರಿ ಆದೇಶವನ್ನು ಪಾಲಿಸುತ್ತಿರುವ ಬಗ್ಗೆ ಕಲ್ಯಾಣ ಮಂಟಪ ಉದ್ದಿಮೆದಾರರಿಂದ ಲಿಖಿತ ಹೇಳಿಕೆ ಪಡೆದು ಸದರಿ ಕಛೇರಿ ಆದೇಶವನ್ನು ಸ್ಥಳದಲ್ಲಿ ಪ್ರದರ್ಶಿಸಿರುವ ಛಾಯಾ ಚಿತ್ರವನ್ನು ಪಡೆದು ನವೀಕರಿಸುವುದು.

* ಹೋಟೆಲ್ / ರೆಸ್ಟೋರೆಂಟ್ ಮತ್ತು ಆಹಾರ ಸರಬರಾಜು ಮಾಡುವ ಉದ್ದಿಮೆಗಳು ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧವನ್ನು ಪಾಲಿಸುವ ಕುರಿತು ಲಿಖಿತ ಹೇಳಿಕೆ ಪಡೆದುಕೊಳ್ಳುವುದು.

* ಉದ್ದಿಮೆ ಸ್ಥಳಗಳಲ್ಲಿ ಪ್ಲಾಸ್ಟಿಕ್ ನಿಷೇಧ ಬಗ್ಗೆ ಹಾಗೂ ಒಮ್ಮೆ ಬಳಸಿ ಬಿಸಾಡುವ ಸಾಮಗ್ರಿಗಳನ್ನು ಉಪಯೋಗಿಸದಂತೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲು ಸೂಚಿಸುವುದು.

* ಉದ್ದಿಮೆ ಸ್ಥಳಗಳಲ್ಲಿ ಹಸಿ ಕಸಕ್ಕೆ (ಹಸಿರು ಬಣ್ಣ) ಮತ್ತು ಒಣ ಕಸಕ್ಕೆ (ನೀಲಿ ಬಣ್ಣ) ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಟ್ಟುಕೊಂಡು ವೈಜ್ಞಾನಿಕವಾಗಿ ಅದನ್ನು ವಿಲೇವಾರಿ ಮಾಡುವುದು.

ಅದರಂತೆ ವಲಯ ಆರೋಗ್ಯಾಧಿಕಾರಿಗಳು, ಉಪ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಮೇಲಿನ ಅಂಶಗಳನ್ನು ಪರಿಗಣಿಸಿ, 2025-26ನೇ ಸಾಲಿನ ನವೀಕರಣವನ್ನು ಹಮ್ಮಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸುತ್ತೋಲೆ ಮೂಲಕ ಸೂಚಿಸಿರುತ್ತಾರೆ.

ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸೋರ ವಿರುದ್ಧ FIR: ತುಷಾರ್ ಗಿರಿನಾಥ್

SHOCKING : ‘ಸೆಕ್ಸ್’ ಮಾಡುವಾಗಲೇ ಬಾಲ್ಕನಿಯಿಂದ ಬಿದ್ದು ನೀಲಿತಾರೆ ‘ಓನ್ಲಿ ಫ್ಯಾನ್ಸ್ ಮಾಡೆಲ್’ ಸಾವು | Onlyfans death

Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM1 Min Read
Recent News

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

BREAKING : ಏಷ್ಯಾಕಪ್’ನಲ್ಲಿ ಸ್ಪರ್ಧಿಸಲು ‘ಪಾಕಿಸ್ತಾನ ಹಾಕಿ ತಂಡ’ ಭಾರತಕ್ಕೆ ಆಗಮನ : ಕ್ರೀಡಾ ಸಚಿವಾಲಯ ಗ್ರೀನ್ ಸಿಗ್ನಲ್

03/07/2025 4:44 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

BREAKING : ಚಿಕಾಗೋದಲ್ಲಿ ಗುಂಡಿನ ದಾಳಿ ; ನಾಲ್ವರು ಸಾವು, 14 ಮಂದಿಗೆ ಗಾಯ

03/07/2025 4:20 PM
State News
KARNATAKA

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

By kannadanewsnow0903/07/2025 4:59 PM KARNATAKA 2 Mins Read

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ…

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!

03/07/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.