ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ.
ವಿದ್ಯುತ್ ನಿರ್ಹವಣೆ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ತುಮಕೂರು ಹೊರ ವಲಯದಲ್ಲಿ ಬರುವ ಕೆಲವು ಹಳ್ಳಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಈ ಕೆಳಗಿನ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ ಆಗಲಿದೆ.
ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್ ಕುಂಟಮ್ಮನತೋಟ, ದಿಬ್ಬೂರು, ಬಿ.ಎಚ್. ಪಾಳ್ಯ, ಹಾರೋನಹಳ್ಳಿ ಹಾಗೂ ಹೊನ್ನೆನಹಳ್ಳಿಯಲ್ಲಿ ಫೆಬ್ರವರಿ 24 ಹಾಗೂ 27 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಆಣೆತೋಟ, ಜಗನ್ನಾಥನಗರ, ಶಾರದಾದೇವಿ ನಗರ, ಗಣೇಶನಗರ ಹಾಗೂ ನಿರ್ವಾಣಿ ಬಡಾವಣೆಯಲ್ಲಿ ಫೆಬ್ರವರಿ 28 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ನಿರ್ಹವಣೆ ಕಾಮಗಾರಿ ಕೆಲವೇ ಪ್ರದೇಶಗಳಿಗೆ ಸೀಮಿತಗೊಂಡಿರುವುದರಿಂದ ತುಮಕೂರು ನಗರ ಹಾಗೂ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
BIG NEWS: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವು