Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದು ಬರೀ ನೀರಲ್ಲ, ಅಮೃತ ; ದಿನಕ್ಕೆ ಒಂದು ಲೋಟ ಕುಡಿದ್ರೂ 300 ರೋಗ ಹತ್ತಿರಕ್ಕೂ ಸುಳಿಯೋಲ್ಲ

17/09/2025 10:15 PM

ಕರಾವಳಿ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಸಾಧ್ಯವಿಲ್ಲ: ಮೈತ್ರಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡ

17/09/2025 9:51 PM

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್

17/09/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಾ.3 ರಿಂದ ವಿಧಾನಮಂಡಲದ ಅಧಿವೇಶನ, ಮಾ.7 ರಂದು `ರಾಜ್ಯ ಬಜೆಟ್’ ಮಂಡನೆ | Karnataka Budget 2025
KARNATAKA

BIG NEWS : ಮಾ.3 ರಿಂದ ವಿಧಾನಮಂಡಲದ ಅಧಿವೇಶನ, ಮಾ.7 ರಂದು `ರಾಜ್ಯ ಬಜೆಟ್’ ಮಂಡನೆ | Karnataka Budget 2025

By kannadanewsnow5718/02/2025 5:35 AM

ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್‌ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದೇನೆ. ರೈತರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದರು.

ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ. ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು…

— Siddaramaiah (@siddaramaiah) February 17, 2025

ಮೆಟ್ರೋ ರೈಲಿನ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ ಪ್ರಸ್ತಾವನೆ ನೀಡುತ್ತದೆ. ಬೆಲೆ ನಿಗದಿ ಮಾಡುವ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿಯಲ್ಲಿ ಆಗಿರುವ ವಿಳಂಬವನ್ನು ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

BIG NEWS: ASSEMBLY SESSION TO BEGIN FROM MARCH 3 state budget to be presented on March 7 | Karnataka Budget 2025
Share. Facebook Twitter LinkedIn WhatsApp Email

Related Posts

ಕರಾವಳಿ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಸಾಧ್ಯವಿಲ್ಲ: ಮೈತ್ರಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡ

17/09/2025 9:51 PM3 Mins Read

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್

17/09/2025 9:47 PM1 Min Read

ಅಂಗವಿಕಲ ನಕಲಿ ಪ್ರಮಾಣ ಪತ್ರ ನೀಡಿ ವಂಚನೆ : ಬೆಂಗಳೂರು ಪೊಲೀಸರಿಂದ ಆರೋಗ್ಯ ಅಧಿಕಾರಿ ಅರೆಸ್ಟ್!

17/09/2025 9:38 PM1 Min Read
Recent News

ಇದು ಬರೀ ನೀರಲ್ಲ, ಅಮೃತ ; ದಿನಕ್ಕೆ ಒಂದು ಲೋಟ ಕುಡಿದ್ರೂ 300 ರೋಗ ಹತ್ತಿರಕ್ಕೂ ಸುಳಿಯೋಲ್ಲ

17/09/2025 10:15 PM

ಕರಾವಳಿ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಸಾಧ್ಯವಿಲ್ಲ: ಮೈತ್ರಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡ

17/09/2025 9:51 PM

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್

17/09/2025 9:47 PM
Health effects of Alarm

‘ಅಲಾರಾಂ’ ಶಬ್ದದಿಂದ ಹಾರ್ಟ್ ಆಟ್ಯಾಕ್ ಆಗುತ್ತೆ ; ಹೊಸ ಅಧ್ಯಯನದಿಂದ ಶಾಕಿಂಗ್ ಸಂಗತಿ ಬಹಿರಂಗ

17/09/2025 9:41 PM
State News
KARNATAKA

ಕರಾವಳಿ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಸಾಧ್ಯವಿಲ್ಲ: ಮೈತ್ರಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್ ಕೆಂಡ

By kannadanewsnow0917/09/2025 9:51 PM KARNATAKA 3 Mins Read

ಮಂಡ್ಯ : ಕರಾವಳಿಯ ಕಿಚ್ಚನ್ನು ಮಂಡ್ಯದಲ್ಲಿ ಹಚ್ಚಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಶಾಸಕ ಕೆ.ಎಂ.ಉದಯ್…

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅವಿಸ್ಮರಣೀಯ: ಶಾಸಕ ಕೆ.ಎಂ.ಉದಯ್

17/09/2025 9:47 PM

ಅಂಗವಿಕಲ ನಕಲಿ ಪ್ರಮಾಣ ಪತ್ರ ನೀಡಿ ವಂಚನೆ : ಬೆಂಗಳೂರು ಪೊಲೀಸರಿಂದ ಆರೋಗ್ಯ ಅಧಿಕಾರಿ ಅರೆಸ್ಟ್!

17/09/2025 9:38 PM

KSRTC ಚಾಲಕನ ಸಾವಿಗೆ ಕಂಬನಿ ಮಿಡಿದ ಸಚಿವ ರಾಮಲಿಂಗಾ ರೆಡ್ಡಿ; ಅವಲಂಬಿತರಿಗೆ ನೌಕರಿ, ಆರ್ಥಿಕ ಸೌಲಭ್ಯಕ್ಕೆ ಸೂಚನೆ

17/09/2025 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.