Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಗೃಹಲಕ್ಷ್ಮಿ’ ಹಣದಿಂದ ಬಟ್ಟೆ ಅಂಗಡಿ ತೆರೆದ ಮಹಿಳೆ.!
KARNATAKA

BIG NEWS : `ಗೃಹಲಕ್ಷ್ಮಿ’ ಹಣದಿಂದ ಬಟ್ಟೆ ಅಂಗಡಿ ತೆರೆದ ಮಹಿಳೆ.!

By kannadanewsnow5706/02/2025 2:39 PM

ಕೊಪ್ಪಳ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಹಾಗೂ ಯುವ ಜನರ ಅಭಿವೃದ್ಧಿಗೆ ಬಹಳಷ್ಟು ಸಹಕರಿಯಾಗಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಹೇಳಿದರು.

ಅವರು ಬುಧವಾರ ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪುರ ಗ್ರಾ.ಪಂ ವ್ಯಾಪ್ತಿಯ ಹಂಚಿನಾಳ ಗ್ರಾಮದ ಗ್ರಾಮಸ್ಥರೊಂದಿಗೆ ಗೃಹಲಕ್ಷ್ಮಿ ಯೋಜನೆ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಸಂಬಂಧ ಮುಕ್ತವಾಗಿ ಚರ್ಚೆ ನಡೆಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ವಿಶೇಷವಾಗಿ ನಮ್ಮ ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿಯೇ ಅನುಷ್ಠಾನ ಮಾಡಿದೆ. ಪ್ರಮುಖವಾಗಿ ಅನ್ನ ಭಾಗ್ಯ ಯೋಜನೆಯಲ್ಲಿ 5ಕೆಜಿ ಅಕ್ಕಿ ಜತೆಗೆ 170ಹಣವನ್ನ ಕುಟುಂಬದ ಮುಖ್ಯಸ್ಥರ ಖಾತೆಗೆ ಜಮಾ ಮಾಡಿದೆ. ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧೀಜಿಯವರ ಕನಸಿನನಂತೆ ದೇಶದ ಅಭಿವೃದ್ಧಿ ಯಾಗಬೇಕಾದರೆ, ಆ ದೇಶದ ಮಹಿಳೆಯರು ಮತ್ತು ಯುವಕರ ಸಬಲೀಕಾರಣದಿಂದ ಮಾತ್ರ ಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ತಮ್ಮ ಮನೆಯನ್ನು ನಿಭಾಯಿಸಲು ಬಹಳಷ್ಟು ಉಪಯುಕ್ತವಾಗಿದ್ದು, ಈ ಯೋಜನೆಯ ಹಣವನ್ನು ಉಳಿತಾಯ ಮಾಡಿಕೊಂಡು ಸ್ವಯಂ ಉದ್ಯೋಗ ಮಾಡುವ ಕೊಪ್ಪಳ ಜಿಲ್ಲೆಯ ಮಹಿಳೆಯರ ಆಸಕ್ತಿಯು ತುಂಬಾ ಹೆಮ್ಮೆಯಾಗಿದೆ. ನಮ್ಮ ರಾಜ್ಯದಲ್ಲಿ ಶೇ.12 ರಷ್ಟು ಸ್ವಯಂ ಉದ್ಯೋಗ ಹೆಚ್ಚಾಗಿದ್ದು, ಕೆಲವರು ಬಟ್ಟೆ ಅಂಗಡಿ, ಜೆರಾಕ್ಸ್ ಸೆಂಟರ್, ಹೀಗೆ ಹಲವಾರು ಸ್ವಯಂ ಉದ್ಯೋಗವನ್ನ ಮಾಡುತ್ತಿದ್ದಾರೆ. ಇದರಿಂದ ಜನರಿಗೂ ಅನುಕೂಲವಾಗುತ್ತಿದೆ. ಇದರ ಜೊತೆಗೆ ಯಾರಿಗೆ ಯೋಜನೆಯ ಉಪಯೋಗ ದೊರೆಯುತ್ತಿಲ್ಲ, ಅವರಿಗೂ ಈ ಯೋಜನೆಗಳ ಅನುಕೂಲವಾಗುವಂತೆ ಮಾಡಬೇಕು ಎಂದು ಹೇಳಿದರು.

