ಬೆಂಗಳೂರು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಯತ್ನಿಸಿದ್ದಾರೆ.
ಕಿರುಚಿಕೊಳ್ಳಬಾರದು ಅಂತ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿ, ಕುತ್ತಿಗೆ ಹಿಚುಕಿ ಕೊಲೆಗೆ ಯತ್ನಿಸಿದ್ದಾರೆ. ಮನೆಯ ಅಕ್ಕಪಕ್ಕದವರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪತಿ ಸಿದ್ದಲಿಂಗಸ್ವಾಮಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದೀಗ ಅರೆ ಪ್ರಜ್ಞಾನಾವಸ್ಥೆಯಲ್ಲಿದ್ದಂತ ಮಂಜುಳಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಟವರ್ ಲೊಕೇಶನ್ ಮೂಲಕ ಬಂಧಿಸಿರುವುದಾಗಿ ತಿಳಿದು ಬಂದಿದೆ.
BREAKING: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಸಿಸಿಬಿಯಿಂದ 8 ಆರೋಪಿಗಳ ಬಂಧನ
BREAKING : ‘ಮುಡಾ’ ಅಕ್ರಮ ಹಗರಣ : ಲೋಕಾಯುಕ್ತ ಎಸ್.ಪಿ ಇಂದ ಐಜಿಪಿಗೆ ಅಂತಿಮ ತನಿಖಾ ವರದಿ ಸಲ್ಲಿಕೆ
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







