ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎತ್ತಿನ ಬಂಡಿಗೆ ಬೈಕ್ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡಗುರು ಕ್ರಾಸ್ ಭೀಕರ ಅಪಘಾತ ಸಂಭವಿಸಿದೆ
ಶಶಿಕುಮಾರ್ (25) ಆಕಾಶ್ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು, ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಹೊರಟಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಆಕಾಶ್ ಮತ್ತು ದರ್ಶನ್ ಅಂತಿಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಇನ್ನು ಶಶಿಕುಮಾರ್ ಹನುಮನಟ್ಟಿ ಹೋಟೆಲ್ ಅಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ರಾಣೆಬೆನ್ನೂರು ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.