Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM

TCS Q1 Results : ನಿವ್ವಳ ಲಾಭ ವರ್ಷದಿಂದ ವರ್ಷಕ್ಕೆ 6%, QoQ 4.4% ಏರಿಕೆ ; 11 ರೂಪಾಯಿ ಲಾಭಾಂಶ ಘೋಷಣೆ

10/07/2025 4:22 PM

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ

10/07/2025 4:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೊಸನಗರ ಮೂಲದ ತರಬೇತುದಾರ ವಾಯುಪಡೆ ಸೇನಾನಿ ನಿಧನ!
KARNATAKA

BIG NEWS : ಹೊಸನಗರ ಮೂಲದ ತರಬೇತುದಾರ ವಾಯುಪಡೆ ಸೇನಾನಿ ನಿಧನ!

By kannadanewsnow0508/02/2025 5:34 PM

ಶಿವಮೊಗ್ಗ : ಫೆಬ್ರವರಿ 08 : ಕರ್ನಾಟಕ ವಾರ್ತೆ ; ತರಬೇತಿ ನೀಡುವ ವೇಳೆ ತಮ್ಮದೇ ಪ್ಯಾರಾಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ಜಿಲ್ಲೆಯ ಹೊಸನಗರ ಮೂಲದ ಮಂಜುನಾಥ್(36) ಭಾರತೀಯ ವಾಯುಸೇವೆಯ ತರಬೇತುದಾರ ನೆಲೆಕ್ಕೆ ಅಪ್ಪಳಿಸಿ ಸ್ಥಳದಲ್ಲೆ ಸಾವಿಗೀಡಾಗಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರ ವಾಯುಸೇನ ಪಿಟಿಎಸ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮೃತರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಸಮೀಪದ ಗೋರನಗದ್ದೆ ವಾಸಿ ಜಿ.ಎಸ್ ಮಂಜುನಾಥ್ (36) ಬಿನ್ ಜಿ.ಎಂ. ಸುರೇಶ್ ಎಂದು ತಿಳಿದುಬಂದಿದೆ.ಮೃತರು, 2023ರಲ್ಲಿ ಭಾರತೀಯ ವಾಯುಸೇನೆಗೆ ಜ್ಯೂನಿಯರ್ ವಾರೆಂಟ್ ಅಧಿಕಾರಿಯಾಗಿ ಸೇವೆಗೆ ಸೇರ್ಪಡೆಗೊಂಡಿದ್ದು, ನಂತರ, ಜಮ್ಮು-ಕಾಶ್ಮೀರ್, ಅಸ್ಸಾಂ, ಗಾಜೀಯಬಾದ್, ದೆಹಲಿಯಲ್ಲಿ ಸೇವೆ ಸಲ್ಲಿಸಿದ ಬಳಿಕ ಕಳೆದ ಒಂದುವರೆ ತಿಂಗಳಿನಿಂದ ಉತ್ತರ ಪ್ರದೇಶದ ಆಗ್ರದ ಭಾರತೀಯ ವಾಯುಸೇನೆಯ ಪ್ಯಾರ ಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿಯಾಗಿ ಕರ್ತವ್ಯ ನಿರತರಾಗಿದ್ದರು.

ಮೂಲತಃ ಕೃಷಿ ಕುಟುಂಬಕ್ಕೆ ಸೇರಿದ ಮಂಜುನಾಥ್ ಇವರು 2019ರಲ್ಲಿ ಅಸ್ಸಾಂ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ಸಂತಾನದ ನಿರೀಕ್ಷೆಯಲ್ಲಿದ್ದರು. ಒಟ್ಟಾರೆ 16 ವರ್ಷಗಳ ಕಾಲ ವಾಯುಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮೃತರು, ಇದೇ ಫೆಬ್ರವರಿ 7ರ ಶುಕ್ರವಾರ ಬೆಳಗ್ಗೆ ಸರಿ ಸುಮಾರು 7 ರಿಂದ 8 ಗಂಟೆಯ ವೇಳೆಯಲ್ಲಿ ಆಗ್ರ ವಾಯುಸೇನೆ ಪಿಟಿಎಸ್ ಕೇಂದ್ರದಲ್ಲಿ ಮಂಜುನಾಥ ಅವರನ್ನು ಒಳಗೊಂಡಂತೆ ಸುಮಾರು 12 ಜನರ ತಂಡಕ್ಕೆ ಕಾರ್ಗೋ ಮಾದರಿ ವಿಮಾನದಿಂದ ಸುಮಾರು 18 ಸಾವಿರ ಅಡಿ ಎತ್ತರದಿಂದ ಪ್ಯಾರ ಜೆಂಪ್ ತರಬೇತಿ ನೀಡುವ ಸಮಯದಲ್ಲಿ, ಎಲ್ಲಾ 11 ಮಂದಿ ಶಿಬಿರಾರ್ಥಿಗಳು ಸುರಕ್ಷಿತವಾಗಿ ಜಂಪ್ ಪೂರೈಸಿದ್ದು, ಕೊನೆಯವರಾಗಿ ಮಂಜುನಾಥ್ ಜಿಗಿದಿದ್ದು, ಅವರ ಪ್ಯಾರಚೂಟ್ ಸರಿಯಾದ ಸಮಯಕ್ಕೆ ತೆರೆದುಕೊಳ್ಳದ ಪರಿಣಾಮ ತರಬೇತುದಾರ ಮಂಜುನಾಥ್ ಕೊನೆಯುಸಿರು ಕಂಡಿದ್ದಾರೆ.

