ದಾವಣಗೆರೆ : ನಾನು ಕಳೆದ ನಾಲ್ಕು ವರ್ಷದಿಂದ ನಾನು ಖಾಲಿ ಇದ್ದೇನೆ ಎಂದು ಮೂರು ಬಾರಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಪರೋಕ್ಷವಾಗಿ ಸರ್ಕಾರದ ವಿರುದ್ಧ ಬೇಸರ ಹೊರಹಾಕಿದರು.
ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ವಾಲ್ಮೀಕಿ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಕಳೆದ ನಾಲ್ಕು ವರ್ಷಗಳಿಂದ ಖಾಲಿ ಇದ್ದೇನೆ ಎಂದು ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಡಿಐಜಿಪಿ ರವಿ ಡಿ.ನಾಲ್ಕು ವರ್ಷಗಳಿಂದ ನಾನು ಖಾಲಿ ಇದ್ದೇನೆ ಎಂದು ಬೇಸರ ಹೊರಹಾಕಿದ್ದಾರೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ರವಿ ಡಿ ಚನ್ನಣ್ಣನವರ್ ಭಾಷಣದಲ್ಲಿ ಈ ಮಾತು ಹೇಳಿದ್ದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಜಾತ್ರೆ ನಡೆಯುತ್ತಿದೆ ಪರೋಕ್ಷವಾಗಿ ಸರ್ಕಾರದ ವಿರುದ್ಧ ರವಿ ಡಿ ಚೆನ್ನಣ್ಣನವರ್ ಬೇಸರ ವ್ಯಕ್ತಪಡಿಸಿದ್ದಾರೆ.
ಬಳಿಕ ಸಂಸದ ವಿ ಸೋಮಣ್ಣ ರವಿ ಡಿ ಚೆನ್ನಣ್ಣವರಿಗೆ ತಮ್ಮ ಭಾಷಣದಲ್ಲಿ ಸಮಾಧಾನ ಪಡಿಸಿದರು. ಬಿಜೆಪಿ ಸರ್ಕಾರದಲ್ಲಿ ರವಿ ಚನ್ನಣ್ಣನವರನ್ನು ಚೆನ್ನಾಗಿ ನಡೆಸಿಕೊಂಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಅವರನ್ನು ಚೆನ್ನಾಗಿ ನಡೆಸಿಕೊಂಡಿದ್ದೇವೆ.ಆದರೆ ಈಗ ತೊಂದರೆ ಆಗಿರಬೇಕು ಅದಕ್ಕೆ ಅವರು ಖಾಲಿ ಇದ್ದೇನೆ ಎಂದು ಹೇಳುತ್ತಿದ್ದಾರೆ..ರವಿ ಚನ್ನಣ್ಣವರ ಒಪ್ಪಿದರೆ ಕೇಂದ್ರ ಸರ್ಕಾರದ ಸೇವೆಗೆ ತೆಗೆದುಕೊಳ್ಳುತ್ತೇವೆ. ತಾಳ್ಮೆ ಇರಲಿ, ಪ್ರತಿಭೆ ಮಾನದಂಡ, ಅವಕಾಶ ಹುಡುಕಿಕೊಂಡು ಬರುತ್ತದೆ ಎಂದು ರವಿ ಡಿ ಚೆನ್ನಣ್ಣನವರ್ ಅವರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಮಾಧಾನಪಡಿಸಿದರು.