Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಈ ಬಾರಿಯ ಬಿಗ್ ಬಾಸ್ ಸೀಸನ್-12ರ ವಿನ್ನರ್ ಇವ್ರೇ ನೋಡಿ : ಕುತೂಹಲ ಕೆರಳಿಸಿದ ವೈರಲ್ ಪೋಸ್ಟ್!

18/01/2026 3:25 PM

ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

18/01/2026 3:22 PM

BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ

18/01/2026 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `SSLC’ ಪಾಸಾದ ರೈತರ ಮಕ್ಕಳಿಗೆ ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ.!
KARNATAKA

GOOD NEWS : `SSLC’ ಪಾಸಾದ ರೈತರ ಮಕ್ಕಳಿಗೆ ಗುಡ್ ನ್ಯೂಸ್ : ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ.!

By kannadanewsnow5726/02/2025 8:07 AM

ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2025ರ ಮೇ 02 ರಿಂದ 2025 ರ ಫೆ.28 ರ ವರೆಗೆ ಒಟ್ಟು 10 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳ ಆಯ್ಕೆ ಗುರಿ

ಮಹಿಳೆಯರು 8, ಪುರುಷರು 16, ಪರಿಶಿಷ್ಟ ಜಾತಿ 03, ಪರಿಶಿಷ್ಟ ಪಂಗಡ 01 ಮತ್ತು ಇತರೆ 20 ಅಭ್ಯರ್ಥಿಗಳು ಸೇರಿ ಒಟ್ಟು 24 ಅಭ್ಯರ್ಥಿಗಳನ್ನು ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) ಆಯ್ಕೆ ಮಾಡುತ್ತಾರೆ.

ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು. ಇತರರಿಗೆ 18 ವರ್ಷದಿಂದ 30 ವರ್ಷದೊಳಗೆ ಹಾಗೂ ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿರಬೇಕು.

ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಹೊಂದಲು ಬಯಸುವ ಅಭ್ಯರ್ಥಿಯ ತಂದೆ-ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.

ಅರ್ಜಿಗಳನ್ನು ಮಾ.01 ರಿಂದ 31 ರ ವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಇವರ ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.

ಭರ್ತಿಮಾಡಿದ ಅರ್ಜಿಗಳನ್ನು ಏಪ್ರೀಲ್ 01 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಏಪ್ರೀಲ್ 08 ರಂದು ಬೆಳಿಗ್ಗೆ 11 ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ವಿಶೇಷ ಸೂಚನೆ

ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಮಿತಿಯು ಸರ್ಕಾರದ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಮೀಸಲಾತಿ ಮುಗಿದ ನಂತರ ಉಳಿಕೆ ಮೀಸಲಾತಿಗಳನ್ನು ಇತರೆ ಅಭ್ಯರ್ಥಿಗಳಿಗೆ ನೀಡಲಾಗುವುದು.

ಒಂದು ವೇಳೆ ಮೀಸಲಾದ ಸ್ಥಾನಗಳಿಗೆ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಸಾಮಾನ್ಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಮಹಿಳಾ ಮೀಸಲಾತಿ (ಶೇ.33)ಯನ್ನು ನಿಯಮಾನುಸಾರ ಪಾಲಿಸತಕ್ಕದ್ದು. ಮಹಿಳಾ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ಸ್ಥಾನಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೀಸಲಾತಿ ಕುರಿತು ಸರ್ಕಾರದ ಮೀಸಲಾತಿಗಳನ್ವಯ ಆಯ್ಕೆ ಸಮಿತಿ ನಿರ್ಧರಿಸಲಾಗುತ್ತದೆ.

ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈಗಾಗಲೇ ಇಲಾಖೆಯಲ್ಲಿ ರೈತ ಮಕ್ಕಳಿಗೆ ಕಾಯ್ದಿರಿಸಿರುವ ಗುರಿಗಳಿಗೆ ಹೆಚ್ಚುವರಿಯಾಗಿ ಸೇರ್ಪಡಿಸಲಾಗುವುದು. ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ, ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆಯು ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.

ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಾಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ ನಿರ್ವಹಿಸಲು ಸಾಧ್ಯವಾಗದಂತಹ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರ ಕಳುಹಿಸುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278588 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for children of farmers who have passed SSLC: Applications invited for horticulture training
Share. Facebook Twitter LinkedIn WhatsApp Email

Related Posts

BREAKING : ಈ ಬಾರಿಯ ಬಿಗ್ ಬಾಸ್ ಸೀಸನ್-12ರ ವಿನ್ನರ್ ಇವ್ರೇ ನೋಡಿ : ಕುತೂಹಲ ಕೆರಳಿಸಿದ ವೈರಲ್ ಪೋಸ್ಟ್!

18/01/2026 3:25 PM1 Min Read

ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

18/01/2026 3:22 PM1 Min Read

BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ

18/01/2026 3:16 PM2 Mins Read
Recent News

BREAKING : ಈ ಬಾರಿಯ ಬಿಗ್ ಬಾಸ್ ಸೀಸನ್-12ರ ವಿನ್ನರ್ ಇವ್ರೇ ನೋಡಿ : ಕುತೂಹಲ ಕೆರಳಿಸಿದ ವೈರಲ್ ಪೋಸ್ಟ್!

18/01/2026 3:25 PM

ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

18/01/2026 3:22 PM

BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ

18/01/2026 3:16 PM

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿನಿಂದ ಬಿದ್ದು ಬಾಲಕ ಸಾವು

18/01/2026 3:06 PM
State News
KARNATAKA

BREAKING : ಈ ಬಾರಿಯ ಬಿಗ್ ಬಾಸ್ ಸೀಸನ್-12ರ ವಿನ್ನರ್ ಇವ್ರೇ ನೋಡಿ : ಕುತೂಹಲ ಕೆರಳಿಸಿದ ವೈರಲ್ ಪೋಸ್ಟ್!

By kannadanewsnow0518/01/2026 3:25 PM KARNATAKA 1 Min Read

ಬೆಂಗಳೂರು : ಕಳೆದ 112 ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 12 ಇಂದಿಗೆ ತಾರಾಬಳಗದ ಅಂತಿಮ ಘಟ್ಟದೊಂದಿಗೆ ತನ್ನ…

ಈ ಬಾರಿ ಗಿಲ್ಲಿ ನಟ ಗೆಲ್ಲೋದು ಫಿಕ್ಸ್: ಬಿಗ್ ಬಾಸ್ 11 ವಿನ್ನರ್ ಹನುಮಂತು ಭವಿಷ್ಯ

18/01/2026 3:22 PM

BREAKING: ‘R ಕನ್ನಡ’ ವಾಹಿನಿಯ ಸಂಪಾದಕರ ಹುದ್ದೆಗೆ ‘ಶೋಭಾ ಮಳವಳ್ಳಿ’ ರಾಜೀನಾಮೆ

18/01/2026 3:16 PM

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿನಿಂದ ಬಿದ್ದು ಬಾಲಕ ಸಾವು

18/01/2026 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.