ಹುಬ್ಬಳ್ಳಿ : ಮನೆಯಲ್ಲಿ ಗ್ಯಾಸ್ ಲೀಕ್ ಆಗಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ರಾಜಸ್ಥಾನ ಮೂಲದ ಮೂವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಹಾಳ ಬಳಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ರಾಜಸ್ಥಾನ ಮೂಲದ ಸುಭಾಸ್, ಅಶೋಕ್, ಮಾಂಗಿಲಾಲ್ ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದು ವರ್ಷದಿಂದ ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿನ ಓಂ ಸಾಯಿ ಗ್ಯಾಸ್ ಏಜನ್ಸಿಯಲ್ಲಿ ಡಿಲೆವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ.
ತಾರಿಹಾಳ ತೋಟದ ಮನೆಯೊಂದರಲ್ಲಿ ಅಡುಗೆ ಮಾಡಲು ಹೋದ ಸಂದರ್ಭದಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಮಲಗಿದ್ದ ಇಬ್ಬರು ಕಾರ್ಮಿಕರು ಹಾಗೂ ಅಡುಗೆ ಮಾಡಲು ಹೋಗಿದ್ದ ಓರ್ವ ಕಾರ್ಮಿಕ ಸೇರಿ ಒಟ್ಟು ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.