ಗ್ರಾಮದಲ್ಲಿ ಮಡುಗಟ್ಚಿದ ಶೋಕ 

ವಿಷಯದ ತಿಳಿಯುತ್ತಿದ್ದಂತೆ ಮೃತರ ಗ್ರಾಮದಲ್ಲಿ ಅತೀವ ಶೋಕ ಮನೆ ಮಾಡಿದ್ದು, ಸಂಬಂಧಿಕರು, ಹಿತೈಷಿಗಳಿಂದ ನೊಂದ ಕುಟುಂಬಕ್ಕೆ ಸಂತಾಪ ಸೂಚನೆ ಕಾರ್ಯ ನಡೆದಿದೆ. ನಾಳೆ 9ರ ಭಾನುವಾರ ಬೆಳಗ್ಗೆ ಸೇನಾನಿಯ ಮೃತದೇಹ ಪಟ್ಟಣ ತಲುಪುವ ನಿರೀಕ್ಷೆಯಿದ್ದು, ತಾಲೂಕು ಆಡಳಿತ ಸಕಲ ಸರ್ಕಾರಿ ಗೌರವ ನೀಡಲು ಸರ್ವ ತಯಾರಿಗೆ ಮುಂದಾಗಿದೆ.ಹೊಸನಗರದ ಕ್ರೀಡಾಂಗಣದಲ್ಲಿ ಶಾಸಕ ಗೋಪಾಲಕೃಷ್ಣ ಸಮ್ಮುಖದಲ್ಲಿ ತಹಶೀಲ್ದಾರ್ ರಶ್ಮಿ ಹೆಚ್. ನೇತೃತ್ವದಲ್ಲಿ ಸರ್ಕಾರಿ ಗೌರವ ನೀಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎಂದು ಮೃತನ ಕುಟುಂಬ ಮೂಲಗಳು ತಿಳಿಸಿವೆ.

ಡಿಸಿ ಸಂತಾಪ

ಮೃತ IAF ಮಂಜುನಾಥ್ ಅವರ ನಿಧನಕ್ಕೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ, ಸಿಇಒ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಸ್ಟಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM1 Min Read

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ

10/07/2025 4:18 PM1 Min Read

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ

10/07/2025 4:11 PM1 Min Read
Recent News

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

10/07/2025 4:25 PM

TCS Q1 Results : ನಿವ್ವಳ ಲಾಭ ವರ್ಷದಿಂದ ವರ್ಷಕ್ಕೆ 6%, QoQ 4.4% ಏರಿಕೆ ; 11 ರೂಪಾಯಿ ಲಾಭಾಂಶ ಘೋಷಣೆ

10/07/2025 4:22 PM

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ

10/07/2025 4:18 PM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ

10/07/2025 4:11 PM
State News
KARNATAKA

SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

By kannadanewsnow0910/07/2025 4:25 PM KARNATAKA 1 Min Read

ಕಲಬುರ್ಗಿ: ವಸತಿ ಶಾಲೆಗೆ ಸೇರಿಸಿದ್ದ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ…

BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ

10/07/2025 4:18 PM

BREAKING : ಹಾಸನದಲ್ಲಿ ಸರಣಿ ‘ಹೃದಯಾಘಾತ’ ಪ್ರಕರಣ : ತನಿಖಾ ತಂಡದಿಂದ ಸರ್ಕಾರಕ್ಕೆ 3 ಮಾದರಿ ವರದಿ ಸಲ್ಲಿಕೆ

10/07/2025 4:11 PM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ, ಅಪ್ಪಚ್ಚಿಯಾದ ಮಹಿಳೆಯ ದೇಹ!

10/07/2025 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.