ಚಿಕ್ಕಮಗಳೂರು : ಕುಡಿಯಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅತ್ತೆಯನ್ನು ಹೊತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತಿಬೈಲು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಕುಡಿಯಬೇಡ ಎಂದಿದಕ್ಕೆ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಫಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಶಶಿಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಾಫಿ ತೋಟದ ಕೆಲಸಕ್ಕೆ ಎಂದು ಯಮುನಾ ಮಗಳ ಮನೆಗೆ ಹೋಗಿದ್ದಾರೆ. ಈ ವೇಳೆ ಕುಡಿಯಬೇಡ ಎಂದು ಅತ್ತೆಯ ಮುನ ಶಶಿಧರ್ ಗೆ ಬುದ್ಧಿ ಹೇಳಿದ್ದಾರೆ. ಕುಡಿದ ಮತ್ತಿನಲ್ಲಿ ಶಶಿಧರ್ ಸುತ್ತಿಗೆಯಿಂದ ಅತ್ತಿಗೆ ಯಮುನಾ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಮರಕ್ಕೆ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.