Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಲಾಂಗ್ ನಿಂದ ಕೊಚ್ಚಿ ಪೂಜಾರಿಯ ಬರ್ಬರ ಹತ್ಯೆ.!

19/01/2026 8:42 AM

ನೀವು ಒಂದು ತಿಂಗಳ ಕಾಲ ಪ್ರತಿದಿನ 10000 ಹೆಜ್ಜೆಗಳನ್ನು ನಡೆದರೆ ಏನಾಗುತ್ತದೆ ಗೊತ್ತೇ?

19/01/2026 8:35 AM

ಉದ್ಯೋಗ ಖಾತರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್ : ಇನ್ಮುಂದೆ ಮುಂಚಿತವಾಗಿ ಖಾತೆಗೆ ವೇತನ ಜಮಾ.!

19/01/2026 8:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ
KARNATAKA

ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ

By kannadanewsnow0505/02/2025 8:04 PM

ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

SSLC ಫಲಿತಾಂಶ ಉತ್ತಮವಾಗಿರುವಂತೆ ಸೂಚನೆ

ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಪರೀಕ್ಷೆಗಳನ್ನು ನಿಯಮಾನಸಾರ ಕಟ್ನೆಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತಿರಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.

ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು hಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹ್ ಅಹವಾಲುಗಳನ್ನು ಸ್ವೀಕರಿಸಿದರು.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಲಾಂಗ್ ನಿಂದ ಕೊಚ್ಚಿ ಪೂಜಾರಿಯ ಬರ್ಬರ ಹತ್ಯೆ.!

19/01/2026 8:42 AM1 Min Read

BREAKING : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ : ಕಾಲೇಜ್ ಬಸ್ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು.!

19/01/2026 8:16 AM1 Min Read

ಚಿಕನ್ ಪ್ರಿಯರೇ ಗಮನಿಸಿ : ಚರ್ಮದೊಂದಿಗೆ `ಕೋಳಿ ಮಾಂಸ’ ತಿನ್ನಬೇಕೇ? ಚರ್ಮವಿಲ್ಲದೆ ತಿನ್ನಬೇಕೇ? ಇಲ್ಲಿದೆ ಮಾಹಿತಿ

19/01/2026 7:49 AM2 Mins Read
Recent News

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಲಾಂಗ್ ನಿಂದ ಕೊಚ್ಚಿ ಪೂಜಾರಿಯ ಬರ್ಬರ ಹತ್ಯೆ.!

19/01/2026 8:42 AM

ನೀವು ಒಂದು ತಿಂಗಳ ಕಾಲ ಪ್ರತಿದಿನ 10000 ಹೆಜ್ಜೆಗಳನ್ನು ನಡೆದರೆ ಏನಾಗುತ್ತದೆ ಗೊತ್ತೇ?

19/01/2026 8:35 AM

ಉದ್ಯೋಗ ಖಾತರಿ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್ : ಇನ್ಮುಂದೆ ಮುಂಚಿತವಾಗಿ ಖಾತೆಗೆ ವೇತನ ಜಮಾ.!

19/01/2026 8:33 AM

SHOCKING : ಬೆಟ್ಟಿಂಗ್ ಕಟ್ಟಿ 19 `ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!

19/01/2026 8:25 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ : ಲಾಂಗ್ ನಿಂದ ಕೊಚ್ಚಿ ಪೂಜಾರಿಯ ಬರ್ಬರ ಹತ್ಯೆ.!

By kannadanewsnow5719/01/2026 8:42 AM KARNATAKA 1 Min Read

ಕೋಲಾರ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ದುಷ್ಕರ್ಮಿಗಳು ದೇವಸ್ಥಾನದ ಪೂಜಾರಿಯನ್ನು ಲಾಂಗ್ ನಿಂದ ಕೊಚ್ಚಿ ಕೊಲೆ ಮಾಡಿರುವ…

BREAKING : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಭೀಕರ ಅಪಘಾತ : ಕಾಲೇಜ್ ಬಸ್ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು.!

19/01/2026 8:16 AM

ಚಿಕನ್ ಪ್ರಿಯರೇ ಗಮನಿಸಿ : ಚರ್ಮದೊಂದಿಗೆ `ಕೋಳಿ ಮಾಂಸ’ ತಿನ್ನಬೇಕೇ? ಚರ್ಮವಿಲ್ಲದೆ ತಿನ್ನಬೇಕೇ? ಇಲ್ಲಿದೆ ಮಾಹಿತಿ

19/01/2026 7:49 AM

BIG NEWS : ಜ. 29ರಂದು `ಸಾರಿಗೆ ನೌಕರರ ಪ್ರತಿಭಟನೆ’ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.!

19/01/2026 7:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.