Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

09/09/2025 4:22 PM

VIDEO : ನೇಪಾಳ ‘ಹಣಕಾಸು ಸಚಿವ’ನ ಬೆನ್ನಟ್ಟಿ ಬೀದಿಯಲ್ಲಿ ಥಳಿಸಿದ ಪ್ರತಿಭಟನಾಕಾರರು, ಶಾಕಿಂಗ್ ವಿಡಿಯೋ ವೈರಲ್

09/09/2025 4:20 PM

BREAKING: ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್

09/09/2025 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ
KARNATAKA

ಫೆ.28ರಂದು ಬೆಂಗಳೂರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ: ಬಿವೈ ವಿಜಯೇಂದ್ರ

By kannadanewsnow0925/02/2025 7:57 PM

ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದರು. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದು ಒತ್ತಾಯಿಸಿದರು.

ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಮೆಟ್ರೋ ಬೋಗಿಗಳನ್ನು ಹೆಚ್ಚಿಸಬೇಕು. ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಿ ಮಾರ್ಗೋಪಾಯಗಳನ್ನು ಚರ್ಚಿಸಬೇಕಿದೆ; ಅವೈಜ್ಞಾನಿಕ ಟನೆಲ್ ರಸ್ತೆ ಯೋಜನೆ ಕೈಬಿಡಬೇಕು ಎಂಬ ಕುರಿತು ಸಮಗ್ರ ಚರ್ಚೆ ಆಗಿದೆ ಎಂದು ತಿಳಿಸಿದರು.

ಬೆಂಗಳೂರು ಮಹಾನಗರದ ನಮ್ಮೆಲ್ಲ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ನೇತೃತ್ವದಲ್ಲಿ ಇವತ್ತು ಸಭೆ ನಡೆಸಿದ್ದೇವೆ. ಈಚೆಗೆ ರಾಜ್ಯ ಸರಕಾರವು ಮೆಟ್ರೋ ಪ್ರಯಾಣ ದರ ಏರಿಸಿದ್ದು, ಅದರ ವಿರುದ್ಧ ಮತ್ತು ದರ ಇಳಿಕೆಗೆ ಒತ್ತಾಯಿಸಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಲಾಗಿದೆ ಎಂದು ವಿವರಿಸಿದರು.

ಇ ಖಾತಾದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಗ್ರೇಟರ್ ಬೆಂಗಳೂರು ಎಂಬ ಕಥೆ ಹೇಳಿಕೊಂಡು ಬಿಬಿಎಂಪಿ ಚುನಾವಣೆ ಮುಂದೂಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರಕಾರವು ಬೆಂಗಳೂರಿನ ಉದ್ಧಾರದ ಕಥೆ ಹೇಳುತ್ತ ಚುನಾವಣೆ ಮುಂದೂಡುವ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಅವಕಾಶ ಕೊಡಬಾರದು. ಸರಕಾರವು ತಕ್ಷಣವೇ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವಿಷಯದಲ್ಲೂ ಚರ್ಚೆ ನಡೆದಿದೆ ಎಂದು ಹೇಳಿದರು.

ಮೆಟ್ರೋ ದರವನ್ನು ಕೇಂದ್ರ ಸರಕಾರ ಹೆಚ್ಚಿಸಿಲ್ಲ; ಈ ಕುರಿತು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ನಡೆದಿದೆ ಎಂದು ಆಕ್ಷೇಪಿಸಿದರು. ಆರ್.ಅಶೋಕ್ ಅವರು ಈ ಸಭೆಗೆ ಆದಷ್ಟು ಬರುವುದಾಗಿ ತಿಳಿಸಿದ್ದರು. ಅವರು ಬಜೆಟ್ ಕುರಿತ ಪೂರ್ವಭಾವಿ ಸಭೆ ಕರೆದಿದ್ದಾರೆ. ನಾವು ಕೂಡ ಆ ಸಭೆಗೆ ತೆರಳುತ್ತೇವೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ, ರವಿ ಸುಬ್ರಮಣ್ಯ, ಬೈರತಿ ಬಸವರಾಜ್, ಉದಯ ಗರುಡಾಚಾರ್, ಬೆಂಗಳೂರಿನ ಮೂರು ಜನ ಜಿಲ್ಲಾಧ್ಯಕ್ಷರು, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಇದ್ದರು.

Good News: ರಾಜ್ಯದಲ್ಲಿ ತಲೆ ಎತ್ತಲಿವೆ ‘7 ಕೌಶಲ್ಯ ತರಬೇತಿ ಕೇಂದ್ರ’

BIG NEWS: ತೀವ್ರಗೊಂಡ ‘NHM ನೌಕರ’ರ ಪ್ರತಿಭಟನೆ: ನಾಳೆಯಿಂದ ರಾಜ್ಯಾಧ್ಯಂತ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ | NHM Worker Protest

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

09/09/2025 4:22 PM1 Min Read

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಜಾಮೀನು ಮಂಜೂರು

09/09/2025 3:59 PM2 Mins Read

ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ: ವಾಕ್ ಮಾಡಲು ಅವಕಾಶ

09/09/2025 3:36 PM1 Min Read
Recent News

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

09/09/2025 4:22 PM

VIDEO : ನೇಪಾಳ ‘ಹಣಕಾಸು ಸಚಿವ’ನ ಬೆನ್ನಟ್ಟಿ ಬೀದಿಯಲ್ಲಿ ಥಳಿಸಿದ ಪ್ರತಿಭಟನಾಕಾರರು, ಶಾಕಿಂಗ್ ವಿಡಿಯೋ ವೈರಲ್

09/09/2025 4:20 PM

BREAKING: ನೇಪಾಳದಲ್ಲಿ ಹಿಂಸಾಚಾರ ಹಿನ್ನಲೆ: ದೆಹಲಿಯಿಂದ ಕಠ್ಮಂಡುಗೆ ತೆರಳಬೇಕಿದ್ದ ವಿಮಾನ ಹಾರಾಟ ಬಂದ್

09/09/2025 4:14 PM

ರೈಲ್ವೆಯಲ್ಲಿ 32 ಸಾವಿರ ಹುದ್ದೆಗಳಿಗೆ ನೇಮಕಾತಿ ; ಪರೀಕ್ಷೆ ದಿನಾಂಕ, ಮಾದರಿ ಸೇರಿ ಸಂಪೂರ್ಣ ವಿವರ ಇಲ್ಲಿದೆ!

09/09/2025 4:04 PM
State News
KARNATAKA

ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

By kannadanewsnow0909/09/2025 4:22 PM KARNATAKA 1 Min Read

ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ…

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಜಾಮೀನು ಮಂಜೂರು

09/09/2025 3:59 PM

ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ: ವಾಕ್ ಮಾಡಲು ಅವಕಾಶ

09/09/2025 3:36 PM

ಮದ್ದೂರು ಗಣೇಶ ಗಲಾಟೆ ಕೇಸ್: ಶಾಂತಿ ಸಭೆಗೆ ನಾವು ಹೋಗಲ್ಲವೆಂದ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್

09/09/2025 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.