ಹಂಚಿನಾಳ ಗ್ರಾಮದ ಮುದುಕಮ್ಮ ಮೌಲಪ್ಪ ಮಾದರ್ ಎಂಬ ಮಹಿಳೆಯು ಗೃಹಲಕ್ಷ್ಮಿ ಹಣದಿಂದ ಒಂದು ಹಸು ಪಡೆದು, ಹಾಲನ್ನು ಮಾರಿ, ಪ್ರತಿ ತಿಂಗಳಿಗೆ 9 ಸಾವಿರ ದುಡಿಯುತ್ತಿದ್ದಾರೆ. ಇದರ ಜೊತೆಗೆ ಗೃಹಲಕ್ಷ್ಮಿಯ 2 ಸಾವಿರ ಸೇರಿ ಒಂದು ತಿಂಗಳಿಗೆ 10 ರಿಂದ 12 ಸಾವಿರ ಹಣ ಸಂಪಾದಿಸುತಿದ್ದಾರೆ. ಹಾಗೆ ಗಂಗಮ್ಮ ದೊಡ್ಡಯ್ಯ ಹಿರೇಮಠ್ ರವರು, ಗೃಹಲಕ್ಷ್ಮಿ ಹಣದಿಂದ ಹೊಸದಾಗಿ ಬಟ್ಟೆ ಅಂಗಡಿಯನ್ನ ತೆಗೆದು ಸ್ವಯಂ ಉದ್ಯೋಗವನ್ನು ಪ್ರಾರಂಭ ಮಾಡಿರುವುದು ತುಂಬಾ ಸಂತೋಷವಾಗಿದೆ. ಶಕ್ತಿ ಯೋಜನೆಯನ್ನ ಉಪಯೋಗಿಸಿಕೊಂಡು ಮಹಿಳೆಯರು, ವಿವಿಧ ದೇವಸ್ಥಾನಗಳ ವೀಕ್ಷಣೆಗೆ ತೆರಳುತ್ತಿದ್ದಾರೆ. ಇದರಿಂದ ಸಣ್ಣ ಸಣ್ಣ ವ್ಯಾಪಾರವು ಆಗುತ್ತದೆ. ಚಿಕ್ಕ ವ್ಯಾಪಾರದಿಂದ ಹೆಚ್ಚಿನ ಜಿಎಸ್ಟಿ ಸಂಗ್ರಹಣೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಯಾವಾಗ ಮಹಿಳೆಯರು ಸ್ವಯಂ ಅಭಿವೃದ್ಧಿಯಾಗುತಾರೆ, ಅವಾಗ ಹಳ್ಳಿ, ರಾಜ್ಯ, ದೇಶದ ಅಭಿವೃದ್ಧಿಯಾಗುತ್ತದೆ. ವಿಷೇಶವಾಗಿ ಯುವಕರು, ಮಹಿಳೆಯರು ಯಾವಾಗ ಸ್ವಯಂ ಉದ್ಯೋಗವಂತರಗುತ್ತಾರೆ, ಅವಾಗ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಅವರು ಮಾತನಾಡಿ, ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿರುವ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನವಾಗಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪುತ್ತಿವೆಯೇ, ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಈ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಹಣದಿಂದ ಹಸು ತಂದು ಹೈನುಗಾರಿಕೆ ಪ್ರಾರಂಭಿಸಿರುವುದು, ಬಟ್ಟೆ ಅಂಗಡಿ ತೆರೆದಿದ್ದು ಹಾಗೂ ಮಕ್ಕಳ ಶಿಕ್ಷಣಕ್ಕೆ‌ ಬಳಕೆ ಮಾಡಿರುವುದು ಮತ್ತು ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮೂಲಕ ವಿವಿಧ ದೇವಸ್ಥಾನಗಳು ಹಾಗೂ ಪ್ರವಾಸಿ ತಾಣಗಳನ್ನು ನೋಡೊರುವ ಬಗ್ಗೆ ಮಹಿಳಾ ಫಲಾನುಭವಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಗೃಹಲಕ್ಷ್ಮಿ ಹಣದಿಂದ ಫಲಾನುಭವಿ ಆರಂಭಿಸಿರುವ ಬಟ್ಟೆ ಅಂಗಡಿಗೆ ಭೇಟಿ: ಹಂಚಿನಾಳ ಗ್ರಾಮದ ಗಂಗಮ್ಮ ದೊಡ್ಡಯ್ಯ ಹಿರೇಮಠ ಎಂಬುವವರು ಗೃಹಲಕ್ಷ್ಮಿ ಯೋಜನೆಯ ಹಣದಿಂದ ತಮ್ಮ ಮನೆಯಲ್ಲೇ ಆರಂಭಿಸಿರುವ ಬಟ್ಟೆ ಅಂಗಡಿಗೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಭೇಟಿ ನೀಡಿ, ಅಂಗಡಿಯನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ಬಳಿಕ ಬಟ್ಟೆ ಖರೀದಿಸಿ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ನಾಗರಜ ಅರಳಿ ಹಾಗೂ ಅಮರೇಶ ಗಾಂಜಿ, ಕುಷ್ಟಗಿ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಫಾರೂಖ್ ದಲಾಯತ್, ಜಿಲ್ಲಾ ಸಮಿತಿ ಸದಸ್ಯರಾದ ಶಾರದಾ ಕಟ್ಟಿಮನಿ, ಕುಷ್ಟಗಿ ತಾ.ಪಂ ಇಓ ಪಂಪಾಪತಿ ಹಿರೇಮಠ ಸೇರಿದಂತೆ ತಾಲ್ಲೂಕು ಸಮಿತಿ ಸದಸ್ಯರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಫಲಾನುಭವಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

BIG NEWS : `ಗೃಹಲಕ್ಷ್ಮಿ' ಹಣದಿಂದ ಬಟ್ಟೆ ಅಂಗಡಿ ತೆರೆದ ಮಹಿಳೆ.! BIG NEWS: Woman opens clothes shop with 'Grihalakshmi' money
Share. Facebook Twitter LinkedIn WhatsApp Email

Related Posts

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM1 Min Read

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM1 Min Read

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM2 Mins Read
Recent News

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM
State News
KARNATAKA

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

By kannadanewsnow0916/05/2025 9:55 PM KARNATAKA 1 Min Read

ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು…

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM

BREAKING : ಡಿಕೆ ಶಿವಕುಮಾರ್ ‘CM’ ವಿಜಯೇಂದ್ರ ‘DCM’ ಎಂದು ದೆಹಲಿಯಲ್ಲಿ ಒಪ್ಪಂದವಾಗಿತ್ತು : ಯತ್ನಾಳ್ ಹೊಸ ಬಾಂಬ್!

16/05/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.