Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಾಳೆಯಿಂದ ಬೆಂಗಳೂರು ಏರ್ ಶೋ ಆರಂಭ: ಇಲ್ಲಿದೆ ವಾಹನ ಸವಾರರಿಗೆ ‘ಸಂಚಾರ ಮಾರ್ಗ’ದ ಬಿಗ್ ಅಪ್ ಡೇಟ್ | Bengaluru Traffic Update
KARNATAKA

BIG NEWS: ನಾಳೆಯಿಂದ ಬೆಂಗಳೂರು ಏರ್ ಶೋ ಆರಂಭ: ಇಲ್ಲಿದೆ ವಾಹನ ಸವಾರರಿಗೆ ‘ಸಂಚಾರ ಮಾರ್ಗ’ದ ಬಿಗ್ ಅಪ್ ಡೇಟ್ | Bengaluru Traffic Update

By kannadanewsnow0909/02/2025 8:56 PM

ಬೆಂಗಳೂರು: ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ 2025ರ ಪ್ರದರ್ಶನ ಆರಂಭಗೊಳ್ಳಲಿದೆ. ಬಾನಂಗಳದಲ್ಲಿ ಬಗೆ ಬಗೆಯ ಲೋಹದ ಹಕ್ಕಿಗಳು ತಮ್ಮ ಆಕರ್ಷಕ ಪ್ರದರ್ಶನವನ್ನು ನೀಡಲಿದ್ದಾವೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಾಹನ ಸವಾರರಿಗೆ ಸಂಚಾರ ಪೊಲೀಸರು ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಯಲಹಂಕ ವಾಯುಸೇನಾ ನೆಲೆಯಲ್ಲಿ ದಿನಾಂಕ: 10-02-2025 ರಿಂದ ದಿನಾಂಕ:14-02-2025 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ- 2025 ವೈಮಾನಿಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ.

ದಿನಾಂಕ:10-02-2025 ರ ಬೆಳಿಗ್ಗೆ ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತರಾಷ್ಟ್ರೀಯ ಏರ್‌ಮೊರ್ಟ್ ರಸ್ತೆ) ಗೆ ಹೊಂದಿಕೊಂಡಿದ್ದು, ಸದರಿ ರಸ್ತೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನಗಳು, ತುರ್ತು ಸೇವಾ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತವೆ. ಸುಗಮ ಸಂಚಾರದ ದೃಷ್ಠಿಯಿಂದ ದಿನಾಂಕ:10-02-2025 ರಂದು ಬೆಳಗಿನ ಜಾವ 05-00 ಗಂಟೆಯಿಂದ ದಿನಾಂಕ:14-02-2025ರವರೆಗೆ  ರಾತ್ರಿ 10-00 ರವರೆಗೆ ಈ ಕೆಳಕಂಡ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ ಎಂದಿದೆ.

1. ಏಕಮುಖ ಸಂಚಾರ ವ್ಯವಸ್ಥೆ:

* ನಿಟ್ಟೆ ಮೀನಾಕ್ಷಿ ಕಾಲೇಜ್ ರಸ್ತೆ (ಪೂರ್ವದಿಕ್ಕಿನಿಂದ ಪಶ್ಚಿಮ ದಿಕ್ಕಿನ ಕಡೆಗೆ)
* ಬಾಗಲೂರು ಮುಖ್ಯರಸ್ತೆ : (ಪಶ್ಚಿಮದಿಂದ ಪೂರ್ವದಿಕ್ಕಿನ ಕಡೆಗೆ)

2. ಏರೋ ಇಂಡಿಯಾ ಪಾರ್ಕಿಂಗ್:

ಉಚಿತ ಪಾರ್ಕಿಂಗ್ ಜಿ.ಕೆ.ವಿ.ಕೆ. ಕ್ಯಾಂಪಸ್ : ಜಿಕೆವಿಕೆ ಪಾರ್ಕಿಂಗ್ ಸ್ಥಳದಿಂದ ಅಡ್ವಾ ಪಾರ್ಕಿಂಗ್‌ (Air Display View Area) ಹಾಗೂ ಡೊಮೆಸ್ಟಿಕ್‌ ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಹಾಗೂ ವಾಪಸ್ ಜಿಕೆವಿಕೆ ಪಾರ್ಕಿಂಗ್ ಸ್ಥಳಕ್ಕೆ ಬರಲು ಬಿಎಂಟಿಸಿ ವತಿಯಿಂದ ಉಚಿತ ಎ.ಸಿ. ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ.
ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ.

