Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಸಾಲಗಾರರ ಕಿರುಕುಳ ಮುಂದುವರಿದರೆ `DC,SP’ಗಳೇ ಹೊಣೆ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
KARNATAKA

BIG NEWS : ರಾಜ್ಯದಲ್ಲಿ ಸಾಲಗಾರರ ಕಿರುಕುಳ ಮುಂದುವರಿದರೆ `DC,SP’ಗಳೇ ಹೊಣೆ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

By kannadanewsnow57

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ. ಈ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮೈಕ್ರೋ ಫೈನಾನ್ಸ್‌ ಕುರಿತು ಸಿಎಂ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ನಡೆಸಿದರು. ಈ ಸಭೆಯಲ್ಲಿ ಈ ಕೆಳಕಂಡ ಮಹತ್ವದ ಸೂಚನೆ ನೀಡಿದ್ದಾರೆ.

• ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

• ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು.

• ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.

• ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

• ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

• ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS: DCs SPs will be held responsible if harassment of borrowers continues in the state: Siddaramaiah
Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.