ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿನ ಆಂತರೀಕ ಬೇಗುದಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಬಿಜೆಪಿ ಆಂತರೀಕ ಬೇಗುದಿಗೆ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ, ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ ಸುಸಂಘಟಿತ ಪ್ರಚಾರ ಯಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಒದಗಿಸುತ್ತಿದೆ ಎಂದಿದ್ದಾರೆ.
ಕರ್ನಾಟಕ BJP ಎದುರಿಸುತ್ತಿರುವ ಸವಾಲುಗಳು
ಇದಕ್ಕೆ ವಿರುದ್ಧವಾಗಿ, ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ ಮತ್ತು ಸಂಘಟನಾ ದೌರ್ಬಲ್ಯದಿಂದ ಬಳಲುತ್ತಿದೆ. ಪಕ್ಷದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯಗಳು ಮತ್ತು ರಾಜಕಾರಣದಿಂದ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ. ದೆಹಲಿಯಲ್ಲಿ ಪಕ್ಷ ಏಕತೆ ಮತ್ತು ಶಿಸ್ತಿನ ಕಾರ್ಯಪದ್ಧತಿಯನ್ನು ಅನುಸರಿಸಿದರೆ, ಕರ್ನಾಟಕದಲ್ಲಿ ಕೆಲವು ನಾಯಕರು ತಮ್ಮ ರಾಜಕೀಯ ಲಾಭಕ್ಕಾಗಿ ಒರಕಲುಟಿದಿರುವುದು ಗಂಭೀರ ಸಮಸ್ಯೆಯಾಗುತ್ತಿದೆ, ಇದರಿಂದ ಕಾರ್ಯಕರ್ತರು ಮತ್ತು ಮತದಾರರಲ್ಲಿ ಒಂದು ರೀತಿಯ ಅಸ್ಥಿರತೆ ಉಂಟಾಗಿದೆ. ಈ ಸನ್ನಿವೇಶವನ್ನು ಸರಿಪಡಿಸದೇ ಹೋದರೆ, ಮುಂಬರುವ ಚುನಾವಣೆಯಲ್ಲಿ ಕಠಿಣ ಸವಾಲುಗಳನ್ನು,
ಎದುರಿಸಬೇಕಾಗಬಹುದು ಎಂಬುದಾಗಿ ತಿಳಿಸಿದ್ದಾರೆ.
ಪಕ್ಷದ ಶಕ್ತಿ ಪುನರ್ ನಿರ್ಮಿಸಲು ತಕ್ಷಣದ ಕ್ರಮ ಅಗತ್ಯ
ಪಕ್ಷದ ಯಶಸ್ಸು ಯಾವುದೇ ಒಬ್ಬ ವ್ಯಕ್ತಿಯ ಸಾಧನೆ ಅಲ್ಲ; ಇದು ಶುದ್ಧೆ, ಶ್ರಮ, ಮತ್ತು ಸಮೂಹ ಶಕ್ತಿಯ ಪ್ರತೀಕ, ರಾಜ್ಯದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳಬೇಕಾದರೆ, ಎಲ್ಲಾ ನಾಯಕರೂ ಒಗ್ಗೂಡಬೇಕು, ಸಂಘಟನೆಯ ಶಕ್ತಿಯನ್ನು ನರ್ ನಿರ್ಮಿಸಬೇಕು, ಮತ್ತು ಗಟ್ಟಿ ತಂತ್ರವನ್ನು ಅನುಸರಿಸಬೇಕು, ಪಕ್ಷದ ಹಿತಾಸಕ್ತಿಯನ್ನು ಮೊದಲಿಗಿಟ್ಟು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸಹಕಾರ ಮತ್ತು ಏಕತೆ ಯೋಗವನ್ನು ತರುವ ಹಂತ ಕಡ್ಡಾಯವಾಗಿದೆ ಎಂದಿದ್ದಾರೆ.
ದೆಹಲಿಯ ಗೆಲುವು ನಮಗೆ ಪಾಠವಾಗಬೇಕು ಹಾಗು ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು. ಕರ್ನಾಟಕದ ಜನತೆ BJPಗೆ ಬೆಂಬಲ ನೀಡಲು ಸಿದ್ಧರಿದ್ದಾರೆ, ಆದರೆ ಅವರ ವಿಶ್ವಾಸವನ್ನು ಸಂಪಾದಿಸಲು ಪಕ್ಷದ ಒಳಾಂಗಣವನ್ನು ಶುದ್ಧಗೊಳಿಸಿ, ಬಲಿಗೊಳಿಸಬೇಕಾಗಿದೆ ಎಂಬುದಾಗಿ ಹೇಳಿದ್ದಾರೆ.
BREAKING: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ‘ಗಳಿಕೆ ರಜೆ’ ಕುರಿತಂತೆ ಮಹತ್ವದ ಆದೇಶ
Shocking News: ಆಸ್ಪತ್ರೆಯಲ್ಲಿ ಸತ್ತಿದ್ದಾನೆಂದು ಊರಿಗೆ ತರುವಾಗ ಬದುಕಿದ ವ್ಯಕ್ತಿ: ಶಾಕ್ ಆದ ಹಾವೇರಿ ಜನರು