ಆ) ಪಾವತಿ ಪಾರ್ಕಿಂಗ್:
ಅಡ್ವಾ ಪಾರ್ಕಿಂಗ್(Air Display View Area) : ಗೇಟ್ ನಂ. 08 & 09 ರ ಮುಖಾಂತರ ಪ್ರವೇಶ
ಡೊಮೆಸ್ಟಿಕ್ ಪಾರ್ಕಿಂಗ್ (Domnestic Paking) : ಗೇಟ್ ನಂ. 05ರ ಮುಖಾಂತರ ಪ್ರವೇಶ

* ಸೂಚಿಸಲಾದ ಮಾರ್ಗಗಳು :

* ಬೆಂಗಳೂರು ಪೂರ್ವ ದಿಕ್ಕಿನಿಂದ ಅಡ್ವಾ (Air Display View Area) ಪಾರ್ಕಿಂಗ್ ಕಡೆ ಬರುವವರಿಗೆ

ಕೆ ಆರ್ ಪುರ – ನಾಗವಾರ ಜಂಕ್ಷನ್ – ಬಲತಿರುವು – ಥಣೀಸಂದ್ರ – ನಾರಾಯಣಪುರ ಕ್ರಾಸ್ – ಎಡ ತಿರುವು – ಟೆಲಿಕಾಂ ಲೇಔಟ್ – ಜಕ್ಕೂರು ಕ್ರಾಸ್ – ಬಲ ತಿರುವು – ಯಲಹಂಕ ಬೈಪಾಸ್ – ಯಲಹಂಕ ಕಾಫಿ ಡೇ – ಪಾಲನಹಳ್ಳಿ ಗೇಟ್ – ಸರ್ವೀಸ್ ರಸ್ತೆ ( ಗ್ರೀಲ್ ಓಪನ್ ) ಪೋರ್ಡ್ ಷೋ ರೂಂ – ಎಡ ತಿರುವು – ನಿಟ್ಟೇ ಮೀನಾಕ್ಷಿ ಕಾಲೇಜ್ ರಸ್ತೆ – ADV Parking

* ಬೆಂಗಳೂರು ಪೂರ್ವ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆ ಬರುವವರಿಗೆ:
ಕೆ.ಆರ್. ಪುರಂ – ಹೆಣ್ಣೂರು ಕ್ರಾಸ್ – ಬಾಗಲೂರು – ಹುಣಸಮಾರನಹಳ್ಳಿ – ಕೊತ್ತನೂರು ಗುಬ್ಬಿ ಕ್ರಾಸ್ – ಕಣ್ಣೂರು ವಿದ್ಯಾನಗರ ಕ್ರಾಸ್ – ಬಾಗಲೂರು ಲೇಔಟ್ – ರಜಾಕ್ ಪಾಳ್ಯ – Domestic Parking

* ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಅಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ
ಗೊರಗುಂಟೆಪಾಳ್ಯ ಉನ್ನಿಕೃಷ್ಣನ್ ರಸ್ತೆ – ದೊಡ್ಡಬಳ್ಳಾಪುರ ರಸ್ತೆ – ಬಿ.ಇ.ಎಲ್ ವೃತ್ತ ಮದರ್‌ ಡೈರಿ ಜಂಕ್ಷನ್ – ಗಂಗಮ್ಮ ವೃತ್ತ ಎಂ.ಎಸ್ ಪಾಳ್ಯ ಸರ್ಕಲ್- ಉನ್ನಿ ಕೃಷ್ಣನ್ ಜಂಕ್ಷನ್ ಎಡ ತಿರುವು – ನಾಗೇನಹಳ್ಳಿ ಗೇಟ್ – ಗಂಟಿಗಾನಹಳ್ಳಿ ಸರ್ಕಲ್ ಬಲ ತಿರುವು – ಹಾರೋಹಳ್ಳಿ – ಗಂಟಿಗಾನಹಳ್ಳಿ ಸರ್ಕಲ್ ಮೂಲಕ- ADVA Parking

