ಹಾಸನ : ಹಾಸನದಲ್ಲಿ ಘೋರ ಘಟನೆ ಸಂಭವಿಸಿದ್ದು, ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ತೆರಳಿದ್ದ ಗಣೇಶ್ (29) ರೋಹಿತ್ (28 ) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆ ಕೆಲಸ ಮುಗಿಸಿ ಈಜಲು ಕೆರೆಗೆ ತೆರಳಿದ್ದ ಯುವಕರು ಮೇಲೆ ಬಾರಲು ಸಾಧ್ಯವಾಗದೇ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.