ಬೆಂಗಳೂರು : ತಡರಾತ್ರಿ ಬೆಂಗಳೂರಿನಲ್ಲಿ ಭೀಕರವಾದಂತಹ ಕೊಲೆ ನಡೆದಿದ್ದು ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಬಲಗೈ ಬಂಟನ ಒರ್ಬರ ಕೊಲೆಯಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ ಎಂದು ತಿಳಿದುಬಂದಿದೆ. ಬೆಂಗಳೂರಿನ ಗರುಡ ಮಾಲ್ ಬಳಿ ಬೈಕ್ ಅಡಗಟ್ಟಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಮದ್ಯ ರಾತ್ರಿ 1 ಗಂಟೆ ಸುಮಾರಿಗೆ ಲಾಂಗು ಮಚ್ಚುಗಳಿಂದ ಕೊಚ್ಚಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೋಯ್ಯುಷ್ಟ್ರಲ್ಲಿ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಆತನ ಸ್ನೇಹಿತನಿಗೂ ಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೇಳೆ ಬೌರಿಂಗ್ ಆಸ್ಪತ್ರೆಯಲ್ಲಿ ಬೆಂಬಲಿಗರ ಹೈಡ್ರಾಮಾ ನಡೆದಿದ್ದು ಆಸ್ಪತ್ರೆ ಮುಂದೆ ಸಾವಿರಾರು ಬೆಂಬಲಿಗರು ಆಸ್ಪತ್ರೆಗೆ ನುಗ್ಗುಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲಾಗಿದೆ. ಕೊಲೆಗೂ 5 ಗಂಟೆ ಮುನ್ನ ಹೈದರ್ ಅಲಿ ರಿಲ್ಸ್ ಮಾಡಿದ್ದ. ಟಗರು ಸಿನಿಮಾದ ಹಾಡನ್ನು ಎಡಿಟ್ ಮಾಡಿ ಹೈದರ್ ಅಲಿ ಪೋಸ್ಟ್ ಮಾಡಿದ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ ಎಂದು ತಿಳಿದು ಬಂದಿದೆ.
ಆನೆಪಾಳ್ಯ ನೀಲಸಂದ್ರ ಸುತ್ತಮುತ್ತಲು ಆತ ಹೆಸರು ಮಾಡಿದ್ದ. ಅಪಾರ ಬೆಂಬಲಿಗರನ್ನು ಸಹ ಹೊಂದಿದ್ದ ಹೋದಲ್ಲಿ ಬಂದಲ್ಲಿ ಈತನನ್ನು ಬೆಂಬಲಿಗರು ಮೇರೆಸುತ್ತಿದ್ದರು ಎಂದು ತಿಳಿದುಬಂದಿದೆ ಹೈದರ್ ಅಲಿ ಇನ್ಸ್ಟಾಗ್ರಾಮ್ ಫ್ಯಾನ್ ಪೇಜ್ ಕೂಡ ಕ್ರಿಯೇಟ್ ಮಾಡಿದ್ದಾನೆ. ಅಷ್ಟರಮಟ್ಟಿಗೆ ಹಿತ ಜನರೊಂದಿಗೆ ಹಾಗೂ ರಾಜಕೀಯ ನಾಯಕರಿಗೆ ಒಡನಾಟ ಇಟ್ಟುಕೊಂಡಿದ್ದ ಎನ್ನಲಾಗಿದೆ.