* ಬೆಂಗಳೂರು ಪಶ್ಚಿಮ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ

ಮೈಸೂರು ರಸ್ತೆ, ನಾಯಂಡನಹಳ್ಳಿ, ಚಂದ್ರಾ ಲೇಔಟ್, ಗೋರಗುಂಟೆಪಾಳ್ಯ, ಬಿಇಎಲ್ ವೃತ್ತ, ಗಂಗಮ್ಮ ವೃತ್ತ, ಎಂ ಎಸ್ ಪಾಳ್ಯ ಸರ್ಕಲ್, ಮದರ್ ಡೈರಿ, ಉನ್ನಿ ಕೃಷ್ಣನ್ ಜಂಕ್ಷನ್, ಎಡ ತಿರುವು, ದೊಡ್ಡಬಳ್ಳಾಪುರ ರಸ್ತೆ, ರಾಜಾನುಕುಂಟೆ, ಬಲತಿರುವು, ಅದ್ದಿಗಾನಹಳ್ಳಿ, ಎಂವಿಐಟಿ ಕ್ರಾಸ್, ವಿದ್ಯಾನಗರ ಕ್ರಾಸ್, ಯು ತಿರುವು ಪಡೆದು, ಹುಣಸಮಾರನಹಳ್ಳಿ ಮೂಲಕ Domestic Parking.

* ಬೆಂಗಳೂರು ದಕ್ಷಿಣ ದಿಕ್ಕಿನಿಂದ ಅಡ್ವಾ ಪಾರ್ಕಿಂಗ್ ಕಡೆಗೆ ಬರುವವರಿಗೆ

ಮೈಸೂರು ರಸ್ತೆ-ನಾಯಂಡನಹಳ್ಳಿ-ಚಂದ್ರಾ ಲೇಔಟ್-ಗೊರಗುಂಟೆಪಾಳ್ಯ-ಬಿ.ಇ.ಎಲ್ ವೃತ್ತ- ಗಂಗಮ್ಮ ವೃತ್ತ -ಎಂ.ಎಸ್‌ ಪಾಳ್ಯ ಸರ್ಕಲ್-ಮದರ್ ಡೈರಿ ಜಂಕ್ಷನ್ ಉನ್ನಿ ಕೃಷ್ಣನ್ ಜಂಕ್ಷನ್ ದೊಡ್ಡಬಳ್ಳಾಪುರ ಮುಖ್ಯ ರಸ್ತೆ -ನಾಗೇನಹಳ್ಳಿ ಗೇಟ್ -ಬಲ ತಿರುವು -ಹಾರೋಹಳ್ಳಿ ಗಂಟಿಗಾನಹಳ್ಳಿ ಸರ್ಕಲ್ ಮೂಲಕ- ADVA Parking,
ಎಡ

* ಬೆಂಗಳೂರು ದಕ್ಷಿಣ ದಿಕ್ಕಿನಿಂದ ಡೊಮೆಸ್ಟಿಕ್ ಪಾರ್ಕಿಂಗ್ ಕಡೆಗೆ ಬರುವವರಿಗೆ :

