ಬೆಂಗಳೂರು: ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆ ಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲುಗಳಿಗೆ ಫೆ 11 ರಿಂದ 16, 2025 ರವರೆಗೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ಅವಕಾಶ ಕಲ್ಪಿಸಿಲಾಗಿದೆ.
ಅಕ್ಕಿಹೆಬ್ಬಾಳುವಿನಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ರೈಲುಗಳು ಒಂದು ನಿಮಿಷ ನಿಲುಗಡೆ ಹೊಂದಿರುತ್ತದೆ:
1. ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿಗೆ ಬೆಳಗ್ಗೆ 06:55 ಕ್ಕೆ ಆಗಮಿಸಿ, 06:56 ಕ್ಕೆ ನಿರ್ಗಮಿಸಲಿದೆ.
2. ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲು *ಅಕ್ಕಿಹೆಬ್ಬಾಳುವಿಗೆ ರಾತ್ರಿ 08:46ಕ್ಕೆ ಆಗಮಿಸಿ, 08:47 ಕ್ಕೆ* ಹೊರಡಲಿದೆ.
ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು.