ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಖಂಡಿಸಿ ನಾಳೆ ಬಿಜೆಪಿಯಿಂದ ಮೈಸೂರು ಚಲೋ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ನೆಲದ ನೀರು, ಅನ್ನ, ಗಾಳಿ ಸೇವಿಸಿ ಕನ್ನಡದ ವಿರುದ್ಧ ಮಾತನಾಡುವುದು, ರಾಜ್ಯದ ವಿರುದ್ಧ ಪಿತೂರಿ ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬೆಳಗಾವಿ ಗಡಿಭಾಗದಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಘಟನೆ, ಬಸ್ ಸಂಚಾರ ಸ್ಥಗಿತ ಕುರಿತು ಪ್ರಶ್ನೆಗೆ ಅವರು ಉತ್ತರ ನೀಡಿದರು.
ನಮ್ಮ ನೆಲದಲ್ಲಿ ಇದ್ದುಕೊಂಡು ಕನ್ನಡಿಗರ ತೇಜೋವಧೆ ಮಾಡುವುದು ಅಕ್ಷಮ್ಯ. ಅನೇಕ ಕನ್ನಡಪರ ಹೋರಾಟಗಾರರ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದರ ವಿರುದ್ಧ ಕನ್ನಡಿಗರು ಧ್ವನಿ ಎತ್ತಬೇಕು. ಷಡ್ಯಂತ್ರ, ಪಿತೂರಿ ಮಾಡುವವರನ್ನು ಸರಕಾರ ಹತ್ತಿಕ್ಕಬೇಕಿದೆ ಎಂದು ಆಗ್ರಹಿಸಿದರು.
ಸರಕಾರದಿಂದ ದಾಂಧಲೆ ಮಾಡಿದವರನ್ನು ರಕ್ಷಿಸುವ ಕೆಲಸ..
ಕಾಂಗ್ರೆಸ್ ಶಾಸಕರ ಬೆಂಬಲಿಗನ ಹತ್ಯೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಈ ಕೊಲೆಗೆ ರಾಜ್ಯ ಸರಕಾರವೇ ಹೊಣೆ ಎಂದು ನುಡಿದರು.
ಉದಯಗಿರಿ ಘಟನೆ ಹಿನ್ನೆಲೆಯಲ್ಲಿ ನಾಳೆ ಮೈಸೂರು ಚಲೋ ನಡೆಯಲಿದೆ. ನಾನು ಮೈಸೂರಿಗೆ ತೆರಳಲಿದ್ದೇನೆ. ರಾಜ್ಯ ಸರಕಾರವು ಕಾನೂನು- ಸುವ್ಯವಸ್ಥೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಉದಯಗಿರಿ ಘಟನೆ, ಪೊಲೀಸ್ ಠಾಣೆಗೆ ಪುಡಾರಿಗಳು ನುಗ್ಗಿ ದಾಂಧಲೆ ಮಾಡಿದವರನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಆಕ್ಷೇಪಿಸಿದರು.
ದರೋಡೆ ಕೊಲೆಗಳು ನಡೆಯುತ್ತಿವೆ. ಬೆಂಗಳೂರು ಸುರಕ್ಷಿತವಾಗಿಲ್ಲ; ಇದೆಲ್ಲದಕ್ಕೂ ರಾಜ್ಯ ಸರಕಾರವೇ ಹೊಣೆ ಹೊರಬೇಕು ಎಂದು ತಿಳಿಸಿದರು. ಗೃಹ ಸಚಿವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ರಾಜೀನಾಮೆ ಕೊಡಬೇಕೇ? ಅಥವಾ ಕೊಡುತ್ತೇನೆ ಎಂಬ ಧಾಟಿಯಲ್ಲಿ ಮಾತನಾಡಿದ್ದಾರೆ. ಇದು ಅವಿವೇಕತನದ ಪರಮಾವಧಿ. ಕಾನೂನು- ಸುವ್ಯವಸ್ಥೆ ಕಾಪಾಡಿ ಅಭಿವೃದ್ಧಿ ಮಾಡಬೇಕೆಂದು ನಿಮಗೆ ರಾಜ್ಯದ ಜನರು ಆಶೀರ್ವಾದ ಮಾಡಿದ್ದಾರೆ. ಅದನ್ನು ಮಾಡದೇ ಈ ರೀತಿ ಹೇಳಿಕೆ ನೀಡಿದರೆ ದೇಶದ್ರೋಹಿಗಳು, ಕೊಲೆಗಡುಕರಿಗೆ ಆನೆಬಲ ಬಂದಂತಾಗುತ್ತದೆ ಎಂದು ತಿಳಿಸಿದರು.
BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war