ಮೈಸೂರು ರಸ್ತೆ-ನಾಯಂಡನಹಳ್ಳಿ ಚಂದ್ರಾ ಲೇಔಟ್- ಗೊರಗುಂಟೆಪಾಳ್ಯ -ಬಿ.ಇ.ಎಲ್ ವೃತ್ತ- ಗಂಗಮ್ಮ ವೃತ್ತ -ಎಂ.ಎಸ್ ಪಾಳ್ಯ ಸರ್ಕಲ್- ಮದರ್ ಡೈರಿ-ಉನ್ನಿ ಕೃಷ್ಣನ್ ಜಂಕ್ಷನ್ ತಿರುವು-ದೊಡ್ಡಬಳ್ಳಾಪುರ ರಸ್ತೆ- ರಾಜಾನುಕುಂಟೆ- ಬಲ ತಿರುವು- ಅದ್ದಿಗಾನಹಳ್ಳಿ ಎಂ.ವಿ.ಐ.ಟಿ ಕ್ರಾಸ್ – ವಿದ್ಯಾನಗರ ಕ್ರಾಸ್-ಯು ತಿರುವು ಪಡೆದು ಹುಣಸಮಾರನಹಳ್ಳಿ ಮೂಲಕ Domestic ಪಾರ್ಕಿಂಗ್.

3. ಕೆಂಪೇಗೌಡ ಅಂತರಾಷ್ಟ್ರೀಯ.ವಿಮಾನ ನಿಲ್ದಾಣ (KIAL) ಕಡೆಗೆ ತಲುಪಲು ಪರ್ಯಾಯ ಮಾರ್ಗ :

* ಬೆಂಗಳೂರು ಪೂರ್ವ ದಿಕ್ಕಿನಿಂದ :
ಕೆ.ಆರ್.ಪುರಂ-ಹೆಣ್ಣೂರು ಕ್ರಾಸ್ -ಕೊತ್ತನೂರು – ಗುಬ್ಬಿ ಕ್ರಾಸ್ – ಕಣ್ಣೂರು ಬಾಗಲೂರು ಮೈಲನಹಳ್ಳಿ – ಬೇಗೂರು -ನೈರುತ್ಯ ಪ್ರವೇಶದ್ವಾರದ ಮೂಲಕ- KIAL ತಲುಪಬಹುದು.

* ಬೆಂಗಳೂರು ಪಶ್ಚಿಮ ದಿಕ್ಕಿನಿಂದ :

ಗೊರಗುಂಟೆಪಾಳ್ಯ ಮದರ್‌ ಡೈರಿ – ಬಿ.ಇ.ಎಲ್ ವೃತ್ತ – ಗಂಗಮ್ಮ ವೃತ್ತ
ಎಂ.ಎಸ್ ಪಾಳ್ಯ ಸರ್ಕಲ್ – ಉನ್ನಿ ಕೃಷ್ಣನ್ ಜಂಕ್ಷನ್- ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ – ರಾಜಾನುಕುಂಟೆ – ಅದ್ದಿಗಾನಹಳ್ಳಿ – ತಿಮ್ಮಸಂದ್ರ – ಎಂ.ವಿ.ಐ.ಟಿ ಕ್ರಾಸ್ – ವಿದ್ಯಾನಗರ ಕ್ರಾಸ್ ಮೂಲಕ – KIAL ತಲುಪುವುದು.

* ಬೆಂಗಳೂರು ದಕ್ಷಿಣ ದಿಕ್ಕಿನಿಂದ :
ಮೈಸೂರು ರಸ್ತೆ- ನಾಯಂಡನಹಳ್ಳಿ- ಚಂದ್ರಾ ಲೇಔಟ್ ಗೊರಗುಂಟೆಪಾಳ್ಯ-ಬಿಇಎಲ್ ವೃತ್ತ – ಗಂಗಮ್ಮ ವೃತ್ತ -ಎಂ.ಎಸ್ ಪಾಳ್ಯ ಸರ್ಕಲ್ – ಮದರ್‌ಡೈರಿ ಜಂಕ್ಷನ್ – ಉನ್ನಿಕೃಷ್ಣನ್ ಜಂಕ್ಷನ್ ಎಡ ತಿರುವು ದೊಡ್ಡಬಳ್ಳಾಪುರ ರಸ್ತೆ ರಾಜಾನುಕುಂಟೆ – ಅದ್ದಿಗಾನಹಳ್ಳಿ-ಎಂ.ವಿ.ಐ.ಟಿ ಕ್ರಾಸ್
– ವಿದ್ಯಾನಗರ ಕ್ರಾಸ್ ಮೂಲಕ KIAL ತಲುಪಬಹುದು.

4. ಲಾರಿ, ಟ್ರಕ್, ಖಾಸಗಿ ಬಸ್ಸುಗಳು ಹಾಗೂ ಇತರೇ ಭಾರೀ ಸರಕು ಸಾಗಾಣಿಕೆಯ ವಾಹನಗಳ ಸಂಚಾರ ನಿರ್ಬಂಧಿಸಿರುವ ರಸ್ತೆಗಳ ವಿವರ:

• ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ, ಮೇ ವೃತ್ತದಿಂದ-ಎಂವಿಐಟಿ ಕ್ರಾಸ್ ವರೆಗೆ ಮತ್ತು ಎಂ.ವಿ.ಐ.ಟಿ. ಕ್ರಾಸ್ ನಿಂದ ಮೇ ವೃತ್ತದ ವರೆಗೆ, ರಸ್ತೆಯ ಎರಡೂ ದಿಕ್ಕಿನಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಗೊರಗುಂಟೆ ಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್ ವರೆಗೆ ರಸ್ತೆಯ ಎರಡು ದಿಕ್ಕಿನಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.
ನಾಗವಾರ ಜಂಕ್ಷನ್‌ನಿಂದ — ಥಣಿಸಂದ್ರ ಮುಖ್ಯ ರಸ್ತೆಯ ಮಾರ್ಗವಾಗಿ ಬಾಗಲೂರು ಮುಖ್ಯ ರಸ್ತೆ. ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರವನ್ನು ನಿಷೇಧಿಸಲಾಗಿದೆ. ಹೆಸರಘಟ್ಟ ಮತ್ತು ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ನಗರದ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

5. ವಾಹನ ನಿಲುಗಡೆ ನಿಷೇಧ ( ಎಲ್ಲಾ ಮಾದರಿಯ ವಾಹನಗಳಿಗೆ ರಸ್ತೆಯ ಎರಡೂ ಬದಿಗಳಲ್ಲಿ)
–
ನಾಗೇನಹಳ್ಳಿ ಗೇಟ್‌ನಿಂದ ಗಂಟಿಗಾನಹಳ್ಳಿ ಮಾರ್ಗವಾಗಿ ಬೆಂಗಳೂರು-ಬಳ್ಳಾರಿ ರಸ್ತೆಯನ್ನು ಸೇರುವ ಫೋರ್ಡ್ ಷೋರೂಂ ಕ್ರಾಸ್‌ವರೆಗೆ (ಬಿಬಿ ರಸ್ತೆ) ವರೆಗೆ
ಬೆಂಗಳೂರು-ಬಳ್ಳಾರಿ ರಸ್ತೆಯ ಮೇಕ್ರಿ ಸರ್ಕಲ್ ನಿಂದ-ದೇವನಹಳ್ಳಿ ವರೆಗೆ.
ಬಾಗಲೂರು ಕ್ರಾಸ್‌ ಜಂಕ್ಷನ್ ನಿಂದ ಬಾಗಲೂರು ಮುಖ್ಯ ರಸ್ತೆಯ ಮಾರ್ಗವಾಗಿ ಸಾತನೂರು ವರೆಗೆ.
ನಾಗವಾರ ಜಂಕ್ಷನ್‌ನಿಂದ ಥಣಿಸಂದ್ರ ಮುಖ್ಯ ರಸ್ತೆಯ ಮಾರ್ಗವಾಗಿ ರೇವಾ ಕಾಲೇಜ್ ಜಂಕ್ಷನ್ ವರೆಗೆ.
ಎಫ್‌ಟಿಐ ಜಂಕ್ಷನ್‌ನಿಂದ ಹೆಣ್ಣೂರು ಕ್ರಾಸ್ ಜಂಕ್ಷನ್ ವರೆಗೆ.
ಹೆಣ್ಣೂರು ಕ್ರಾಸ್ ನಿಂದ ಬೇಗೂರು ಬ್ಯಾಕ್ ಗೇಟ್ ವರೆಗೆ
ನಾಗೇನಹಳ್ಳಿ ಗೇಟ್ ಜಂಕ್ಷನ್ ನಿಂದ ಯಲಹಂಕ ಸರ್ಕಲ್ ವರೆಗೆ.

ಸೂಚನೆ:
·ಎಂವಿಐಟಿ ಕ್ರಾಸ್ ನಿಂದ ನಾರಾಯಣಪುರ ರೈಲ್ವೆ ಕ್ರಾಸ್ ವರೆಗೆ.
ಕೋಗಿಲು ಕ್ರಾಸ್ ಜಂಕ್ಷನ್ ನಿಂದ ಕಣ್ಣೂರು ಜಂಕ್ಷನ್ ವರೆಗೆ.
ಮತ್ತಿಕೆರೆ ಕ್ರಾಸ್ ನಿಂದ ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಉನ್ನಿಕೃಷ್ಣನ್ ಜಂಕ್ಷನ್ ವರೆಗೆ. ಜಾಲಹಳ್ಳಿ ಕ್ರಾಸ್ ಜಂಕ್ಷನ್ ನಿಂದ ಗಂಗಮ್ಮ ಸರ್ಕಲ್ ಜಂಕ್ಷನ್ ವರೆಗೆ.
ವೀಕ್ಷಣೆಗೆ ಬರುವವರು ತಮಗೆ ನೀಡಲಾಗಿರುವ ಟಿಕೆಟ್/ಪಾಸ್‌ನ QR ಕೋಡನ್ನು ಮೊದಲೇ ಸ್ಕ್ಯಾನ್ ಮಾಡಿ ಯಾವ ಗೇಟ್‌ನಿಂದ ಪ್ರವೇಶಿಸಬೇಕೆಂಬುದನ್ನು ಮೊದಲೇ ನಿರ್ಧರಿಸಿಕೊಂಡು ಪ್ರಯಾಣಿಸಿದ್ದಲ್ಲಿ ಅನವಶ್ಯಕ ವಿಳಂಬಕ್ಕೆ ಅವಕಾಶವಿರುವುದಿಲ್ಲ.

ವೀಕ್ಷಣೆಗೆ ಬರುವವರು ಉಚಿತ ವಾಹನ ನಿಲುಗಡೆ ಲಭ್ಯವಿರುವ ಜಿ.ಕೆ.ವಿ.ಕೆ. ಆವರಣವನ್ನು ಮತ್ತು ಶಟಲ್ ಬಸ್ ಸೇವೆಯನ್ನು ಉಪಯೋಗಿಸಲು ಕೋರಿದೆ.
ಸಾರ್ವಜನಿಕರು ಸಹಕರಿಸಲು ಕೋರಿದೆ.

ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ: MLC ಎನ್.ರವಿಕುಮಾರ್

ಕೇಂದ್ರದ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವ ರಾಜ್ಯ ಸರಕಾರಕ್ಕೆ ಈ ಕಿವಿಮಾತು ಹೇಳಿದ HDK

Share. Facebook Twitter LinkedIn WhatsApp Email

Related Posts

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM1 Min Read

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM1 Min Read

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM1 Min Read
Recent News

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM
State News
KARNATAKA

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

By kannadanewsnow0910/07/2025 9:15 PM KARNATAKA 1 Min Read

ಧಾರವಾಡ: ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಧಾರವಾಡ ಇವರ…

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವೀಡಿಯೋ ಚಿತ್ರೀಕರಿಸಿದ್ರೇ ಹೀಗೆ ಮಾಡಿ

10/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.